21 ದಿನಗಳ ಲಾಕ್ ಡೌನ್ ಅವಧಿ ಏಪ್ರಿಲ್ 14ಕ್ಕೆ ಪೂರ್ತಿ ಆಗಲಿದೆ. ಆದರೆ ಎಲ್ಲೆಲ್ಲಿ COVID- 19 ಪಾಸಿಟಿವ್ ಪ್ರಕರಣಗಳು ಹೆಚ್ಚಿವೆಯೋ ಅಲ್ಲೆಲ್ಲ ಲಾಕ್ ಡೌನ್ ಮುಂದುವರಿಸಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. "ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮುನ್ನ ಇನ್ನೂ ಕೆಲ ಸಮಯ ಕಾದುನೋಡಬೇಕಿದೆ" ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ 21 ದಿನಗಳ ಲಾಕ್ ಡೌನ್ ಅನ್ನು ಹೇಗೆ ಸಡಿಲಗೊಳಿಸುವುದು ಎಂಬ ಬಗ್ಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಇನ್ನೂ ನಿರ್ಧಾರ ಮಾಡಬೇಕಿದೆ. ಮಂಗಳವಾರದಂದು ಕರ್ನಾಟಕದಲ್ಲಿ ಹನ್ನೆರಡು ಕೊರೊನಾ ಪಾಸಿಟಿವ್ ಪ್ರಕರಣ ಹೊಸದಾಗಿ ಕಂಡುಬಂದಿದೆ.
ಅಲ್ಲಿಗೆ ಕರ್ನಾಟಕದಲ್ಲಿ 175 ಕೊರೊನಾ ಪ್ರಕರಣಗಳು ಕಂಡುಬಂದಿದ್ದು, 25 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 4 ಮಂದಿ ಸಾವನ್ನಪ್ಪಿದ್ದಾರೆ. "ರೆಡ್ ಅಲರ್ಟ್ ಹಾಗೂ ವಲಯ ಇರುವ ಕಡೆಗೆ ನನ್ನ ಪ್ರಕಾರ ಲಾಕ್ ಡೌನ್ ಹೆಚ್ಚುವರಿಯಾಗಿ ಎರಡು ವಾರ ಮುಂದುವರಿಯಬೇಕು. ಅದು ಏಪ್ರಿಲ್ ತಿಂಗಳ ಕೊನೆಯ ತನಕ. ಈ ಬಗ್ಗೆ ಕೇಂದ್ರಕ್ಕೆ ಮನವಿ ಮಾಡಿಕೊಳ್ಳುತ್ತೇವೆ" ಎಂದಿದ್ದಾರೆ ಸುಧಾಕರ್.

ಬೆಂಗಳೂರಿನಲ್ಲಿ ಅರವತ್ತಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳಿವೆ. ಸಾವಿರಾರು ಮಂದಿ ಗೃಹ ದಿಗ್ಬಂಧನದಲ್ಲಿ ಇದ್ದಾರೆ. ಕರ್ನಾಟಕದ ಕನಿಷ್ಠ ನಾಲ್ಕು ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಎರಡಂಕಿ ದಾಟಿದೆ. ಈವರೆಗೆ ಬೆಂಗಳೂರು, ಮೈಸೂರಿನಲ್ಲಿ ಅತಿ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣ ವರದಿ ಆಗಿದೆ.
More From GoodReturns

Karnataka Weather: ಬಿಸಿಲಲ್ಲಿ ಬೆಂದು ಹೋಗಿರುವ ಈ ಪ್ರದೇಶಗಳಲ್ಲಿ ಮಳೆ ಸಾಧ್ಯತೆ; ಎಲ್ಲಿ ತಿಳಿಯಿರಿ

Ugadi 2026: ಯುಗಾದಿ 2026 ಯಾವಾಗ? ಹಬ್ಬದ ಮಹತ್ವ, ಆಚರಣೆಗಳು ಮತ್ತು ಸಂಪ್ರದಾಯಗಳು

100 ಕೋಟಿ ದಾಟಿದ ಮಲೆ ಮಹದೇಶ್ವರ ದೇವಸ್ಥಾನದ ಆದಾಯ...ಕರ್ನಾಟಕದ ಎರಡನೇ ಅತಿ ಹೆಚ್ಚು ಆದಾಯದ ದೇವಾಲಯ

Karnataka SSLC Exam: ಇಂದಿನಿಂದ ಕರ್ನಾಟಕದಲ್ಲಿ SSLC ಪರೀಕ್ಷೆ; ವಿದ್ಯಾರ್ಥಿಗಳು ಈ ವಿಷಯ ದಿಳಿದೇ ಎಕ್ಸಾಂಗೆ ಹೋಗಿ

KOMUL Milk Price: ಕೋಲಾರ ರೈತರಿಗೆ ಯುಗಾದಿ ಗಿಫ್ಟ್; ಕೋಮುಲ್ ಹಾಲು ದರ 39.85 ರೂ.ಗೆ ಏರಿಕೆ

Egg Price Karnataka: ಕೋಳಿ ಮೊಟ್ಟೆ ದರ 7 ರಿಂದ 4 ರೂ.ವರೆಗೆ ಇಳಿಕೆ; ಕೋಳಿ ಸಾಕಾಣಿಕಾರರಿಗೆ ಟೆನ್ಶನ್

Karnataka Ration Card: ಪಡಿತರ ಚೀಟಿ ಪಡೆಯಲು ದೊಡ್ಡ ಬದಲಾವಣೆ.. ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚುವ ಸಾಧ್ಯತೆ

Ugadi Special Buses: ಯುಗಾದಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ನ್ಯೂಸ್…KSRTC 2,000 ಹೆಚ್ಚುವರಿ ಬಸ್ಗಳ ವ್ಯವಸ್ಥೆ

Karnataka 2nd PUC: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕ್…ಪಾಸಾಗಲು ಕೇವಲ 2 ವರ್ಷ ಮಾತ್ರ ಅವಕಾಶ

Indane cylinder: ಇಂಡೇನ್ ಸಿಲಿಂಡರ್ ಬುಕಿಂಗ್ ಈಗ ಸುಲಭ; ವಾಟ್ಸಾಪ್ ಮೂಲಕ ಬುಕ್ ಮಾಡೋದೇಗೆ ತಿಳಿಯಿರಿ

LPG Shortage: ರಾಜ್ಯದಲ್ಲಿ ಇನ್ನೂ 10 ದಿನ ಸಿಗಲ್ಲ ಎಲ್ಪಿಜಿ; ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದೇನು?



Click it and Unblock the Notifications