ಬೆಂಗಳೂರು, ಡಿಸೆಂಬರ್ 22: ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಲು ಕೈಗಾರಿಕೋದ್ಯಮಿಗಳನ್ನು ಆಕರ್ಷಿಸುವ ಉದ್ದೇಶದಿಂದ ಕೇಂದ್ರ ಸಂಸದೀಯ ಹಾಗೂ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಷಿ ಅವರ ಜೊತೆಯಲ್ಲಿ ಮುಂಬಯಿಯಲ್ಲಿ ಕೈಗಾರಿಕೋದ್ಯಮಿಗಳ ಜೊತೆ ಎರಡು ದಿನಗಳ ಕಾಲ ಸರಣಿ ಸಭೆಯನ್ನು ನಡೆಸಲಿದ್ದೇವೆ ಎಂದು ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈ ರೋಡ್ ಶೋ ನಲ್ಲಿ ಭಾಗವಹಿಸಲಿದ್ದು, ಫೆಬ್ರವರಿ ತಿಂಗಳ ಎರಡನೇ ವಾರದಲ್ಲಿ ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ ದಲ್ಲಿ ಭಾಗವಹಿಸುವಂತೆ ಕೈಗಾರಿಕೋದ್ಯಮಿಗಳಿಗೆ ಆಹ್ವಾನ ನೀಡಲಿದ್ದೇವೆ ಎಂದರು.
2ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ನೀತಿ, ನಿಯಮ
ಭಾನುವಾರ ಸಂಜೆ ಇ-ಶಾಂಗ್ ರೆಡ್ವುಡ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ದಕ್ಷಿಣ ಭಾರತದ ಮುಖ್ಯಸ್ಥರ ಭೇಟಿಗೆ ಸಮಯ ನಿಗದಿಪಡಿಸಲಾಗಿದೆ. ಅಲ್ಲದೆ, ಹಿಂದೂಜಾ ಗ್ರೂಪ್ ಆಫ್ ಕಂಪನಿಗಳ ಪ್ರಮುಖರ ಜೊತೆಯಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಈ ರೋಡ್ ಶೋ ನಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣಾ ಸೇರಿದಂತೆ ಮತ್ತು ಇಲಾಖೆಯ ಪ್ರಮುಖ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕೈಗಾರಿಕೋದ್ಯಮಿಗಳ ಜೊತೆ ಸರಣಿ ಸಭೆ
ಸೋಮುವಾರ ಬೆಳಿಗ್ಗೆಯಿಂದ ಕೈಗಾರಿಕೋದ್ಯಮಿಗಳ ಜೊತೆ ಸರಣಿ ಸಭೆಗಳನ್ನು ಆಯೋಜಿಸಲಾಗಿದೆ. ಟಾಟಾ ಗ್ರೂಫ್ ನ ಅಧ್ಯಕ್ಷರಾದ ಚಂದ್ರಶೇಖರನ್, ಮಹೀಂದ್ರ & ಮಹಿಂದ್ರ ಲಿಮಿಟೆಡ್ ನ ಅಧ್ಯಕ್ಷರಾದ ಆನಂದ್ ಮಹೀಂದ್ರ, ಗೋದ್ರೇಜ್ ಗ್ರೂಪ್ ನ ಅಧ್ಯಕ್ಷರಾದ ಆದಿ ಗೋದ್ರೇಜ್ ಜೊತೆಯಲ್ಲಿ ಪ್ರತ್ಯೇಕ ಸಭೆಗಳನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಕನ್ಯೂಮರ್ ಗೂಡ್ಸ್ ಕಂಫನಿಗಳಾದ, ಜ್ಯೋತಿ ಲ್ಯಾಬ್ಸ್ ಲಿಮಿಟೆಡ್, ಎಸಿಸಿ ಲಿಮಿಟೆಡ್, ಹುಟಮಕಿ ಪಿಪಿಲ್ ಲಿಮಿಟೆಡ್, ಜೋನ್ಸ್ ಲ್ಯಾಂಗ್ ಲ್ಯಾಸೆಲ್ಲೆ, ಇಂಡಕೌಂಟ್, ಪ್ರಮುಖರ ಜೊತೆಯಲ್ಲಿಯೂ ಸಭೆಗಳು ನಡೆಯಲಿವೆ ಎಂದು ಹೇಳಿದರು.
ಟ್ರಿಡೆಂಟ್ ಹೋಟೆಲ್ ನಲ್ಲಿ ರೋಡ್ ಶೋ
ಸೋಮವಾರ ಸಂಜೆ ನಾರಿಮನ್ ಪಾಯಿಂಟ್ ನಲ್ಲಿರುವ ಟ್ರಿಡೆಂಟ್ ಹೋಟೇಲ್ ನಲ್ಲಿ ರೋಡ್ ಶೋ ನಡೆಯಲಿದ್ದು, ರಾಜ್ಯದಲ್ಲಿರುವ ಕೈಗಾರಿಕೆಗೆ ಪೂರಕವಾದ ವಾತಾವರಣ ಹಾಗೂ ಸೌಲಭ್ಯಗಳ ಬಗ್ಗೆ ಕೈಗಾರಿಕೋದ್ಯಮಿಗಳಿಗೆ ಮಾಹಿತಿಯನ್ನು ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಹೂಡಿಕೆಯನ್ನು ಮಾಡಿರುವ ಕೈಗಾರಿಕೋದ್ಯಮಿಗಳು ತಮ್ಮ ಅನುಭವವನ್ನು ಹಂಚಿಕೊಳ್ಳಲಿರುವುದು ವಿಶೇಷವಾಗಿದೆ ಎಂದು ತಿಳಿಸಿದ್ದಾರೆ.
ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶ
ರಾಜ್ಯದ ಎರಡನೇ ಹಂತದ ನಗರಗಳಲ್ಲಿ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಮೊದಲ ಹಂತವಾಗಿ ಇನ್ವೆಸ್ಟ್ ಕರ್ನಾಟಕ ಹುಬ್ಬಳ್ಳಿ ಸಮಾವೇಶವನ್ನು ಆಯೋಜಿಸಲು ನಿರ್ಧರಿಸಿದ್ದೇವೆ. ಫೆಬ್ರವರಿ ಎರಡನೇ ವಾರದಲ್ಲಿ ಈ ಸಮಾವೇಶ ನಡೆಯಲಿದ್ದು, ಮುಂದಿನ ಹಂತದಲ್ಲಿ ಬೆಳಗಾವಿ, ಗುಲ್ಬರ್ಗಾ, ಮೈಸೂರು, ದಾವಣಗೆರೆ, ಮಂಗಳೂರು, ಹಾಸನ, ಹಾಗೂ ಶಿವಮೊಗ್ಗ ಸೇರಿದಂತೆ ಎರಡನೇ ಹಂತದ ನಗರಗಳಲ್ಲಿ ಹೂಡಿಕೆದಾರರ ಸಮಾವೇಶವನ್ನು ನಡೆಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ವಿಮಾನ ಸಂಪರ್ಕ ಹೆಚ್ಚಾಗಿದೆ
ರಾಜ್ಯದಲ್ಲಿ ವಿಮಾನ ಸಂಪರ್ಕ ಹೆಚ್ಚಾಗಿದೆ. ಕೈಗಾರಿಕೋದ್ಯಮಿಗಳು ಬೆಂಗಳೂರು ಹೊರತುಪಡಿಸಿ ಇತರೇ ಜಿಲ್ಲೆಗಳಲ್ಲೂ ಹೂಡಿಕೆ ಮಾಡಲು ಇದು ಅನುಕೂಲ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಹೂಡಿಕೆಯ ವಾತಾವರಣ ಬದಲಾಗಿದೆ. ಈಗಾಗಲೇ ಹೈದರಾಬಾದ್, ಮಹಾರಾಷ್ಟ್ರ ಹಾಗೂ ಇನ್ನಿತರೆ ರಾಜ್ಯಗಳ ಕೈಗಾರಿಕೋದ್ಯಮಿಗಳು ನಮ್ಮ ಜೊತೆ ಚರ್ಚೆ ನಡೆಸಿದ್ದು, ಬೆಂಗಳೂರು ಹೊರತು ಪಡಿಸಿ ಇತರೆ ಜಿಲ್ಲೆಗಳಲ್ಲಿ ಕೈಗಾರಿಕೆಯನ್ನು ಪ್ರಾರಂಭಿಸಲು ಮುಂದಾಗಿದ್ದಾರೆ. ಇವರಿಗೆ ಅಗತ್ಯವಿರುವ ಅನುಕೂಲತೆಗಳನ್ನು ರಾಜ್ಯ ಸರಕಾರ ಮಾಡಿಕೊಡುತ್ತಿದೆ ಎಂದು ಹೇಳಿದರು.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಇರಲ್ಲ ಕರೆಂಟ್! ಎಲ್ಲೆಲ್ಲಿ ಗೊತ್ತಾ?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Bengaluru: ಬೆಂಗಳೂರಿಗೆ 5,000 ರೂ. ಕೋಟಿ ಪ್ರವಾಹ ಯೋಜನೆ, 41 ಕಿ.ಮೀ ಮೆಟ್ರೋ, 450 ಕಿ.ಮೀ ರಸ್ತೆ ಅಭಿವೃದ್ಧಿ!

Bengaluru-Mangaluru Flight: ಬೆಂಗಳೂರು-ಮಂಗಳೂರು ವಿಮಾನ ಪ್ರಯಾಣಿಕರಿಗೆ ಬಂಪರ್ ಸುದ್ದಿ! ಇನ್ಮೇಲೆ ತಡರಾತ್ರಿಯೂ ವಿಮಾನ ಸೇವೆ

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ



Click it and Unblock the Notifications