ನದೆದೆಹಲಿ, ಜೂನ್ 3: ''ಕೊರೊನಾವೈರಸ್ ಲಾಕ್ಡೌನ್ ಪರಿಣಾಮವಾಗಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕತೆಯು ಶೇಕಡಾ 10 ರಷ್ಟು ಅಥವಾ 20 ಲಕ್ಷ ಕೋಟಿಗಳಷ್ಟು ಕುಗ್ಗಲಿದೆ'' ಎಂದು ಕೇಂದ್ರದ ಮಾಜಿ ಹಣಕಾಸು ಇಲಾಖೆಯ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ.
ಈ ರೀತಿಯ ಪರಿಸ್ಥಿತಿ ಉದ್ಭವಿಸುತ್ತಿರುವುದು ನಲವತ್ತು ವರ್ಷಗಳ ನಂತರ ಮೊದಲ ಬಾರಿ ಎಂದು ಬ್ಲಾಗ್ಪೋಸ್ಟ್ಗೆ ನೀಡಿದ ಸಂದರ್ಶನದಲ್ಲಿ ಗರ್ಗ್ ಅಭಿಪ್ರಾಯಪಟ್ಟಿದ್ದಾರೆ.
''ಲಾಕ್ಡೌನ್ ಪರಿಹಾರವಾಗಿ ಕೇಂದ್ರ ಸರ್ಕಾರ ಘೋಷಿಸಿರುವ 21 ಲಕ್ಷ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ವಾಸ್ತವವಾಗಿ ಕೇವಲ 1.4-1.5 ಲಕ್ಷ ಕೋಟಿ ರುಪಾಯಿಯಾಗುತ್ತದೆ'' ಎನ್ನುತ್ತಾರೆ ಕೇಂದ್ರದ ಮಾಜಿ ಹಣಕಾಸು ಇಲಾಖೆಯ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್.
ಒಟ್ಟು ದೇಶೀಯ ಉತ್ಪನ್ನದ ಶೇಕಡಾ 0.7 ರಷ್ಟಿದೆ
ಲಾಕ್ಡೌನ್ ಪರಿಹಾರವಾಗಿ ಕೇಂದ್ರ ಸರ್ಕಾರ ಘೋಷಿಸಿರುವ 21 ಲಕ್ಷ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ ದೇಶದ ಒಟ್ಟು ದೇಶೀಯ ಉತ್ಪನ್ನದ ಶೇಕಡಾ 0.7 ರಷ್ಟಿದೆ ಎಂದು ಕೇಂದ್ರದ ಮಾಜಿ ಹಣಕಾಸು ಇಲಾಖೆಯ ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ ಹೇಳಿದ್ದಾರೆ.
ಸಂಕುಚಿತಗೊಳ್ಳುವುದು ನಿಶ್ಚಿತ
2020-21ರಲ್ಲಿ ಭಾರತದ ಜಿಡಿಪಿ 40 ವರ್ಷಗಳ ನಂತರ ಸಂಕುಚಿತಗೊಳ್ಳುವುದು ನಿಶ್ಚಿತ ಎಂದು ಅವರು ಬ್ಲಾಗ್ಪೋಸ್ಟ್ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. "ಇದು ಜಿಡಿಪಿಯ ಶೇಕಡಾ 10 ರಷ್ಟು ದೊಡ್ಡ ಕುಸಿತ ಅಥವಾ ನಷ್ಟ ಎಂದು ಸಾಕಷ್ಟು ಖಚಿತವಾಗಿ ಕಾಣುತ್ತದೆ ಎನ್ನುತ್ತಾರೆ.
ಇತಿಹಾಸದಲ್ಲಿ ಅತಿದೊಡ್ಡದು ಎನಿಸಿಕೊಳ್ಳುವ ಸಂಭವವಿದೆ
ಮಾಜಿ ಹಣಕಾಸು ಕಾರ್ಯದರ್ಶಿ ಸುಭಾಷ್ ಚಂದ್ರ ಗರ್ಗ್ 2020-21ರ ಆರ್ಥಿಕತೆಯು ಕುಸಿಯುವುದು ಇತಿಹಾಸದಲ್ಲಿ ಅತಿದೊಡ್ಡದು ಎನಿಸಿಕೊಳ್ಳುವ ಸಂಭವವಿದೆ ಎಂದು ಕೂಡ ಆತಂಕ ವ್ಯಕ್ತಪಡಿಸಿದ್ದಾರೆ. ಭಾರತವು ತನ್ನ ಮೂರು ದಶಕದ ಮಹೋನ್ನತ ಬೆಳವಣಿಗೆಯನ್ನು ಕೊರೊನಾವೈರಸ್ ಲಾಕ್ಡೌನ್ ಮರೆಮಾಚುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಆರ್ಥಿಕತೆಯು ಕೇವಲ 4 ಪ್ರತಿಶತದಷ್ಟು ಬೆಳೆದಿದೆ
2019-20ರಲ್ಲಿ ಭಾರತವು ಆರ್ಥಿಕ ಆರೋಗ್ಯ ಕೆಂಪು ಬಣ್ಣದಲ್ಲಿ ಗೋಚರಿಸುತ್ತಿದೆ. ಈ ಷರ್ವದ ಆರ್ಥಿಕತೆಯು ಕೇವಲ 4 ಪ್ರತಿಶತದಷ್ಟು ಬೆಳೆದಿದೆ ಇದು ಕಳೆದ 11 ವರ್ಷಗಳಲ್ಲಿ ಅತ್ಯಂತ ಕಡಿಮೆ ಬೆಳವಣಿಗೆಯ ದರವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications