For Quick Alerts
For Daily Alerts
ಮೂಲಸೌಕರ್ಯ ಕ್ಷೇತ್ರದಲ್ಲಿ ಹೂಡಿಕೆಗಳು ಹೆಚ್ಚಾಗಬೇಕಿದೆ: ಶಕ್ತಿಕಾಂತ ದಾಸ್
|
ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಪರಿಣಾಮದಿಂದಾಗಿ ಆರ್ಥಿಕತೆಯನ್ನು ಮುಂದಕ್ಕೆ ಒಯ್ಯಲು ಮೂಲಸೌಕರ್ಯ ಕ್ಷೇತ್ರದಲ್ಲಿ ಬಲವಾದ ಹೂಡಿಕೆಗಳನ್ನು ಹೆಚ್ಚಿಸಬೇಕಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
ಸಿಐಐ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ದಾಸ್, ಖಾಸಗಿ ಮತ್ತು ಸಾರ್ವಜನಿಕ ವಲಯಗಳು ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕಾಗುತ್ತದೆ. ಇತ್ತೀಚಿನ ಕೃಷಿ ಸುಧಾರಣೆಗಳು ಹೊಸ ಅವಕಾಶಗಳನ್ನು ತೆರೆದಿವೆ ಎಂದು ತಿಳಿಸಿದ್ದಾರೆ.
RBI ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿ ಮುಖ್ಯಾಂಶಗಳು
ಕೃಷಿ ಕ್ಷೇತ್ರವು ಪ್ರಕಾಶಮಾನವಾದ ತಾಣವಾಗಿ ಹೊರಹೊಮ್ಮುತ್ತಿದೆ ಎಂದು ಶಕ್ತಿಕಾಂತ ದಾಸ್ ಹೇಳಿದರು. ಕೃಷಿ ಆದಾಯದಲ್ಲಿ ನಿರಂತರ ಹೆಚ್ಚಳಕ್ಕೆ ಭಾರತಕ್ಕೆ ಹೊಸ ನೀತಿಗಳ ಅಗತ್ಯವಿದೆ ಎಂದರು.
ವಿದೇಶೀ ವಿನಿಮಯ ದರಕ್ಕೆ ಸಂಬಂಧಿಸಿದಂತೆ, ಆರ್ಬಿಐಗೆ ರೂಪಾಯಿಗೆ ಯಾವುದೇ ನಿಗದಿತ ಗುರಿ ಇಲ್ಲ ಆದರೆ ಅನಗತ್ಯ ಚಂಚಲತೆಯನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ದಾಸ್ ಹೇಳಿದರು.
English summary
Investments In The Infrastructure Sector Need To Increase: RBI Governor Shaktikanta Das
Story first published: Monday, July 27, 2020, 15:57 [IST]