ಭಾರತದಲ್ಲಿ ಮೊದಲಿನಂತೆ ಇಂಧನದ ಬೇಡಿಕೆ ಸಹಜ ಸ್ಥಿತಿಗೆ ಮರಳಲು 6ರಿಂದ 9 ತಿಂಗಳು ಬೇಕಾಗಬಹುದು. ಏಕೆಂದರೆ ಕೊರೊನಾ ನಿಯಂತ್ರಣಕ್ಕೆ ತರಬೇಕು ಎಂಬ ಕಾರಣಕ್ಕೆ ಈಗಲೂ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಇದೆ. ಆದ್ದರಿಂದ ಬೇಡಿಕೆ ಮತ್ತೆ ಸಹಜ ಸ್ಥಿತಿಗೆ ಮರಳುವುದಕ್ಕೆ ಸಮಯ ಬೇಕಾಗುತ್ತದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಹಣಕಾಸು ವಿಭಾಗದ ನಿರ್ದೇಶಕ ಎಸ್.ಕೆ. ಗುಪ್ತಾ ಅಭಿಪ್ರಾಯ ಪಟ್ಟಿದ್ದಾರೆ.
ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಇದ್ದ ಏಪ್ರಿಲ್ ನಲ್ಲಿ ತೈಲ ಮಾರಾಟದಲ್ಲಿ 45.8% ಕಡಿಮೆ ಆಗಿತ್ತು. ಆದರೆ ಮೇ ತಿಂಗಳಲ್ಲಿ ನಿರ್ಬಂಧ ತೆರವಾಗುತ್ತಾ ಬಂದರೂ ಈಗಲೂ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಇದೆ. ಸಹಜ ಸ್ಥಿತಿಗೆ ಬರಲು ಆರರಿಂದ ಒಂಬತ್ತು ತಿಂಗಳು ಬೇಕಾಗಬಹುದು ಎಂದು ಅವರು ಹೇಳಿದ್ದಾರೆ.
ಜುಲೈನಲ್ಲಿ ಡೀಸೆಲ್ ಬೇಡಿಕೆ 13% ಕುಸಿತ
ಮೇ ತಿಂಗಳಲ್ಲಿ ಚೇತರಿಕೆ ಕಾಣಿಸಿಕೊಂಡಿತ್ತು. ಆದರೆ ಜೂನ್ ತಿಂಗಳ ದ್ವಿತೀಯಾರ್ಧದಿಂದ ತೈಲ ಮಾರಾಟ ಕಡಿಮೆ ಆಗಿದೆ. ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳಲ್ಲಿ ಡೀಸೆಲ್ ಗೆ ಒಟ್ಟು ಬೇಡಿಕೆಯ ಐದನೇ ಎರಡು ಭಾಗದಷ್ಟು ಇದೆ. ಜೂನ್ ಗೆ ಹೋಲಿಸಿದರೆ ಜುಲೈನಲ್ಲಿ ಬೇಡಿಕೆ 13% ಕುಸಿದಿದ್ದು, 4.85 ಮಿಲಿಯನ್ ಟನ್ ಗೆ ಇಳಿಕೆ ಆಗಿದೆ. ಇನ್ನು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದಲ್ಲಿ 21% ಕಡಿಮೆ ಇದೆ.
ಪೆಟ್ರೋಲ್ ಮಾರಾಟ 11.5% ಕಡಿಮೆ
ಪೆಟ್ರೋಲ್ ಮಾರಾಟವು ಜೂನ್ ಗೆ ಹೋಲಿಸಿದಲ್ಲಿ ಜುಲೈನಲ್ಲಿ 1% ಇಳಿಕೆಯಾಗಿದ್ದು, 2.03 ಮಿಲಿಯನ್ ಟನ್ ತಲುಪಿದೆ. ಒಂದು ವರ್ಷದ ಹಿಂದಿನ ಅವಧಿಗೆ ಹೋಲಿಸಿದಲ್ಲಿ 11.5% ಕಡಿಮೆ ಆಗಿದೆ. ಜೆಟ್ ಇಂಧನವು ಜೂನ್ ಗಿಂತ ಜುಲೈನಲ್ಲಿ 4% ಜಾಸ್ತಿ ಆಗಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದಲ್ಲಿ 65% ಇಳಿಕೆ ಆಗಿದೆ.
ಅಡುಗೆ ಅನಿಲ ಎಲ್ ಪಿಜಿ ಬೇಡಿಕೆಯಲ್ಲಿ ನಿರಂತರ ಏರಿಕೆ
ಆದರೆ, ನಿರಂತರವಾಗಿ ಬೇಡಿಕೆ ಹೆಚ್ಚುತ್ತಾ ಹೋದದ್ದು ಅಡುಗೆ ಅನಿಲ ಎಲ್ ಪಿಜಿಗೆ ಮಾತ್ರ. ಜೂನ್ ಗಿಂತ ಜುಲೈನಲ್ಲಿ 10% ಹೆಚ್ಚಾಗಿ, 2.27 ಮಿಲಿಯನ್ ಟನ್ ಮುಟ್ಟಿದೆ. ಕಳೆದ ವರ್ಷದ ಈ ಅವಧಿಗೆ ಹೋಲಿಸಿದರೆ ಮಾರಾಟ ಪ್ರಮಾಣ 3.5% ಜಾಸ್ತಿ ಆಗಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಐಒಸಿ ನಿವ್ವಳ ಲಾಭದಲ್ಲಿ 47% ಕಡಿಮೆ ಆಗಿದೆ. ಆದರೆ ಎರಡನೇ ತ್ರೈಮಾಸಿಕದಲ್ಲಿ ಲಾಭ ಆಗಬಹುದು.
More From GoodReturns

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications