ಕರ್ನಾಟಕ ತನ್ನ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು (ಜೆಸಿಸಿ) 2029ರ ವೇಳೆಗೆ ದ್ವಿಗುಣ ಗೊಳಿಸುವ ಗುರಿಯನ್ನು ಹೊಂದಿದ್ದು, ಈ ಮೂಲಕ 3.5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದೆ ಎಂದು ಶುಕ್ರವಾರ ಬಿಡುಗಡೆ ಮಾಡಿದ ಕರಡು ನೀತಿಗಳಲ್ಲಿ ತಿಳಿದು ಬಂದಿದೆ.
ಕರಡು ನೀತಿಯ ಅನ್ವಯ ಹಲವು ಮಹತ್ವದ ನಿರ್ಣಯಗಳು ಒಳಗೊಂಡಿದೆ. ಜಾಗತಿಕ ಸಾಮರ್ಥ್ಯ ಕೇಂದ್ರಗಳ ಮೂಲಕ ಆರ್ಥಿಕ ಉತ್ಪಾದನೆಯಲ್ಲಿ 50 ಬಿಲಿಯನ್ ಡಾಲರ್ ಮುಟ್ಟುವ ಗುರಿಯನ್ನು ಹೊಂದಲಾಗಿದೆ. ದೇಶದಲ್ಲಿ ಸುಮಾರು 5.70 ಲಕ್ಷ ಜೆಸಿಸಿಗಳು ಇದ್ದು, ಈ ಪೈಕಿ ಬೆಂಗಳೂರು ಅಧಿಕ ಪಾಲನ್ನು ಹೊಂದಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಸದ್ಯ ರಾಜ್ಯದಲ್ಲಿ 570 ಜೆಸಿಸಿಗಳು ಕಾರ್ಯ ನಿರ್ವಹಿಸುತ್ತಿವೆ.

ಭಾರತದಲ್ಲೇ ಜೆಸಿಸಿ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕದ್ದಾಗಲಿದೆ. ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧ ಸ್ಥಳಗಳಲ್ಲಿ ನ್ಯಾನೋ ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ಪ್ರಾರಂಭಿಸುವ ಗುರಿಯನ್ನು ಹೊಂದಲಾಗಿದೆ. ಮೈಸೂರು, ಶಿವಮೊಗ್ಗ, ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ನಗರದಲ್ಲಿ ನ್ಯಾನೋ ಕೇಂದ್ರಗಳ ಸ್ಥಾಪನೆಗೆ ಚಿಂತನೆ ನಡೆದಿದೆ.
3 ಹೊಸ ತಂತ್ರಜ್ಞಾನ ಪಾರ್ಕ್
1,700 ಕ್ಕೂ ಹೆಚ್ಚು ಜಿಸಿಸಿ ಗಳು ಭಾರತದಾದ್ಯಂತ ಕಾರ್ಯನಿರ್ವಹಿಸುತ್ತಿದ್ದು, 1.9 ಮಿಲಿಯನ್ಗಿಂತಲೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತಿವೆ. 2030 ರ ವೇಳೆಗೆ ಈ ಸಂಖ್ಯೆ 2,100-2,200 ಕ್ಕೆ ಏರಬಹುದು ಎಂದು ಅಂದಾಜಿಸಲಾಗಿದೆ. ಅಲ್ಲದೆ 2.5 ಮಿಲಿಯನ್ನಿಂದ 2.8 ಮಿಲಿಯನ್ ಜನರಿಗೆ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು ಹಾಗೂ ಬೆಂಗಳೂರು ಹೊರ ವಲಯದಲ್ಲಿ 3 ಹೊಸ ತಂತ್ರಜ್ಞಾನ ಪಾರ್ಕ್ ರಚಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ. ಈ ಮೂಲಕ ಕೌಶಲ್ಯ ಅಭಿವೃದ್ಧಿಗೆ ಪೂರಕ ಕೋರ್ಸ್, ಸಂಶೋಧನೆಗಳಿಗೆ ಧನ ಸಹಾಯ ನೀಡುತ್ತದೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆಯ ಮೇಲೆ ಕೇಂದ್ರಿಕರಿಸುವ ಸಂಶೋಧಕರಿಗೆ ಒತ್ತು ನೀಡಲಾಗುವುದು. ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗಾಗಿ 100 ಕೋಟಿ ಆವಿಷ್ಕಾರ ನಿಧಿ ರಚಿಸಲು ಉದ್ದೇಶಿಸಲಾಗಿದೆ.
ಇನ್ನು ಬೆಂಗಳೂರಿನ ಕ್ಲಸ್ಟರ್ ಆಚೆಗೆ ನ್ಯಾನೋ ಜೆಸಿಸಿಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ ಸೂಕ್ತ ಬಲ ಮತ್ತ ಬೆಂಬಲವನ್ನು ನೀಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಬೆಂಗಳೂರು ಆಚೆಗೆ ಸಂಸ್ಥೆಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಲಾಗುವುದು ಎಂದು ಕರಡು ಪ್ರತಿಯಲ್ಲಿ ತಿಳಿಸಿಲಾಗಿದೆ. ಅದರಂತೆ ಬಾಡಿಗೆ, ಪೇಟೆಂಟ್, ವಿದ್ಯುತ್, ತೆರಿಗೆಯ ಮೇಲೆ ವಿನಾಯಿತಿ ನೀಡಲು ಉದ್ದೇಶಿಸಲಾಗಿದೆ. ಆದರೆ ಕಂಪನಿಗಳು ಎಷ್ಟು ಉದ್ಯೋಗಗಳನ್ನು ಸೃಷ್ಟಿಸುತ್ತವೇ ಎಂಬುದರ ಮೇಲೆ ಈ ಅಂಶಗಳು ನಿರ್ಧಾರವಾಗಲಿವೆ.
More From GoodReturns

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Bengaluru Airport: ಬೆಂಗಳೂರು ಏರ್ಪೋರ್ಟ್ಗೆ 2025ರ ACI ಪ್ರಶಸ್ತಿ... ಪ್ರಯಾಣಿಕರ ಹೃದಯ ಗೆದ್ದ ವಿಮಾನ ನಿಲ್ದಾಣ!

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ



Click it and Unblock the Notifications