ಇರಾಕ್ನ ಬಾಗ್ದಾದ್ನಲ್ಲಿ ಇರಾನ್ ಸೇನಾಧಿಕಾರಿ ಹತ್ಯೆಯ ಬಳಿಕ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದೆ. ಈ ಹಿನ್ನೆಲೆಯಲ್ಲಿ ಭಾರತದ ಬಾಸ್ಮತಿ ಅಕ್ಕಿಯನ್ನು ರಫ್ತು ಮಾಡದಂತೆ ತಡೆ ಹಿಡಿಯುವ ಸಾಧ್ಯತೆ ಇದೆ.
ಭಾರತದಿಂದ ಬಾಸ್ಮತಿ ಅಕ್ಕಿಯನ್ನು ಖರೀದಿಸಿಸುವ ಪ್ರಮುಖ ರಾಷ್ಟ್ರಗಳಲ್ಲಿ ಇರಾನ್ ಕೂಡ ಒಂದಾಗಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇರಾನ್ಗೆ ಬಾಸ್ಮತಿ ಅಕ್ಕಿಯನ್ನು ರಫ್ತು ಮಾಡಲು ಸಾಧ್ಯವಿಲ್ಲ. ಸದ್ಯದ ಪರಿಸ್ಥಿತಿಯು ತಿಳಿಯಾಗುವವರೆಗೂ ರಫ್ತು ಬೇಡಿಕೆ ಸ್ವೀಕರಿಸಬೇಡಿ ಎಂದು ಅಖಿಲ ಭಾರತ ಅಕ್ಕಿ ರಫ್ತುದಾರರ ಸಂಘ(ಎಐಆರ್ಎಇ) ತನ್ನ ಸದಸ್ಯರಿಗೆ ಮನವಿ ಮಾಡಿದೆ.

''ಈಗಿರುವ ಪರಿಸ್ಥಿತಿಯಲ್ಲಿ ಯಾವುದೇ ಸಾಗಾಣಿಕೆ ಪಾವತಿ ಹಲವಾರು ತಿಂಗಳು ವಿಳಂಭವಾಗುವುದು ಖಚಿತ. ಬಾಸ್ಮತಿ ಅಕ್ಕಿ ರಫ್ತು ಸ್ಥಗಿತಗೊಂಡರೆ ದೇಶದಲ್ಲಿನ ಸಂಗ್ರಹ ಹೆಚ್ಚಳಗೊಳ್ಳಲಿದೆ. ಆದ್ದರಿಂದ ಬೆಲೆ ಅಗ್ಗವಾಗಿ ಬೆಳೆಗಾರರ ಆದಾಯಕ್ಕೆ ಹೊಡೆತ ಬೀಳಲಿದೆ'' ಎಂದು ಎಐಆರ್ಎಇ ಅಧ್ಷಕ್ಷ ಎನ್.ಆರ್. ಗುಪ್ತಾ ಹೇಳಿದ್ದಾರೆ.
ಇರಾನ್ ವಿರುದ್ಧ ಅಮೆರಿಕಾ ಆರ್ಥಿಕ ದಿಗ್ಬಂಧನದ ಕಾರಣಕ್ಕೆ ಹಿಂದಿನ ವರ್ಷ ರಫ್ತಿಗೆ ಸಂಬಂಧಿಸಿದಂತೆ 900 ಕೋಟಿ ಪಾವತಿ ಬಾಕಿ ಉಳಿದಿದೆ. ಡಿಸೆಂಬರ್ನಲ್ಲಿ ಇರಾನ್ ದೇಶವು ಭಾರತದಿಂದ 2 ಲಕ್ಷ ಟನ್ ಬಾಸ್ಮತಿಗಾಗಿ ಹೊಸ ಟೆಂಡರ್ ತೆರೆದಿದ್ದ ಹಿನ್ನೆಲೆ ಭಾರತದ ಅಕ್ಕಿ ರಫ್ತುದಾರರು ವ್ಯಾಪಾರದಲ್ಲಿ ವೇಗ ಕಾಣಬಹುದೆಂದು ನಿರೀಕ್ಷಿಸಿದ್ದರು.
ದೇಶದ ಬಾಸ್ಮತಿ ಅಕ್ಕಿಗೆ ಇರಾನ್ ಪ್ರಮುಖ ರಫ್ತು ದೇಶವಾಗಿದೆ. ಒಟ್ಟು ರಫ್ತಿನಲ್ಲಿ ಮೂರನೇ ಒಂದು ಭಾಗಕ್ಕಿಂತ ಹೆಚ್ಚಿನದನ್ನು ಇರಾನ್ ಖರೀದಿಸುತ್ತದೆ. ಆದರೆ ಈಗ ರಫ್ತಿಗೆ ತಡೆ ಬೀಳುವ ಸಾಧ್ಯತೆ ಹಿನ್ನೆಲೆ ಬಾಸ್ಮತಿ ವ್ಯಾಪಾರಕ್ಕೆ ತೀವ್ರ ಹೊಡೆತ ಬಿದ್ದಿದೆ.
More From GoodReturns

America-Israel, Iran Conflict: ಮಧ್ಯಪ್ರಾಚ್ಯದಲ್ಲಿ ಸಂಘರ್ಷ ತೀವ್ರ; ತುರ್ತು ಕದನ ವಿರಾಮಕ್ಕೆ ಚೀನಾ ಒತ್ತಾಯ

India Oil: ಇಸ್ರೇಲ್, ಯುಎಸ್ ಮತ್ತು ಇರಾನ್ ನಡುವೆ ವಾರ್! ಭಾರತದ ಕಚ್ಚಾ ತೈಲದ ಮೇಲೆ ಪರಿಣಾಮ ಬೀರಿದ್ದು ಹೇಗೆ?

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

Petrol-Diesel Price: ಏರಿಕೆಯಾಗುವುದಿಲ್ಲ ಪೆಟ್ರೋಲ್, ಡೀಸೆಲ್ ಬೆಲೆ; ಭಾರತದ ಇಂಧನ ಪೂರೈಕೆ ಬಗ್ಗೆ ಸರ್ಕಾರ ಹೇಳಿದ್ದೇನು?

Petrol-Diesel Price: ಮಧ್ಯಪ್ರಾಚ್ಯದ ಸಂಘರ್ಷ; ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಾ?

FIFA World Cup 2026: ಅಮೆರಿಕ ನೇತೃತ್ವದ ಫಿಫಾ ವಿಶ್ವಕಪ್ನಲ್ಲಿ ಇರಾನ್ ಭಾಗವಹಿಸುತ್ತಾ? ಇಲ್ಲಿದೆ ಮಾಹಿತಿ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications