ದೇಶದ ಅತಿ ದೊಡ್ಡ ಬೊಂಬೆಗಳ ಕ್ಲಸ್ಟರ್ ಕೊಪ್ಪಳದಲ್ಲಿ ಆರಂಭವಾಗಲು ಎಲ್ಲ ಸಿದ್ಧತೆ ನಡೆದಿದೆ. ಬೊಂಬೆಗಳಿಗೆ ಇದು ದೇಶದಲ್ಲಿ ಮೂರನೇ ಅತಿ ದೊಡ್ಡ ಮಾರ್ಕೆಟ್ ಆಗಿದ್ದು, ಅಂದಾಜು 1200 ಕೋಟಿ ರುಪಾಯಿ ಮಾರಾಟ ಆಗುವ ಅಂದಾಜು ಮಾಡಲಾಗಿದೆ. ಈ ಬಗ್ಗೆ ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ವರದಿ ಆಗಿದೆ.
ಭಾರತದ ಮೊದಲ ಏರೋಸ್ಪೇಸ್ ವಿಶೇಷ ಆರ್ಥಿಕ ವಲಯವನ್ನು (SEZ) ಬೆಳಗಾವಿ ಜಿಲ್ಲೆಯಲ್ಲಿ ಸ್ಥಾಪಿಸಿದ Aequs ಏರೋಸ್ಪೇಸ್ ಕಂಪೆನಿಯೇ ಕೊಪ್ಪಳದಲ್ಲಿ 400 ಎಕರೆಗೂ ಹೆಚ್ಚು ವ್ಯಾಪ್ತಿಯಲ್ಲಿ ಬೊಂಬೆಗಳಿಗೆ SEZ ಅಭಿವೃದ್ಧಿ ಪಡಿಸುತ್ತಿದೆ.
ಕರ್ನಾಟಕ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಮಾತನಾಡಿ, ಬೊಂಬೆಗಳ ಕ್ಲಸ್ಟರ್ ಗೆ 5 ಸಾವಿರ ಕೋಟಿ ರುಪಾಯಿ ಬಂಡವಾಳ ಆಕರ್ಷಿಸುವ ಭರವಸೆ ಇದೆ. ಇದರಿಂದ ಮುಂದಿನ ಐದು ವರ್ಷದಲ್ಲಿ ನಲವತ್ತು ಸಾವಿರ ಉದ್ಯೋಗ ಸೃಷ್ಟಿ ಆಗಬಹುದು. ನವೆಂಬರ್ ನಿಂದ ಈ ಕ್ಲಸ್ಟರ್ ಕಾರ್ಯಾರಂಭ ಮಾಡಲಿದೆ ಎಂದಿದ್ದಾರೆ.
ಕೊಪ್ಪಳಕ್ಕೆ ಜಾಗತಿಕ ಮಟ್ಟದ ಬೊಂಬೆ ತಯಾರಕರನ್ನು ಆಕರ್ಷಿಸುವ ಸಲುವಾಗಿ ಸರ್ಕಾರದಿಂದ ವರ್ಚುವಲ್ ಹೂಡಿಕೆದಾರರ ಸಭೆಯನ್ನು ಕಳೆದ ಸೋಮವಾರ ನಡೆಸಲಾಗಿದೆ. ಇದರಲ್ಲಿ ಜಾಗತಿಕ ಮಟ್ಟದ ಹಲವಾರು ಬೊಂಬೆ ತಯಾರಕರು ಭಾಗವಹಿಸಿದ್ದರು ಎಂದು ಗೊತ್ತಾಗಿದೆ.

ಬೊಂಬೆಗಳ ಕ್ಲಸ್ಟರ್ ಅಭಿವೃದ್ಧಿಗೆ ಬೇಕಾದ ಎಲ್ಲ ವ್ಯವಸ್ಥೆಯನ್ನು ಸರ್ಕಾರಿ ಸೃಷ್ಟಿಸಿದೆ. ಬೆಂಗಳೂರು, ಧಾರವಾಡ, ತುಮಕೂರು ಹಾಗೂ ಮೈಸೂರಿನಲ್ಲಿ ಟೂಲ್ ಮ್ಯಾನುಫ್ಯಾಕ್ಚರಿಂಗ್ ಹಾಗೂ ಪ್ರಿಸಿಷಿನ್ ಇಂಜಿನಿಯರಿಂಗ್, ಪಾಲಿಮರ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಗಳನ್ನು ಆರಂಭಿಸಲು ಸರ್ಕಾರ ಬೆಂಬಲ ನೀಡಿದೆ.
ರಚನೆ ಸಾಮರ್ಥ್ಯ, ಪರೀಕ್ಷೆ ಪ್ರಮಾಣ ಪತ್ರಗಳನ್ನು ಒದಗಿಸುವ ಸಂಸ್ಥೆಗಳನ್ನು ಬೆಂಗಳೂರು, ಧಾರವಾಡ ಹಾಗೂ ಕೊಪ್ಪಳದಲ್ಲಿ ಸ್ಥಾಪಿಸಲಾಗುವುದು. 2023ರ ಹೊತ್ತಿಗೆ ಬೊಂಬೆ ಕೈಗಾರಿಕೆ 2300 ಕೋಟಿ ವ್ಯವಹಾರವಾಗಿ ಬೆಳೆಯುವ ನಿರೀಕ್ಷೆ ಇದೆ. ಅಂದ ಹಾಗೆ ಭಾರತದಲ್ಲಿ ಮೊದಲ ಬೊಂಬೆ ಉತ್ಪಾದನೆ ಕ್ಲಸ್ಟರ್ ಆಗಿ ಗುರುತಿಸಿಕೊಳ್ಳಲಿದೆ ಕೊಪ್ಪಳ ಎಂದು ಗುಪ್ತಾ ಹೇಳಿದ್ದಾರೆ.
More From GoodReturns

Ugadi 2026: ಯುಗಾದಿ 2026 ಯಾವಾಗ? ಹಬ್ಬದ ಮಹತ್ವ, ಆಚರಣೆಗಳು ಮತ್ತು ಸಂಪ್ರದಾಯಗಳು

Indane cylinder: ಇಂಡೇನ್ ಸಿಲಿಂಡರ್ ಬುಕಿಂಗ್ ಈಗ ಸುಲಭ; ವಾಟ್ಸಾಪ್ ಮೂಲಕ ಬುಕ್ ಮಾಡೋದೇಗೆ ತಿಳಿಯಿರಿ

Eid-ul-Fitr 2026: ಭಾರತದಲ್ಲಿ ರಂಜಾನ್ ಹಬ್ಬ ಯಾವಾಗ? ಇದೇ ದಿನ ಕಾಣಿಸಲಿದೆ ಚಂದ್ರ

Bidadi Township: ಬಿಡದಿ ಟೌನ್ಶಿಪ್ ಯೋಜನೆ; 7,000 ಎಕರೆಗೂ ಅಧಿಕ ಭೂಸ್ವಾಧೀನಕ್ಕೆ ಸರ್ಕಾರ ಸಿದ್ಧ

Ugadi Special Buses: ಯುಗಾದಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ನ್ಯೂಸ್…KSRTC 2,000 ಹೆಚ್ಚುವರಿ ಬಸ್ಗಳ ವ್ಯವಸ್ಥೆ

Karnataka Weather: ಬಿಸಿಲಲ್ಲಿ ಬೆಂದು ಹೋಗಿರುವ ಈ ಪ್ರದೇಶಗಳಲ್ಲಿ ಮಳೆ ಸಾಧ್ಯತೆ; ಎಲ್ಲಿ ತಿಳಿಯಿರಿ

100 ಕೋಟಿ ದಾಟಿದ ಮಲೆ ಮಹದೇಶ್ವರ ದೇವಸ್ಥಾನದ ಆದಾಯ...ಕರ್ನಾಟಕದ ಎರಡನೇ ಅತಿ ಹೆಚ್ಚು ಆದಾಯದ ದೇವಾಲಯ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Karnataka Weather: ಅಯ್ಯೋ, ಎಂಥಾ ಬಿಸಿಲು? ಜನರೇ ಹೊರಹೋಗುವ ಮುನ್ನ ಎಚ್ಚರ

Egg Price Karnataka: ಕೋಳಿ ಮೊಟ್ಟೆ ದರ 7 ರಿಂದ 4 ರೂ.ವರೆಗೆ ಇಳಿಕೆ; ಕೋಳಿ ಸಾಕಾಣಿಕಾರರಿಗೆ ಟೆನ್ಶನ್

Karnataka Ration Card: ಪಡಿತರ ಚೀಟಿ ಪಡೆಯಲು ದೊಡ್ಡ ಬದಲಾವಣೆ.. ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚುವ ಸಾಧ್ಯತೆ



Click it and Unblock the Notifications