ಇನ್ಫೋಸಿಸ್ ಸಿಇಒ ಸಲೀಲ್ ಪಾರೇಖ್ ಅವರು ಈಗ ತಮ್ಮ ಮೇಲಿನ ಆರೋಪಗಳಿಂದ ಮುಕ್ತರಾಗಿದ್ದಾರೆ. ಅನಾಮಧೇಯರ ಆರೋಪಗಳ ಕುರಿತು ಕಂಪನಿಯು ಸ್ವತಂತ್ರ ತನಿಖೆ ಪೂರ್ಣಗೊಂಡಿದ್ದು, ಕಂಪನಿಯ ಉನ್ನತ ಅಧಿಕಾರಿಗಳು ಲೆಕ್ಕಪತ್ರದಲ್ಲಿ ಯಾವುದೇ ಕಾನೂನು ಬಾಹಿರ ವಿಧಾನಗಳನ್ನು ಅನುಸರಿಸಿಲ್ಲ ಎಂದು ಇನ್ಫೋಸಿಸ್ ಹೇಳಿದೆ.
'' ನಿರ್ದೇಶಕ ಮಂಡಳಿಯ ಲೆಕ್ಕಪತ್ರ ಸಮಿತಿಯು, ಈ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಿದ್ದು, ಕಾನೂನು ಸಲಹಾ ಸಂಸ್ಥೆಗಳಾದ ಶಾರ್ದೂಲ್ ಅಮರ್ಚಂದ್ ಮಂಗಲದಾಸ್ ಆ್ಯಂಡ್ ಕಂಪನಿ ಮತ್ತು ಪ್ರೈಸ್ ವಾಟರ್ಹೌಸ್ ಕೂಪರ್ಸ್ ನೆರವು ಪಡೆದು ಸಮಗ್ರ ತನಿಖೆ ನಡೆಸಿ ಈ ತೀರ್ಮಾನಕ್ಕೆ ಬರಲಾಗಿದೆ'' ಎಂದು ಲೆಕ್ಕಪತ್ರ ಸಮಿತಿ ಅಧ್ಯಕ್ಷ ಡಿ. ಸುಂದರಂ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಲಾಭ ಹೆಚ್ಚಿಸಲು ಕಂಪನಿಯ ಉನ್ನತ ಅಧಿಕಾರಿಗಳು ಕಾನೂನುಬಾಹಿರ ಕ್ರಮಗಳನ್ನು ಅನುಸರಿಸಿದ್ದಾರೆ ಎಂದು ದೂರುಗಳನ್ನು ನೀಡಲಾಗಿತ್ತು. ಇದು ಷೇರುಪೇಟೆಯ ಗಮನಕ್ಕೂ ಬಂದಿತ್ತು. ಆದರೆ ಕಂಪನಿಯ ಉನ್ನತ ಅಧಿಕಾರಿಗಳು ನ್ಯಾಯಬಾಹಿರ ವಿಧಾನಗಳನ್ನು ಅನುಸರಿಸಿದ್ದಾರೆ ಎಂದು ಹೇಳಲು ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಇನ್ಫೋಸಿಸ್ ಹೇಳಿದೆ.
ಇತ್ತೀಚೆಗಷ್ಟೇ ಇನ್ಫೋಸಿಸ್ ಮೂರನೇ ತ್ರೈಮಾಸಿಕ ವರದಿ ಬಿಡುಗಡೆ ಮಾಡಿತ್ತು. ಕಂಪನಿಯ ನಿವ್ವಳ ಲಾಭದ ಪ್ರಮಾಣವು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಾ ಬಂದಿದ್ದು, 4,457 ಕೋಟಿ ರುಪಾಯಿಗೆ ತಲುಪಿದೆ ಎಂದು ವರದಿ ಮಾಡಿದೆ. ಇದರ ಆದಾಯವು 7.9 ಪರ್ಸೆಂಟ್ ಏರಿಕೆಯಾಗಿ 23,097 ಕೋಟಿ ರುಪಾಯಿಗೆ ತಲುಪಿದೆ. ಜೊತೆಗೆ 2020ರ ಹಣಕಾಸು ವರ್ಷದ ಆದಾಯದ ದೃಷ್ಟಿಕೋನವನ್ನು 10 ಪರ್ಸೆಂಟ್ನಿಂದ 10.5 ಪರ್ಸೆಂಟ್ಗೆ ಪರಿಷ್ಕರಿಸಿದೆ. QoQ ಆಧಾರದ ಮೇಲೆ ಇನ್ಪೋಸಿಸ್ ಲಾಭವು 10.9 ಪರ್ಸೆಂಟ್ ಏರಿಕೆಯಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications