ಯುಎಸ್ ಉಪಗ್ರಹ ಬ್ರಾಡ್ಬ್ಯಾಂಡ್ ಪೂರೈಕೆದಾರ ಹ್ಯೂಸ್ ನೆಟ್ವರ್ಕ್ ಸಿಸ್ಟಮ್ಸ್ ತನ್ನ ಭಾರತೀಯ ಕಾರ್ಯಾಚರಣೆಯನ್ನು ಸ್ಥಗಿಸಗೊಳಿಸಬಹುದಾದ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಭಾರತಕ್ಕೆ ಬ್ರಾಡ್ಬ್ಯಾಂಡ್ ಪೂರೈಕೆದಾರ ಆದ ಹ್ಯೂಸ್ ನೆಟ್ವರ್ಕ್ ಕೇಂದ್ರ ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಬಾಕಿ ಉಳಿಸಿಕೊಂಡಿರುವುದರಿಂದ ದೇಶದ ಸಾವಿರಾರು ಬ್ಯಾಂಕಿಂಗ್ ಸೇವೆಗಳು ಅಪಾಯಕ್ಕೆ ತುತ್ತಾಗಬಹುದು ಎಂದು ಕಂಪನಿಯ ಪತ್ರವೊಂದರಲ್ಲಿ ಉಲ್ಲೇಖಿತವಾಗಿದೆ ಎಂದು ರಾಯಿಟರ್ಸ್ ಹೇಳಿದೆ.

ಕಳೆದ ವರ್ಷ ತಡವಾಗಿ ಸುಪ್ರೀಂ ಕೋರ್ಟ್ ವೊಡಾಫೋನ್ ಸೇರಿದಂತೆ ಹ್ಯೂಸ್ ನಂತಹ ದೊಡ್ಡ ಸಂಸ್ಥೆಗಳನ್ನು ಒಳಗೊಂಡಂತೆ ಹಲವಾರು ಟೆಲಿಕಾಂ ಕಂಪನಿಗಳಿಗೆ ಸರ್ಕಾರಕ್ಕೆ ನೀಡಬೇಕಿದ್ದ ಶತಕೋಟಿ ಡಾಲರ್ಗಳನ್ನು ಪಾವತಿಸಲು ಆದೇಶಿಸಿತ್ತು.
ಹ್ಯೂಸ್ ನೆಟ್ವರ್ಕ್ನ ಇಂಡಿಯಾ ಘಟಕವು ದೇಶದ ರಕ್ಷಣಾ, ಶಿಕ್ಷಣ ಮತ್ತು ಬ್ಯಾಂಕಿಂಗ್ ಕ್ಷೇತ್ರಗಳಿಗೆ ಸೇವೆಗಳನ್ನು ಒದಗಿಸುತ್ತದೆ ಮತ್ತು ಫೆಬ್ರವರಿ 20 ರ ಪತ್ರದಲ್ಲಿ ಟೆಲಿಕಾಂ ಸಚಿವಾಲಯಕ್ಕೆ ತಿಳಿಸಿದ್ದು, ಅದು ನೀಡಬೇಕಾಗಿರುವ 600 ಕೋಟಿ ರುಪಾಯಿ ( 84 ಮಿಲಿಯನ್ ಡಾಲರ್) ಪಾವತಿಸಲು ಸಾಧ್ಯವಿಲ್ಲದ ಕಾರಣ ಅದು ದಿವಾಳಿತನವನ್ನು ಎದುರಿಸುತ್ತಿದೆ.
ಒಂದು ವೇಳೆ ಕಂಪನಿ ಮುಚ್ಚಿದರೆ 70,000 ಕ್ಕೂ ಹೆಚ್ಚು ಬ್ಯಾಂಕಿಂಗ್ ಸ್ಥಳಗಳಲ್ಲಿ ಮತ್ತು ಭಾರತೀಯ ನೌಕಾಪಡೆ, ಸೇನೆ ಮತ್ತು ರೈಲ್ವೆಯಲ್ಲಿನ ಅನೇಕ ನಿರ್ಣಾಯಕ ಉಪಗ್ರಹ ಜಾಲಗಳಲ್ಲಿನ ಸಂಪರ್ಕವನ್ನು ಅಡ್ಡಿಪಡಿಸುತ್ತದೆ ಎಂದು ಹ್ಯೂಸ್ ಭಾರತದ ಅಧ್ಯಕ್ಷ ಪಾರ್ಥೊ ಬ್ಯಾನರ್ಜಿ ಪತ್ರದಲ್ಲಿ ತಿಳಿಸಿದ್ದಾರೆ ಎಂದು ರಾಯಿಟರ್ಸ್ ಹೇಳಿದೆ
More From GoodReturns

Central Govt: ಇನ್ಮೇಲೆ ವಾಹನ ವರ್ಗಾಯಿಸುವುದು ಮತ್ತಷ್ಟು ಸುಲಭ? ಕೇಂದ್ರದಿಂದ ಮಹತ್ವದ ಕ್ರಮ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications