ನವದೆಹಲಿ, ಆಗಸ್ಟ್ 23: ಕೇಂದ್ರ ಸರ್ಕಾರವು ಇದೀಗ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಎರಡನೇ ಹಂತದ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರವನ್ನುಘೋಷಣೆ ಮಾಡುವ ನಿರೀಕ್ಷೆಯಿದೆ. ಅದರಂತೆ 2024 ಜುಲೈ ಸೆಪ್ಟಂಬರ್ನಿಂದ ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆ ಹಾಗೂ ಪಿಂಚಣಿದಾರರಿಗೆ ತುಟ್ಟಿ ಪರಿಹಾರ ದೊರೆಯಲಿದೆ. ಈ ಪ್ರಧಾನಿ ನರೇಂದ್ರ ಮೋದಿ ಅವರು ಈ ಅವಧಿಗೆ ಅನ್ವಯವಾಗುವಂತೆ ಶೇ.3ರಷ್ಟು ತುಟ್ಟಿ ಭತ್ಯೆ ಹಾಗೂ ತುಟ್ಟಿ ಪರಿಹಾರವನ್ನು ಮಂಜೂರು ಮಾಡುವ ಸಾಧ್ಯತೆಯಿದೆ. ಡಿಎ ಅಥವಾ ತುಟ್ಟಿ ಭತ್ಯೆಯನ್ನು ಸರ್ಕಾರಿ ನೌಕರರಿಗೆ ಹಾಗೂ ಡಿಆರ್ ಅಥವಾ ಪಿಂಚಣಿ ಪರಿಹಾರವನ್ನು ಪಿಂಚಣಿದಾರರಿಗೆ ನೀಡಲಾಗುತ್ತದೆ.
ಒಂದುವೇಳೆ ಕೇಂದ್ರ ಸರ್ಕಾರವು ಈ ಬಾರಿ ಶೇ.3ರಷ್ಟು ಡಿಎ ಹಾಗೂ ಡಿಆರ್ ಅನ್ನು ಹೆಚ್ಚಳ ಮಾಡಲು ಕೇಂದ್ರ ಸರ್ಕಾರವು ಮುಂದಾಗಿದ್ದು, ಇದರೊಂದಿಗೆ ತುಟ್ಟಿ ಭಟ್ಟೆಯು ಶೇ.53ಕ್ಕೆ ಏರಿಕೆಯಾಗಲಿದೆ. ಈ ನಡುವೆ, ಕೋವಿಡ್-19ರ ಸಾಂಕ್ರಾಮಿಕ ಸಮಯದಲ್ಲಿ ಮುಂದೂಡಲ್ಪಟ್ಟ 18 ತಿಂಗಳ ಡಿಎ ಹಾಗೂ ಡಿಆರ್ ಬಾಕಿಗಳನ್ನು ಸರ್ಕಾರ ಬಿಡುಗಡೆ ಮಾಡುವ ಸಾಧ್ಯತೆಯಿಲ್ಲ ಎಂದು ಹೇಳಲಾಗುತ್ತಿದೆ.

ಸರ್ಕಾರವು ಶೇ.3ರಷ್ಟು ಡಿಎ ಹೆಚ್ಚಳ ಮಾಡುವುದರಿಂದ ಕೇಂದ್ರ ಸರ್ಕಾರಿ ನೌಕರರ ವೇತನದಷ್ಟು ಮತ್ತಷ್ಟು ಹೆಚ್ಚಳ ಉಂಟಾಗಲಿದೆ.ತುಟ್ಟಿ ಭತ್ಯೆಯು ಹಣದುಬ್ಬರವನ್ನು ಎದುರಿಸುವುದಕ್ಕೆ ಸಹಾಯ ಮಾಡುತ್ತದೆ ಹಾಗೂ ಬದಲಾಗುತ್ತಿರುವ ಆರ್ಥಿಕ ಪರಿಸ್ಥಿತಿಯನ್ನು ಸರಿದೂಗಿಸುತ್ತದೆ.ಉದಾಹರಣೆಗೆ ಒಂದುವೇಳೆ ಕೇಂದ್ರ ಸರ್ಕಾರಿ ನೌಕರರೊಬ್ಬರು ತಿಂಗಳಿಗೆ 55,200 ಮೂಲ ವೇತನವನ್ನು ಹೊಂದಿದ್ದರೆ ಅವರ ತುಟ್ಟಿ ಭಟ್ಟೆಯು ಶೇ.50ರಷ್ಟು ಅಂದರೆ 27,600ರೂ. ಆಗಿರುತ್ತದೆ. ಈಗ ಡಿಎ ಶೇ.53ರಷ್ಟು ಏರಿಕೆಯಾದರೆ ಅದು 29,256ರೂ.ಗೆ ಹೆಚ್ಚಳವಾಗಲಿದೆ.
ಇದರೊಂದಿಗೆ ಆ ಉದ್ಯೋಗಿಯು ತಮ್ಮ ಸಂಬಳದಲ್ಲಿ 1.656ರೂ. ಏರಿಕೆ ಪಡೆದು ಅದು 27,600ರೂ. ನಿಂದ 29,256ರೂ.ಗೆ ಏರಿಕೆಯಾಗುತ್ತದೆ. ಹೆಚ್ಚುತ್ತಿರುವ ಜೀವನ ವೆಚ್ಚಗಳ ನಡುವೆ ಸರ್ಕಾರಿ ನೌಕರರ ಕೊಳ್ಳುವ ಶಕ್ತಿಯನ್ನು ಕಾಪಾಡಿಕೊಳ್ಳಲು ಈ ಆವರ್ತಕ ಡಿಎ ಹೊಂದಾಣಿಕೆಯು ಅತ್ಯಗತ್ಯ.
ಪ್ರತಿ ವರ್ಷ ಜನವರಿ 1 ಮತ್ತು ಜುಲೈ 1 ರಿಂದ ತುಟ್ಟಿ ಭತ್ಯೆ ಮತ್ತು ಪಿಂಚಣಿ ಪರಿಹಾರ ಹೆಚ್ಚಳಗಳನ್ನು ಸಾಮಾನ್ಯವಾಗಿ ಪೂರ್ವಾನ್ವಯವಾಗುತ್ತದೆ ಎಂಬುದು ಇಲ್ಲಿ ಗಮನಾರ್ಹವಾಗಿದೆ. ಹೀಗಾಗಿ, ಕೇಂದ್ರ ಸರ್ಕಾರವು ಪ್ರತಿಬಾರಿಯೂ ತುಟ್ಟಿ ಭತ್ಯೆ ಹಾಗೂ ಪಿಂಚಣಿ ಪರಿಹಾರವನ್ನು ಘೋಷಣೆ ಮಾಡಿದರೆ ಅದು ಅದಕ್ಕಿಂತ ಹಿಂದಿನ ತಿಂಗಳ ಬಾಕಿಯನ್ನು ಪಡೆಯಲು ಅರ್ಹರಾಗುತ್ತದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications