ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಅಥವಾ ತಮ್ಮ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಎರಡು ವರ್ಷಗಳ ಒಳಗೆ ಮಾತ್ರ ಅವಕಾಶ ಸಿಗಲಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಹೊಸ ನಿಯಮ ಜಾರಿಗೆ ತಂದು ಆದೇಶ ಹೊರಡಿಸಿದೆ. ಈ ನಿಯಮದಂತೆ, ವಿದ್ಯಾರ್ಥಿ ಯಾವ ವರ್ಷ ಪರೀಕ್ಷೆಗೆ ನೋಂದಾಯಿಸಿಕೊಳ್ಳುತ್ತಾನೋ ಆ ವರ್ಷ ಮತ್ತು ಅದರ ಮುಂದಿನ ಶೈಕ್ಷಣಿಕ ವರ್ಷದಲ್ಲಿ ನಡೆಯುವ ಪರೀಕ್ಷೆಗಳಲ್ಲಿಯೇ ಫಲಿತಾಂಶ ಸುಧಾರಿಸಿಕೊಳ್ಳಬೇಕು. ಎರಡು ವರ್ಷ ಕಳೆದ ನಂತರ ಮತ್ತೆ ಪರೀಕ್ಷೆ ಬರೆದು ಅಂಕಗಳನ್ನು ಹೆಚ್ಚಿಸಿಕೊಳ್ಳಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

2024-25ನೇ ಶೈಕ್ಷಣಿಕ ವರ್ಷದಿಂದ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ ಮೂರು ವಾರ್ಷಿಕ ಪರೀಕ್ಷೆಗಳನ್ನು ಬರೆಯುವ ವ್ಯವಸ್ಥೆ ಜಾರಿಯಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಒಂದೇ ವರ್ಷದೊಳಗೆ ಹಲವು ಅವಕಾಶಗಳು ಸಿಗುತ್ತಿವೆ. ಈಗಿನ ಹೊಸ ನಿಯಮದ ಪ್ರಕಾರ, ಒಬ್ಬ ವಿದ್ಯಾರ್ಥಿಗೆ ಒಟ್ಟು ಆರು ಬಾರಿ ಪರೀಕ್ಷೆ ಬರೆಯುವ ಅವಕಾಶ ಇರುತ್ತದೆ. ಆದರೆ ಈ ಆರು ಅವಕಾಶಗಳನ್ನು ಎರಡು ವರ್ಷಗಳೊಳಗೆ ಬಳಸಬೇಕು. ಅಂದರೆ, ನೋಂದಾಯಿಸಿದ ವರ್ಷದಲ್ಲಿ ನಡೆಯುವ ಮೂರು ಪರೀಕ್ಷೆಗಳು ಮತ್ತು ಮುಂದಿನ ವರ್ಷ ನಡೆಯುವ ಮೂರು ಪರೀಕ್ಷೆಗಳು ಸೇರಿ ಒಟ್ಟು ಆರು ಅವಕಾಶಗಳು ಮಾತ್ರ ಲಭ್ಯ.
ಹಿಂದಿನ ನಿಯಮದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಅಥವಾ ಫಲಿತಾಂಶ ಸುಧಾರಿಸಿಕೊಳ್ಳಲು ಬಯಸುವವರು ಆರು ಬಾರಿ ಪರೀಕ್ಷೆ ಬರೆಯಬಹುದಾಗಿತ್ತು. ಆದರೆ ಅದಕ್ಕೆ ವರ್ಷ ಅಥವಾ ಕಾಲಮಿತಿ ಎಂಬ ನಿಯಮ ಇರಲಿಲ್ಲ. ಇದರಿಂದ ಹಲವು ವರ್ಷಗಳ ನಂತರವೂ ಕೆಲವರು ಮತ್ತೆ ಪರೀಕ್ಷೆ ಬರೆಯುತ್ತಿದ್ದರು. ಈಗ ಈ ಪರಿಸ್ಥಿತಿಗೆ ಅಂತ್ಯಕಾಣಿಸಲು ಶಿಕ್ಷಣ ಇಲಾಖೆ ಕಾಲಮಿತಿಯನ್ನು ನಿಗದಿಪಡಿಸಿದೆ.
ಈ ನಿಯಮವನ್ನು ತರಲು ಪ್ರಮುಖ ಕಾರಣ ಆಡಳಿತಾತ್ಮಕ ಮತ್ತು ತಾಂತ್ರಿಕ ಅಡಚಣೆಗಳು ಎನ್ನಲಾಗಿದೆ. ಪ್ರತಿ ವರ್ಷ ಪರೀಕ್ಷಾ ನೋಂದಣಿ ಮಾಡುವಾಗ ಹಿಂದಿನ ವರ್ಷಗಳ ವಿದ್ಯಾರ್ಥಿಗಳ ಮಾಹಿತಿ, ಅಂಕಗಳು ಮತ್ತು ವಿಷಯವಾರು ವರದಿಗಳನ್ನು ಕಾಲೇಜು ಲಾಗಿನ್ನಲ್ಲಿ ದಾಖಲಿಸಬೇಕಾಗುತ್ತಿತ್ತು. ಹೆಚ್ಚು ಸಂಖ್ಯೆಯ ವಿದ್ಯಾರ್ಥಿಗಳ ಮಾಹಿತಿಯನ್ನು ನಿರ್ವಹಿಸುವಾಗ ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದುದು ಮಂಡಳಿಗೆ ತೊಂದರೆಯಾಗಿತ್ತು. ಜೊತೆಗೆ, ಅಂಕಪಟ್ಟಿ ಮುದ್ರಣೆ ಮತ್ತು ವಿತರಣೆ ಪ್ರಕ್ರಿಯೆಯೂ ಹೆಚ್ಚಿನ ಹೊರೆ ಉಂಟುಮಾಡುತ್ತಿತ್ತು. ಒಬ್ಬ ವಿದ್ಯಾರ್ಥಿ ನಂತರ ಫಲಿತಾಂಶ ಸುಧಾರಿಸಿಕೊಂಡರೆ, ಹೊಸ ಅಂಕಪಟ್ಟಿ ಮುದ್ರಿಸಿ ಹಳೆಯದನ್ನು ಹಿಂತೆಗೆದುಕೊಳ್ಳುವ ಕೆಲಸವೂ ಹೆಚ್ಚುತ್ತಿತ್ತು.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಈ ಎಲ್ಲ ಕಾರಣಗಳನ್ನು ಗಮನಿಸಿ ಸರ್ಕಾರಕ್ಕೆ ಎರಡು ವರ್ಷಗಳ ಮಿತಿ ವಿಧಿಸುವಂತೆ ಪ್ರಸ್ತಾವನೆ ಸಲ್ಲಿಸಿತ್ತು. ಮಂಡಳಿ ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರ ಪ್ರಕಾರ, ಹಿಂದೆ 20ರಿಂದ 30 ವರ್ಷದವರೂ ಫಲಿತಾಂಶ ಸುಧಾರಣೆಗಾಗಿ ಪರೀಕ್ಷೆ ಬರೆಯುತ್ತಿದ್ದರು. ಆದರೆ ಈಗ ಪಠ್ಯಕ್ರಮ ಬದಲಾವಣೆ ಸೇರಿದಂತೆ ಹಲವು ವಿಚಾರಗಳನ್ನು ಗಮನಿಸಿ ಸರ್ಕಾರ ಈ ಹೊಸ ನಿಯಮ ಜಾರಿಗೆ ತಂದಿದೆ.
ಈ ಹೊಸ ನಿಯಮವು ರೆಗ್ಯುಲರ್, ಖಾಸಗಿ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ. ಒಟ್ಟಿನಲ್ಲಿ, ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಸುಧಾರಿಸಿಕೊಳ್ಳಲು ಅವಕಾಶ ಇದ್ದರೂ, ಅದನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂಬ ಸ್ಪಷ್ಟ ಸಂದೇಶವನ್ನು ಶಿಕ್ಷಣ ಇಲಾಖೆ ನೀಡಿದೆ.
More From GoodReturns

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Karnataka Weather: ಅಯ್ಯೋ, ಎಂಥಾ ಬಿಸಿಲು? ಜನರೇ ಹೊರಹೋಗುವ ಮುನ್ನ ಎಚ್ಚರ

Indane cylinder: ಇಂಡೇನ್ ಸಿಲಿಂಡರ್ ಬುಕಿಂಗ್ ಈಗ ಸುಲಭ; ವಾಟ್ಸಾಪ್ ಮೂಲಕ ಬುಕ್ ಮಾಡೋದೇಗೆ ತಿಳಿಯಿರಿ

LPG-Bengaluru: ಎಲ್ಪಿಜಿ ಕೊರತೆ ಬೆನ್ನಲ್ಲೇ, ಬೆಂಗಳೂರಲ್ಲಿ ಸಿಲಿಂಡರನ್ನೇ ಕಳ್ಳತನ ಮಾಡಿದ ಖದೀಮ! ವಿಡಿಯೋ ವೈರಲ್

Bengaluru Traffic: ಬೆಂಗಳೂರಿಗರೇ ಇಲ್ಲಿ ಗಮನಿಸಿ; ಇಂದು ಇಲ್ಲೆಲ್ಲಾ ಸಂಚಾರ ಬಂದ್!

LPG Shortage: ರಾಜ್ಯದಲ್ಲಿ ಇನ್ನೂ 10 ದಿನ ಸಿಗಲ್ಲ ಎಲ್ಪಿಜಿ; ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದೇನು?

Egg Price Karnataka: ಕೋಳಿ ಮೊಟ್ಟೆ ದರ 7 ರಿಂದ 4 ರೂ.ವರೆಗೆ ಇಳಿಕೆ; ಕೋಳಿ ಸಾಕಾಣಿಕಾರರಿಗೆ ಟೆನ್ಶನ್

Karnataka Ration Card: ಪಡಿತರ ಚೀಟಿ ಪಡೆಯಲು ದೊಡ್ಡ ಬದಲಾವಣೆ.. ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚುವ ಸಾಧ್ಯತೆ

Eid-ul-Fitr 2026: ಭಾರತದಲ್ಲಿ ರಂಜಾನ್ ಹಬ್ಬ ಯಾವಾಗ? ಇದೇ ದಿನ ಕಾಣಿಸಲಿದೆ ಚಂದ್ರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ



Click it and Unblock the Notifications