ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಸ್ಥೆ (ಒಪೆಕ್) ಮತ್ತು ಅದರ ಮಿತ್ರರಾಷ್ಟ್ರಗಳಾದ ಒಪೆಕ್ + ಗುಂಪು ಏಪ್ರಿಲ್ನಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಉತ್ಪಾದನೆ ಮತ್ತು ಸರಬರಾಜು ಹೆಚ್ಚಿಸುವುದನ್ನು ಪರಿಗಣಸದೆ ಇರುವುದು ಭಾರತದ ಆರ್ಥಿಕ ಚೇತರಿಕೆ ಮೇಲೆ ಪರಿಣಾಮ ಬೀರಲಿದೆ ಎಂದು ಆರ್ಥಿಕ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.
ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದುದಾರ ಭಾರತ, ಬೆಲೆಗಳು ಹೆಚ್ಚಾದಂತೆ ಉತ್ಪಾದನಾ ಕಡಿತವನ್ನು ವಿಸ್ತರಿಸುವ ಪ್ರಮುಖ ಉತ್ಪಾದಕರ ನಿರ್ಧಾರವು ಕೆಲವು ದೇಶಗಳಲ್ಲಿನ ಆರ್ಥಿಕತೆ ಚೇತರಿಕೆಗೆ ಅಪಾಯವನ್ನುಂಟು ಮಾಡುತ್ತದೆ ಎಂದು ಶುಕ್ರವಾರ ಹೇಳಿದೆ.
ತೈಲ ಉತ್ಪಾದನೆ ಹೆಚ್ಚಿಸದಿರಲು ಒಪೆಕ್ ತೀರ್ಮಾನ
ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ಅನುಭವಿಸಿದ ನಷ್ಟವನ್ನು ಸರಿದೂಗಿಸಿ ಬೇಡಿಕೆಯಲ್ಲಿ ಹೆಚ್ಚು ಗಣನೀಯ ಚೇತರಿಕೆಗಾಗಿ ಕಾಯುತ್ತಿರುವುದರಿಂದ ಒಪೆಕ್ ಮತ್ತು ಒಪೆಕ್+ ರಾಷ್ಟ್ರಗಳು ಸರಬರಾಜು ಹೆಚ್ಚಿಸದಿರಲು ಗುರುವಾರ ತೀರ್ಮಾನಿಸಿವೆ. ಅಂದರೆ ತೈಲೋತ್ಪನ್ನಗಳ ಬೇಡಿಕೆಯಲ್ಲಿ ಇನ್ನಷ್ಟು ಗಟ್ಟಿಯಾದ ಸುಧಾರಣೆ ಕಂಡುಬರುವವರೆಗೂ ಉತ್ಪಾದನೆಯನ್ನು ಹೆಚ್ಚಿಸುವುದು ಬೇಡ ಎಂದು ನಿರ್ಧರಿಸಿವೆ.
14 ತಿಂಗಳಲ್ಲಿ ಗರಿಷ್ಠ ಮಟ್ಟ ತಲುಪಿರುವ ತೈಲ ಬೆಲೆ
ತೈಲ ಬೆಲೆಗಳು ಶುಕ್ರವಾರ ಶೇಕಡಾ 2ಕ್ಕಿಂತ ಹೆಚ್ಚಾಗಿದ್ದು, ಸುಮಾರು 14 ತಿಂಗಳಲ್ಲಿ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಏರುತ್ತಿರುವ ತೈಲ ಬೆಲೆಗಳಿಂದ ತೀವ್ರವಾಗಿ ತತ್ತರಿಸಿರುವ ಭಾರತ, ಉತ್ಪಾದಕ ಕಡಿತವನ್ನು ಸರಾಗಗೊಳಿಸುವಂತೆ ಮತ್ತು ಜಾಗತಿಕ ಆರ್ಥಿಕ ಚೇತರಿಕೆಗೆ ಸಹಾಯ ಮಾಡುವಂತೆ ಉತ್ಪಾದಕರನ್ನು ಕೋರಿದೆ.
ತೈಲ ಆಮದುದಾರರಿಗೆ ಕೆಟ್ಟ ಸುದ್ದಿ
"ಒಪೆಕ್ + ನಿರ್ಧಾರವು ನಮಗೆ ಬೇಸರ ತರಿಸಿದೆ. ಇದು ಭಾರತ, ಚೀನಾ, ಜಪಾನ್, ಕೊರಿಯಾ ಮತ್ತು ಇತರ ಹೆಚ್ಚು ಆಮದುದಾರ ರಾಷ್ಟ್ರಗಳಿಗೆ ಒಳ್ಳೆಯ ಸುದ್ದಿಯಲ್ಲ" ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.
ಶೇಕಡಾ 84% ತೈಲ ಆಮದು
ಹೆಚ್ಚುತ್ತಿರುವ ತೈಲ ಬೆಲೆಗಳು ಭಾರತಕ್ಕೆ ಹಣಕಾಸಿನ ಸವಾಲುಗಳನ್ನು ಒಡ್ಡುತ್ತಿವೆ, ಈಗಾಗಲೇ ಹೆಚ್ಚು ತೆರಿಗೆ ವಿಧಿಸುವ ಮೂಲಗಳಾದ ಪೆಟ್ರೋಲ್, ಡೀಸೆಲ್ ಬೆಲೆಗಳು ದೇಶದ ಕೆಲವು ಭಾಗಗಳಲ್ಲಿ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದ್ದು, ಬೇಡಿಕೆ ಚಾಲಿತ ಚೇತರಿಕೆಗೆ ಬೆದರಿಕೆ ಹಾಕಿದೆ. ಏಷ್ಯಾದ ಮೂರನೇ ಅತಿದೊಡ್ಡ ಆರ್ಥಿಕತೆಯಾದ ಭಾರತವು ತನ್ನ ತೈಲದ ಸುಮಾರು 84% ನಷ್ಟು ಆಮದು ಮಾಡಿಕೊಳ್ಳುತ್ತದೆ ಮತ್ತು ಅದರ ಬೇಡಿಕೆಯ ಐದನೇ ಒಂದು ಭಾಗವನ್ನು ಪೂರೈಸಲು ಮಧ್ಯಪ್ರಾಚ್ಯ ಸರಬರಾಜುಗಳನ್ನು ಅವಲಂಬಿಸಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications