ಬೆಂಗಳೂರು: ಖಾಸಗಿಯವರಿಗೆ ಬಾಹ್ಯಾಕಾಶ ಕ್ಷೇತ್ರವನ್ನು ತೆರೆಯುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಕೆ.ಶಿವನ್ ಸ್ವಾಗತಿಸಿದ್ದಾರೆ.
ಗುರುವಾರ ನಡೆದ ಡಿಜಿಟಲ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ನಾವು ಬಹಳ ಉತ್ಸುಕರಾಗಿದ್ದೇವೆ ಮತ್ತು ಇದರಿಂದ ಉಂಟಾಗುವ ಎಲ್ಲಾ ಅವಕಾಶಗಳನ್ನು ಪಡೆಯಲು ನಮ್ಮ ಯುವಕರು ಮುಂದೆ ಬರುತ್ತಾರೆ ಎಂಬ ವಿಶ್ವಾಸವಿದೆ. ಬಾಹ್ಯಾಕಾಶ ವಲಯಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಲು ಹಲವಾರು ಸ್ಟಾರ್ಟ್ ಅಪ್ ಕಂಪನಿಗಳು ಈಗಾಗಲೇ ಮುಂದೆ ಬಂದಿವೆ. ಜಗತ್ತಿನಲ್ಲಿ ಬಾಹ್ಯಾಕಾಶ ಕ್ಷೇತ್ರದ ಆರ್ಥಿಕತೆಯ ಪ್ರಮುಖ ಕೇಂದ್ರವಾಗಿ ಭಾರತ ಹೊರಹೊಮ್ಮಲಿದೆ ಎಂದು ಹೇಳಿದ್ದಾರೆ.
ಖಾಸಗಿಯವರು ಮುಂದೆ ಬಂದು ಬಾಹ್ಯಾಕಾಶ ಚಟುವಟಿಕೆಗಳನ್ನು ನಿರ್ವಹಿಸಲು ಮತ್ತು ಭಾರತವನ್ನು ಜಾಗತಿಕ ತಂತ್ರಜ್ಞಾನ ಶಕ್ತಿ ಕೇಂದ್ರ ಮಾಡಲು ಖಾಸಗಿಯವರನ್ನು ನಾನು ತುಂಬಾ ಸಂತೋಷದಿಂದ ಆಹ್ವಾನಿಸುತ್ತೇನೆ. ಈ ಸುಧಾರಣೆಗಳು ಭಾರತವನ್ನು ಬಾಹ್ಯಾಕಾಶ ಕ್ಷೇತ್ರದ ಹೊಸ ಯುಗಕ್ಕೆ ಕರೆದೊಯ್ಯುತ್ತವೆ ಎಂದು ಇಸ್ರೋ ಮುಖ್ಯಸ್ಥರು ಹೇಳಿದರು.
ಇದಕ್ಕಾಗಿ IN-SPACe ರಚಿಸಲಾಗಿದ್ದು, ಇದು ಉದ್ಯಮ, ಶೈಕ್ಷಣಿಕ ಮತ್ತು ಭಾರತದ ಸರ್ಕಾರದ ಪ್ರತಿನಿಧಿಗಳನ್ನು ಹೊಂದಿರುತ್ತದೆ. IN-SPACe ಕಾರ್ಯರೂಪಕ್ಕೆ ಬರಲು 3 ರಿಂದ 6 ತಿಂಗಳುಗಳು ತೆಗೆದುಕೊಳ್ಳುತ್ತದೆ ಎಂದು ಶಿವನ್ ಹೇಳಿದರು.

ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಬಾಹ್ಯಾಕಾಶ ಕ್ಷೇತ್ರವನ್ನು ಖಾಸಗಿಯವರಿಗೆ ತೆರೆಯಲು ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ (ಐಎನ್-ಸ್ಪೇಸ್) ರಚನೆಗೆ ಅನುಮೋದನೆ ನೀಡಿತು. ಖಾಸಗಿ ವಲಯಕ್ಕೆ ಭಾರತೀಯ ಬಾಹ್ಯಾಕಾಶ ಮೂಲಸೌಕರ್ಯಗಳನ್ನು ಬಳಸಲು ಐಎನ್-ಸ್ಪೇಸ್ ಅವಕಾಶ ಮಾಡಿ ಕೊಡುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!

ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ: ಭಾರತೀಯ ಷೇರು ಮಾರುಕಟ್ಟೆ, ಚಿನ್ನ-ಬೆಳ್ಳಿ ಮತ್ತು ತೈಲ ಬೆಲೆ ಮೇಲೆ ತೀವ್ರ ಪರ



Click it and Unblock the Notifications