ದೇಶಾದ್ಯಂತ ಮೇ 22 ರಿಂದ ಸುಮಾರು 1.7 ಲಕ್ಷ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಪುನರಾರಂಭಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
ಗೋಯಲ್ ಮತ್ತು ಬಿಜೆಪಿ ವಕ್ತಾರ ಸಂಬಿತ್ ಪತ್ರಾ ಅವರೊಂದಿಗಿನ ವೀಡಿಯೊ ಸಂಭಾಷಣೆಯಲ್ಲಿ, "ಮುಂದಿನ 2-3 ದಿನಗಳಲ್ಲಿ ವಿವಿಧ ನಿಲ್ದಾಣಗಳ ಕೌಂಟರ್ಗಳಲ್ಲಿ ಬುಕ್ಕಿಂಗ್ ಪುನರಾರಂಭಗೊಳ್ಳಲಿದೆ. ಈ ನಿಟ್ಟಿನಲ್ಲಿ ನಾವು ಪ್ರೋಟೋಕಾಲ್ ಅನ್ನು ಅಭಿವೃದ್ಧಿಪಡಿಸುತ್ತಿದ್ದೇವೆ'' ಎಂದಿದ್ದಾರೆ.

"ಮುಂಬರುವ ದಿನಗಳಲ್ಲಿ ಹೆಚ್ಚಿನ ರೈಲುಗಳ ಪುನರಾರಂಭವನ್ನು ನಾವು ಪ್ರಕಟಿಸಲಿದ್ದೇವೆ. ರೈಲ್ವೆ ನಿಲ್ದಾಣಗಳಲ್ಲಿ ಅಂಗಡಿಗಳ ಕಾರ್ಯಾಚರಣೆಗೆ ಸಹ ನಾವು ಅನುಮತಿ ನೀಡಿದ್ದೇವೆ. ಆದಾಗ್ಯೂ, ಟೇಕ್ಅವೇಗಳಿಗೆ ಮಾತ್ರ ಅವಕಾಶ ನೀಡಲಾಗುವುದು" ಎಂದು ರೈಲ್ವೆ ಸಚಿವರು ಹೇಳಿದರು.
"ಕೆಲವು ರಾಜ್ಯಗಳು ವಲಸೆ ಕಾರ್ಮಿಕರನ್ನು ತಮ್ಮ ಮನೆಗಳಿಗೆ ವಾಪಸ್ ಕಳುಹಿಸಲು ವಿಶೇಷ ರೈಲುಗಳನ್ನು ಓಡಿಸಲು ನಮ್ಮೊಂದಿಗೆ ಸಹಕರಿಸಲಿಲ್ಲ. ಪಶ್ಚಿಮ ಬಂಗಾಳಕ್ಕೆ ಮರಳಲು ಬಯಸುವ ಸುಮಾರು 40 ಲಕ್ಷ ಜನರಿದ್ದಾರೆ ಎಂದು ನಾನು ಭಾವಿಸುತ್ತೇನೆ ಆದರೆ ಇಲ್ಲಿಯವರೆಗೆ ಕೇವಲ 27 ವಿಶೇಷ ರೈಲುಗಳು ಮಾತ್ರ ರಾಜ್ಯವನ್ನು ಪ್ರವೇಶಿಸಿವೆ . "
ಜೂನ್ 1 ರಿಂದ ಚಾಲನೆಯಾಗಲಿರುವ 100 ವಿಶೇಷ ರೈಲುಗಳಿಗೆ ಬುಕಿಂಗ್ ತೆರೆದ 2.5 ಗಂಟೆಗಳಲ್ಲಿ, 4 ಲಕ್ಷ ಪ್ರಯಾಣಿಕರು ಟಿಕೆಟ್ ಕಾಯ್ದಿರಿಸಿದ್ದಾರೆ ಎಂದು ಗೋಯಲ್ ಹೇಳಿದ್ದಾರೆ. ಜನರು ಮತ್ತೆ ಕೆಲಸಕ್ಕೆ ಬರಲು ರಿವರ್ಸ್ ಬುಕಿಂಗ್ ಪ್ರಾರಂಭಿಸಿದ್ದಾರೆ ಎಂದರು.
ಜೂನ್ 1 ರಿಂದ ಪ್ರಾರಂಭವಾಗಲಿರುವ 200 ಪ್ಯಾಸೆಂಜರ್ ರೈಲುಗಳ ಪಟ್ಟಿಯನ್ನು ಭಾರತೀಯ ರೈಲ್ವೆ ಬುಧವಾರ ಬಿಡುಗಡೆ ಮಾಡಿತು. ಈ ರೈಲುಗಳ ಟಿಕೆಟ್ ಬುಕ್ಕಿಂಗ್ ಇಂದು ಬೆಳಿಗ್ಗೆ 10 ರಿಂದ ಪ್ರಾರಂಭವಾಯಿತು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications