ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ನೀಡಲಾಗಿದೆ. 3,300 ಕೋಟಿ ರುಪಾಯಿ ಹವಾಲ ಹಗರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ತೆರಿಗೆ ವಂಚನೆ ಪ್ರಕರಣದ ಭಾಗವಾಗಿರುವ ಹೈದರಾಬಾದ್ ಮೂಲದ ಕಂಪೆನಿಯಿಂದ 170 ಕೋಟಿ ರುಪಾಯಿ ಹಣ ಪಡೆದ ಬಗ್ಗೆ ವಿವರಣೆ ಕೇಳಿ ಕಾಂಗ್ರೆಸ್ ಗೆ ನೋಟಿಸ್ ನೀಡಲಾಗಿದೆ ಎಂದು ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.
ಮೂಲಸೌಕರ್ಯ ವಲಯದ ಪ್ರಮುಖ ಕಾರ್ಪೊರೇಟ್ ಹೌಸ್ ಗಳ ಮೇಲೆ ದೆಹಲಿ, ಮುಂಬೈ, ಹೈದರಾಬಾದ್ ಗಳಲ್ಲಿ ಕಳೆದ ತಿಂಗಳು ದಾಳಿ ನಡೆಸಲಾಗಿತ್ತು. ಆ ತನಿಖೆಯ ಮುಂದುವರಿದ ಭಾಗವಾಗಿ ಕಾಂಗ್ರೆಸ್ ಪಕ್ಷಕ್ಕೆ ನೋಟಿಸ್ ನೀಡಲಾಗಿದೆ. ಅಧಿಕಾರಿಗಳ ಪ್ರಕಾರ, ಹೈದರಾಬಾದ್ ಮೂಲದ ಮೇಘಾ ಇನ್ಫ್ರಾಸ್ಟ್ರಕ್ಚರ್ ಮತ್ತು ಎಂಜಿನಿಯರಿಂಗ್ ನಿಂದ ಕಾಂಗ್ರೆಸ್ ಗೆ ಹಣ ನೀಡಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಕಾಂಗ್ರೆಸ್ ನ ಕೆಲವು ಪದಾಧಿಕಾರಿಗಳ ಮೇಲೆ ಕೂಡ ತೆರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಕೇಂದ್ರೀಯ ನೇರ ತೆರಿಗೆ ಮಂಡಳಿಯು (ಸಿಬಿಡಿಟಿ) ಆದಾಯ ತೆರಿಗೆ ಇಲಾಖೆಯ ನೀತಿಗಳನ್ನು ಮಾಡುತ್ತದೆ. ಸಿಬಿಡಿಟಿ ಮಾಹಿತಿ ನೀಡಿ, ನಕಲಿ ಕಾಂಟ್ರ್ಯಾಕ್ಟ್ ಬಿಲ್ ಗಳ ಮೂಲಕ ಮೂರು ಸಾವಿರದ ಮುನ್ನೂರು ಕೋಟಿ ರುಪಾಯಿ ತನಕ ಹಣದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

ಆಂಧ್ರಪ್ರದೇಶದ ಪ್ರಮುಖ ವ್ಯಕ್ತಿಯೊಬ್ಬರಿಗೆ ನೂರೈವತ್ತು ಕೋಟಿಗೂ ಹೆಚ್ಚು ಮೊತ್ತದ ನಗದು ಪಾವತಿ ಮಾಡಿದ ಬಗ್ಗೆ ಸಾಕ್ಷ್ಯಾಧಾರವಿದೆ. ಶೋಧ ಕಾರ್ಯಾಚರಣೆ ವೇಳೆ ಈ ಅಂಶ ಬೆಳಕಿಗೆ ಬಂದಿದೆ ಎಂದು ಸಿಬಿಡಿಟಿ ತಿಳಿಸಿದೆ. ಶೋಧದ ವೇಳೆ ಲೆಕ್ಕ ನೀಡದ ನಾಲ್ಕು ಕೋಟಿ ಇಪ್ಪತ್ತು ಲಕ್ಷ ನಗದು ಹಾಗೂ ಮೂರು ಕೋಟಿ ಇಪ್ಪತ್ತು ಲಕ್ಷಕ್ಕೂ ಹೆಚ್ಚು ಮೌಲ್ಯದ ಆಭರಣ ಕೂಡ ವಶಪಡಿಸಿಕೊಳ್ಳಲಾಗಿದೆ.
ಹಣವನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗೆ ಮೀಸಲಿರಿಸಲಾಗಿತ್ತು. ಆದರೆ ವಿವಿಧ ಜಾಲಗಳ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಎನ್ ಸಿಆರ್ ಹಾಗೂ ಮುಂಬೈನಲ್ಲಿ ಇರುವ ಕಂಪೆನಿಗಳೇ ಈ ವರ್ಗಾವಣೆಯಲ್ಲಿ ಭಾಗಿಯಾಗಿವೆ. ದಕ್ಷಿಣ ಭಾರತದಲ್ಲಿ ಆರ್ಥಿಕವಾಗಿ ದುರ್ಬಲರಾದವರಿಗೆ ಯೋಜನೆಗಳು ಹಾಗೂ ಪ್ರಮುಖ ಮೂಲಸೌಕರ್ಯ ಯೋಜನೆಗಳ ಬೋಗಸ್ ಬಿಲ್ ಸೃಷ್ಟಿ ಮಾಡಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications