ದೇಶದ ಒಟ್ಟಾರೆ ಆಹಾರ ಭದ್ರತೆಯನ್ನು ನಿರ್ವಹಿಸಲು ಸರ್ಕಾರವು ಗೋಧಿ ರಫ್ತನ್ನು ಈ ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಿದೆ. ದೇಶದಲ್ಲಿ ಆಹಾರ ಹಣದುಬ್ಬರವನ್ನು ನಿಯಂತ್ರಣಕ್ಕೆ ತರುವ ಪ್ರಯತ್ನದಲ್ಲಿ ಸರ್ಕಾರವು "ನಿಷೇಧಿತ" ವರ್ಗದ ಅಡಿಯಲ್ಲಿ ಗೋಧಿ ರಫ್ತನ್ನು ತಂದಿದೆ.
ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ (ಡಿಜಿಎಫ್ಟಿ) ಶುಕ್ರವಾರ ಸಂಜೆ ಈ ಬಗ್ಗೆ ಆದೇಶ ಹೊರಡಿಸಿದೆ. ಮೇ ಅಥವಾ ಅದಕ್ಕೂ ಮೊದಲು ಐಎಲ್ಒಸಿ ಅಥವಾ ರಫ್ತಿನ ಒಪ್ಪಂದ ನಡೆದಿದ್ದರೆ ಮಾತ್ರ ಮೇ 13ರ ಒಳಗೆ ರಫ್ತಿಗೆ ಅವಕಾಶ ನೀಡಲಾಗುವುದು. ಇಲ್ಲವಾದರೆ ಗೋಧಿ ರಫ್ತಿಗೆ ಅವಕಾಶವಿಲ್ಲ ಎಂದು ಅಧಿಸೂಚನೆಯಲ್ಲಿ ಉಲ್ಲೇಖ ಮಾಡಲಾಗಿದೆ.
ಇತರ ದೇಶಗಳಿಗೆ ತಮ್ಮ ಆಹಾರ ಭದ್ರತೆ ಅಗತ್ಯಗಳನ್ನು ಪೂರೈಸಲು ಮತ್ತು ಅವರ ಸರ್ಕಾರಗಳ ಕೋರಿಕೆಯ ಆಧಾರದ ಮೇಲೆ ಕೇಂದ್ರ ಸರ್ಕಾರವು ನೀಡುವ ಅನುಮತಿಯ ಆಧಾರದ ಮೇಲೆ ರಫ್ತು ಮಾಡಲು ಸಹ ಅನುಮತಿಸಲಾಗುವುದು ಎಂದು ಕೂಡಾ ಉಲ್ಲೇಖಿಸಲಾಗಿದೆ.

ಒಂಬತ್ತು ದೇಶಗಳಿಗೆ ವ್ಯಾಪಾರ ನಿಯೋಗ
ಈ ನಡುವೆ 2022-23ರಲ್ಲಿ 10 ಮಿಲಿಯನ್ ಟನ್ ಧಾನ್ಯವನ್ನು ರಫ್ತು ಮಾಡುವ ಗುರಿಯನ್ನು ಹೊಂದಿರುವುದರಿಂದ ಗೋಧಿ ಸಾಗಣೆಯನ್ನು ಹೆಚ್ಚಿಸುವ ಸಾಧ್ಯತೆಗಳನ್ನು ಪರಿಶೀಲನೆ ಮಾಡಲು ಭಾರತವು ಮೊರಾಕೊ, ಟುನೀಶಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಒಂಬತ್ತು ದೇಶಗಳಿಗೆ ವ್ಯಾಪಾರ ನಿಯೋಗಗಳನ್ನು ಕಳುಹಿಸಿದೆ.
ವಾಣಿಜ್ಯ ಸಚಿವಾಲಯವು ವಾಣಿಜ್ಯ, ಹಡಗು ಮತ್ತು ರೈಲ್ವೆ ಸೇರಿದಂತೆ ವಿವಿಧ ಸಚಿವಾಲಯಗಳ ಪ್ರತಿನಿಧಿಗಳನ್ನು ಒಳಗೊಂಡ ಗೋಧಿ ರಫ್ತಿನ ಕಾರ್ಯಪಡೆಯನ್ನು ಸ್ಥಾಪಿಸಿದೆ. ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಈ ಕಾರ್ಯಪಡೆ ಬರಲಿದೆ.
ಜಾಗತಿಕ ಮಾರುಕಟ್ಟೆಗಳಲ್ಲಿ ಭಾರತೀಯ ಗೋಧಿಯ ಬೇಡಿಕೆಯಲ್ಲಿ ಏರಿಕೆ ಕಂಡುಬಂದಿದೆ. ಆದರೆ ಗೋಧಿ ಉತ್ಪಾದನೆ ಕಳೆದ ವರ್ಷಕ್ಕಿಂತ ಕಡಿಮೆಯಾಗಿದೆ. ಈಗಾಗಲೇ ಭಾರತದಲ್ಲಿ ಗೋಧಿಗೆ ಅಧಿಕ ಬೇಡಿಕೆ ಇದೆ. ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ ಅಂದಾಜಿನ ಪ್ರಕಾರ, ಭಾರತವು 2021-22ರಲ್ಲಿ 7 ಮಿಲಿಯನ್ ಟನ್ ಗೋಧಿಯನ್ನು ರಫ್ತು ಮಾಡಿದೆ, ಇದರ ಮೌಲ್ಯ ಯುಎಸ್ಡಿ 2.05 ಶತಕೋಟಿ ಆಗಿದೆ. ಒಟ್ಟು ಸಾಗಣೆಯಲ್ಲಿ, ಕಳೆದ ಹಣಕಾಸು ವರ್ಷದಲ್ಲಿ ಸುಮಾರು 50 ಪ್ರತಿಶತ ಗೋಧಿಯನ್ನು ಬಾಂಗ್ಲಾದೇಶಕ್ಕೆ ರಫ್ತು ಮಾಡಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications