ಇತ್ತೀಚೆಗಷ್ಟೇ ಭಾರೀ ಸುದ್ದಿಗೆ ಕಾರಣವಾಗಿದ್ದ ಭಾರತದ ಶ್ರೀಮಂತ ಕುಟುಂಬ ಮುಕೇಶ್ ಅಂಬಾನಿಯ ಭವಿಷ್ಯದ ಯೋಜನೆ ವಿಶ್ವದ ಅತಿದೊಡ್ಡ ಮೃಗಾಲಯ ಸ್ಥಾಪನೆಯು ಈಗ ವಿವಾದಕ್ಕೆ ಕಾರಣವಾಗಿದೆ.
ಬ್ಲೂಮ್ಬರ್ಗ್ ವರದಿಯ ಪ್ರಕಾರ, ಮೃಗಾಲಯವನ್ನು ಅಂಬಾನಿ ತನ್ನ ತವರು ರಾಜ್ಯವಾದ ಗುಜರಾತ್ನಲ್ಲಿ ನಿರ್ಮಿಸುತ್ತಿದ್ದು, ಇದು 2023 ರಲ್ಲಿ ತೆರೆಯುವ ನಿರೀಕ್ಷೆಯಿದೆ.
168 ಬಿಲಿಯನ್ ಡಾಲರ್ಗೂ ಹೆಚ್ಚಿನ ಮೌಲ್ಯದ ರಿಲಯನ್ಸ್ ಇಂಡಸ್ಟ್ರೀಸ್ ಇದೀಗ ವಿಶ್ವದ ಅತಿದೊಡ್ಡ ಮೃಗಾಲಯ ಸ್ಥಾಪಿಸುವ ಯೋಜನೆಯು ವಿವಾದವನ್ನು ಹುಟ್ಟುಹಾಕಿದೆ. ಗುಜರಾತ್ನ ಜಾಮ್ನಗರದಲ್ಲಿ 280 ಎಕರೆ ಪ್ರದೇಶದಲ್ಲಿ ಈ ಪ್ರಾಣಿಧಾಮ ನಿರ್ಮಿಸಲು ಅಂಬಾನಿ ಕುಟುಂಬ ಯೋಜಿಸಿದೆ ಎಂದು ವೀಕ್ ಮ್ಯಾಗ್ಜೀನ್ ವರದಿ ಮಾಡಿದೆ.

ಬಿಜಿನೆಸ್ ಇನ್ಸೈಡರ್ ಪ್ರಕಾರ ಈ ಬೃಹತ್ ಯೋಜನೆಯ ಮುಂದಾಳತ್ವವನ್ನು ಮುಕೇಶ್ ಅಂಬಾನಿ ಮಗ ಅನಂತ್ ಅಂಬಾನಿ ವಹಿಸಲಿದ್ದು, ಇವರು ರಿಲಯನ್ಸ್ ಜಿಯೋ ಮಂಡಳಿಯ ಸದಸ್ಯರು ಆಗಿದ್ದಾರೆ.
ಈಗಾಗಲೇ ಜನವರಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಗುವಾಹಟಿಯ ಅಸ್ಸಾಂ ಸ್ಟೇಟ್ ಮೃಗಾಲಯದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಇಸ್ರೇಲ್ನಿಂದ ಎರಡು ಜೋಡಿ ಜೀಬ್ರಾಗಳಿಗೆ ಬದಲಾಗಿ ಎರಡು ಅಪರೂಪದ ಕಪ್ಪು ಬಣ್ಣದ ಪ್ಯಾಂಥರ್ಗಳನ್ನು ಪಡೆಯಲು ಒಪ್ಪಂದ ಮಾಡಿಕೊಂಡಿದೆ. ಇದನ್ನು ಸ್ಥಳೀಯ ರಾಜಕೀಯ ಪಕ್ಷಗಳು ಮತ್ತು ಕಾರ್ಯಕರ್ತರು ವಿರೋಧಿಸಿದ್ದಾರೆ ಎಂದು ಈಶಾನ್ಯ ನೌ ನ್ಯೂಸ್ ವರದಿ ಮಾಡಿದೆ.
ಕಳೆದ ಭಾನುವಾರ ಕಪ್ಪು ಬಣ್ಣದ ಪ್ಯಾಂಥರ್ ವರ್ಗಾವಣೆಯ ವಿರುದ್ಧವಾಗಿ ಸುಮಾರು 100 ಕಾರ್ಯಕರ್ತರು ಗುವಾಹಟಿ ಮೃಗಾಲಯದ ಮುಂದೆ ಜಮಾಯಿಸಿದ್ದರು ಎಂದು ಇಂಗ್ಲಿಷ್ ಭಾಷಾ ದಿನಪತ್ರಿಕೆ ಟೆಲಿಗ್ರಾಫ್ ಇಂಡಿಯಾ ತಿಳಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications