ಕೊರೊನಾವೈರಸ್ ವಿಶ್ವದಾದ್ಯಂತ ಆರ್ಥಿಕ ವ್ಯವಸ್ಥೆಯ ಮೇಲೆ ಭಾರೀ ಪರಿಣಾಮ ಬೀರಿದ್ದು, ಬಲಿಷ್ಟ ಅರ್ಥವ್ಯವಸ್ಥೆಗಳೇ ತತ್ತರಿಸಿ ಹೋಗಿವೆ. ಆದರೆ ಈ ಎಲ್ಲಾ ಸಮಸ್ಯೆಗಳು ಮುಗಿದ ಮೇಲೆ ಭಾರತದ ಐಟಿ ವಲಯ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ, ಆಕ್ಸಿಲರ್ ವೆಂಚುರ್ಸ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್ ಹೇಳಿದ್ದಾರೆ.
ಸದ್ಯ ಎಲ್ಲಾ ಉದ್ಯಮಗಳ ಮೇಲೆ ಲಾಕ್ಡೌನ್ ಪರಿಣಾಮ ಬೀರಿದ್ದು, ಐಟಿ ವಲಯಕ್ಕೂ ಇದರ ಬಿಸಿ ತಟ್ಟಿದೆ. ಆದರೆ ಇದು ಕೇವಲ ತಾತ್ಕಾಲಿಕವಾಗಿದ್ದು, ಕೊರೊನಾ ಸಮಸ್ಯೆ ಮುಗಿದ ಮೇಲೆ ಭಾರತದ ಐಟಿ ಉದ್ಯಮ ಹಿಂದಿಗಿಂತಲೂ ಬಲಿಷ್ಟವಾಗಿ ಬೆಳೆಯಲಿದೆ ಎಂದಿದ್ದಾರೆ.

ಸದ್ಯ ಐಟಿ ಮತ್ತು ಐಟಿಇಎಸ್ ಎರಡೂ ವಲಯಗಳಿಗೆ ತೀವ್ರ ಹೊಡೆತ ಬಿದ್ದಿದೆ. ಆದರೆ ಅವರು ನಿರ್ಮಾಣಮಾಡಿಕೊಂಡಿರುವ ಸಂಬಂಧ ಬಲಿಷ್ಠವಾಗಿದ್ದು ಆರ್ಥಿಕ ಪುನಶ್ಚೇತನಕ್ಕೆ ಇದು ಸಹಾಯವಾಗಲಿದೆ ಎಂದರು.
ಐಟಿ ಮತ್ತು ಐಟಿಇಎಸ್ ವಲಯಗಳು ಜಗತ್ತಿನಲ್ಲಿ ಪ್ರಮುಖ 20 ಕಂಪೆನಿಗಳ ಜೊತೆ ಕೆಲಸ ಮಾಡುತ್ತಿದ್ದು ಪ್ರತಿಯೊಬ್ಬರೂ ಸದ್ಯ ಆದಾಯದಲ್ಲಿ ಕುಸಿತ ಕಾಣುತ್ತಿದ್ದಾರೆ. ಪ್ರವಾಸ ಮತ್ತು ಹೊಟೇಲ್ ಉದ್ಯಮಕ್ಕೆ ತೀವ್ರ ಹೊಡೆತ ಬಿದ್ದಿದೆ. ಇದು ಐಟಿ ವಲಯಗಳಿಗೂ ವರ್ಗಾವಣೆಯಾಗಿದ್ದು ಅವುಗಳಲ್ಲಿ ಕೂಡ ಆದಾಯ ಕುಸಿತವಾಗಿದೆ ಎಂದರು.
''ನಾವು 1980 ರಲ್ಲಿ 160 ಬಿಲಿಯನ್ ಡಾಲರ್ ಆರ್ಥಿಕತೆಯಾಗಿದ್ದೇವು ಮತ್ತು ಇಂದು ನಾವು 2.7 ಟ್ರಿಲಿಯನ್ ಆರ್ಥಿಕತೆಯಾಗಿದ್ದೇವೆ. ಅಲ್ಲಿಂದ ನಮ್ಮನ್ನು ಇಲ್ಲಿಗೆ ಕರೆದೊಯ್ಯುವ ಎಲ್ಲವೂ ಇನ್ನೂ ನಿಜ, ಏನೂ ಬದಲಾಗಿಲ್ಲ. ಆರ್ಥಿಕತೆ ಪುನರ್ನಿರ್ಮಾಣ ಮಾಡಲು ನಾವು ಒಟ್ಟಾಗಿ ಕೆಲಸ ಮಾಡಬೇಕು ಮತ್ತು ನಾವು ಅದನ್ನು ಮಾಡಿದರೆ, ನಾವು ಯಶಸ್ವಿಯಾಗುತ್ತೇವೆ. ವಿನಾಶಗೊಂಡ ಜರ್ಮನಿ ಮತ್ತು ಜಪಾನ್ ಆರ್ಥಿಕತೆ ಮತ್ತೆ ಪುಟಿದೆದ್ದುದ್ದನ್ನು ನಾವು ನೋಡಿದ್ದೇವೆ "ಎಂದು ಅವರು ಆಶಾದಾಯಕವಾಗಿ ಮಾತನ್ನು ಹೇಳುವ ಜೊತೆಗೆ " ಇಂದಿನ ಯುವಕರು ಆರ್ಥಿಕತೆಯನ್ನು ಪುನರ್ನಿರ್ಮಿಸುತ್ತಾರೆ ಎಂದು ನಂಬುತ್ತೇನೆ. ಅದು ನನಗೆ ಆತ್ಮವಿಶ್ವಾಸವನ್ನು ನೀಡುತ್ತದೆ "ಎಂದು ಅವರು ಹೇಳಿದರು.
More From GoodReturns

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications