ದೇಶದಲ್ಲಿ ಸದ್ಯ ಮಂದಗತಿಯ ಆರ್ಥಿಕತೆಯಿದ್ದರೂ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತು ಕುಂಠಿತ ಪ್ರಗತಿಯ ಸಂಕಷ್ಟಗಳಿಂದ ಪುಟಿದೇಳುವ ಸಾಮರ್ಥ್ಯವನ್ನು ದೇಶಿ ಆರ್ಥಿಕತೆ ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ ಭಾರತೀಯ ವಾಣಿಜ್ಯೋದ್ಯಮ ಮಹಾಸಂಘದ(ಅಸೋಚಾಂ) ಸಮಾರಂಭದಲ್ಲಿ ಮಾತನಾಡಿದ ಮೋದಿ ''ಮಂದಗತಿಯ ಆರ್ಥಿಕತೆಯಿಂದ ಸದ್ಯದಲ್ಲೇ ಹೊರಬರಲಿರುವ ಆರ್ಥಿಕತೆಯು ಗರಿಷ್ಠ ವೃದ್ಧಿ ದರದ ಹಾದಿಗೆ ಮರಳಲಿದೆ. ಜಿಡಿಪಿ ದರ ಏರಿಕೆ ದಾಖಲಿಸಲು ಕಾರ್ಪೋರೇಟ್ಗಳು ಬಂಡವಾಳ ಹೂಡಿಕೆ ಹೆಚ್ಚಿಸುವ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

'ದೇಶದಲ್ಲಿ ಎಲ್ಲೆಡೆ ಆರ್ಥಿಕ ಪ್ರಗತಿ ಕುರಿತು ಚರ್ಚೆ ನಡೆಯುತ್ತಿದೆ. ಆರ್ಥಿಕತೆ ಕುರಿತು ಟೀಕೆ-ಟಿಪ್ಪಣಿಗಳಿಗೆ ನಾನು ಸವಾಲು ಒಡ್ಡಲು ಇಲ್ಲಿ ಇಚ್ಚಿಸುವುದಿಲ್ಲ. ಇಂತಹ ಸಮಾರಂಭಗಳಲ್ಲಿ ಸಕಾರಾತ್ಮಕ ಚಿಂತನೆಗಳು ಹೊರಹೊಮ್ಮಲಿ ಎನ್ನುವುದು ನನ್ನ ಆಶಯವಾಗಿದೆ ಎಂದಿದ್ದಾರೆ.
ಹಿಂದಿನ ಯುಪಿಎ ಸರ್ಕಾರದಲ್ಲೂ ಅಭಿವೃದ್ಧಿ ದರವು 3.6 ಪರ್ಸೆಂಟ್ಗೆ ಕುಸಿದಿತ್ತು. ಆರ್ಥಿಕ ಪ್ರಗತಿಗೆ ಸಂಬಂಧಿಸಿದಂತೆ ಈ ಹಿಂದೆಯೂ ಸಾಕಷ್ಟು ಏರಿಳಿತಗಳು ಘಟಿಸಿವೆ. ಇಂತಹ ಸಂದರ್ಭಗಳಿಂದ ಹೊರ ಬರುವ ಸಾಮರ್ಥ್ಯ ದೇಶಕ್ಕಿದೆ ಎಂದು ಆರ್ಥಿಕತೆಯು ಗರಿಷ್ಠ ಹಾದಿಗೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications