ಕಚ್ಚಾ ತೈಲ ಉತ್ಪಾದನೆ ಮೇಲೆ ನಿಯಂತ್ರಣಗಳನ್ನು ಹೇರಿರುವ ತೈಲ ರಫ್ತು ರಾಷ್ಟ್ರಗಳ ಒಕ್ಕೂಟ (ಒಪೆಕ್) ಇತ್ತೀಚೆಗೆ ಭಾರತದ ಮನವಿಯನ್ನು ಗಂಭೀರವಾಗಿ ಪರಿಗಣಿಸದ ಪರಿಣಾಮ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಮುಂದಾಗಿದೆ. ಕೇಂದ್ರ ಸರ್ಕಾರದ ಅಣತಿಯಂತೆ ಮೇ ತಿಂಗಳಲ್ಲಿ ಸೌದಿ ಅರೇಬಿಯಾದ ತೈಲ ಆಮದನ್ನು ಕಡಿತಗೊಳಿಸಲು ಭಾರತೀಯ ರಾಜ್ಯ ಸಂಸ್ಕರಣಾ ಘಟಕಗಳು ಯೋಜಿಸುತ್ತಿವೆ.
ಮಧ್ಯಪ್ರಾಚ್ಯದಿಂದ ಕಚ್ಚಾ ತೈಲದ ಮೇಲಿನ ಅವಲಂಬನೆಯನ್ನು ಕಡಿತಗೊಳಿಸಲು ಸರ್ಕಾರ ಚಿಂತಿಸಿದೆ ಎಂದು ಈ ಕುರಿತು ತಿಳಿದ ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೇ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸ್ಥಿರ ತೈಲ ಬೆಲೆಗಳ ಭರವಸೆಯನ್ನು ಈಡೇರಿಸಲು ಉತ್ಪಾದನಾ ನಿರ್ಬಂಧವನ್ನು ಸರಾಗಗೊಳಿಸುವಂತೆ ಒಪೆಕ್ ಅನ್ನು ಒತ್ತಾಯಿಸಿದರು. ಆದರೆ ಭಾರತದ ಮನವಿಯನ್ನು ಒಪೆಕ್ ಗಂಭೀರವಾಗಿ ಪರಿಗಣಿಸಲಿಲ್ಲ.
ಕಡಿಮೆ ಬೆಲೆಯ ತೈಲ ಬಳಸುವಂತೆ ಭಾರತಕ್ಕೆ ಸಲಹೆ ನೀಡಿದ್ದ ಸೌದಿ ಅರೇಬಿಯಾ
ಹೌದು, ಕಳೆದ ವರ್ಷ ಕಡಿಮೆ ಬೆಲೆಗೆ ಪಡೆದಿದ್ದ ಕಚ್ಚಾ ತೈಲವನ್ನು ಬಳಸುವಂತೆ ಸೌದಿ ಇಂಧನ ಸಚಿವ ಪ್ರಿನ್ಸ್ ಅಬ್ದುಲಜೀಜ್ ಬಿನ್ ಸಲ್ಮಾನ್ ಅವರು ಭಾರತಕ್ಕೆ ಸಲಹೆಯನ್ನು ನೀಡಿದ್ದರು. ತೈಲೋತ್ಪನ್ನಗಳ ಬೇಡಿಕೆಯಲ್ಲಿ ಇನ್ನಷ್ಟು ಗಟ್ಟಿಯಾದ ಸುಧಾರಣೆ ಕಂಡುಬರುವವರೆಗೂ ಉತ್ಪಾದನೆಯನ್ನು ಹೆಚ್ಚಿಸುವುದು ಬೇಡ ಎಂದು ಒಪೆಕ್ ನಿರ್ಧರಿಸಿದ ಬಳಿಕ, ಈ ಹೇಳಿಕೆಯನ್ನು ನೀಡಿತ್ತು.
ಶೇಕಡಾ 84ರಷ್ಟು ತೈಲ ಆಮದು
ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯಾದ ಭಾರತವು ತನ್ನ ತೈಲದ ಸುಮಾರು 84% ನಷ್ಟು ಆಮದು ಮಾಡಿಕೊಳ್ಳುತ್ತದೆ ಮತ್ತು ಅದರ ಬೇಡಿಕೆಯ ಮೂರರಲ್ಲಿ ಐದನೇ ಒಂದು ಭಾಗವನ್ನು ಪೂರೈಸಲು ಮಧ್ಯಪ್ರಾಚ್ಯ ಸರಬರಾಜುಗಳನ್ನು ಅವಲಂಬಿಸಿದೆ.
10.8 ಮಿಲಿಯನ್ ಬ್ಯಾರೆಲ್ ಕಡಿತಕ್ಕೆ ಚಿಂತನೆ
ಇಂಡಿಯನ್ ಆಯಿಲ್ ಕಾರ್ಪ್, ಭಾರತ್ ಪೆಟ್ರೋಲಿಯಂ ಕಾರ್ಪ್, ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪ್ ಮತ್ತು ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಮೇ ತಿಂಗಳಲ್ಲಿ ಸುಮಾರು 10.8 ಮಿಲಿಯನ್ ಬ್ಯಾರೆಲ್ಗಳನ್ನು ಕಡಿತಗೊಳಿಸಲು ತಯಾರಿ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.
ಸೌದಿಯಿಂದ ತಿಂಗಳಿಗೆ 14.8 ಮಿಲಿಯನ್ ಬ್ಯಾರೆಲ್ ತೈಲ ಆಮದು
ಭಾರತದಲ್ಲಿ ಒಟ್ಟಾರೆ 5 ಮಿಲಿಯನ್ ಬ್ಯಾರೆಲ್ಗಳ (ಬಿಪಿಡಿ) ಸಂಸ್ಕರಣಾ ಸಾಮರ್ಥ್ಯದಲ್ಲಿ ಶೇಕಡಾ 60ರಷ್ಟು ಭಾಗವನ್ನು ನಿಯಂತ್ರಿಸುವ ಸರ್ಕಾರಿ ಸ್ವಾಮ್ಯದ ಸಂಸ್ಕರಣಾಗಾರಗಳು ಒಟ್ಟಾಗಿ ಒಂದು ತಿಂಗಳಲ್ಲಿ ಸರಾಸರಿ 14.7 ರಿಂದ 14.8 ಮಿಲಿಯನ್ ಬ್ಯಾರೆಲ್ ಅನ್ನು ಸೌದಿಯಿಂದ ಆಮದು ಮಾಡಿಕೊಳ್ಳುತ್ತವೆ ಎಂದು ಮೂಲಗಳು ತಿಳಿಸಿವೆ.
ತೈಲ ಬೆಲೆ ಏರಿಕೆಗೆ ಕಡಿವಾಣ ಹಾಕದಿದ್ದರೆ ಹಣದುಬ್ಬರ ಏರಿಕೆ!
ತೈಲ ಬೆಲೆ ಏರಿಕೆಗೆ ಕಡಿವಾಣ ಹಾಕುವ ಮೂಲ ಉದ್ದೇಶದಿಂದಾಗಿ ಒಪೆಕ್ ರಾಷ್ಟ್ರಗಳಿಗೆ ಸವಾಲು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲವಾದಲ್ಲಿ ತೈಲ ಬೆಲೆ ಹೆಚ್ಚಳದ ಜೊತೆಗೆ ಇತರೆ ಆಹಾರ ಪದಾರ್ಥಗಳ ಬೆಲೆಯು ಹೆಚ್ಚಾಗಿ ಹಣದುಬ್ಬರ ಏರಿಕೆಗೆ ದಾರಿ ಮಾಡಿಕೊಡುತ್ತದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications