ಕರ್ನಾಟಕ ಸರ್ಕಾರವು ಮಂಗಳವಾರ 62 ಕೈಗಾರಿಕಾ ಹೂಡಿಕೆ ಪ್ರಸ್ತಾವನೆಗಳನ್ನು ಅನುಮೋದಿಸಿದೆ. ಅಂದರೆ ಕರ್ನಾಟಕ ಸರ್ಕಾರವು 62 ಯೋಜನೆಗಳಿಗೆ ಅನುಉಮೋದನೆ ನೀಡಿದೆ. ಇದು ಸುಮಾರು 3,607.19 ಕೋಟಿ ರೂಪಾಯಿಯ ಯೋಜನೆಯಾಗಿದ್ದು, ರಾಜ್ಯದಲ್ಲಿ 10,755 ಉದ್ಯೋಗ ಸೃಷ್ಟಿ ಮಾಡುವ ಗುರಿಯಿದೆ.
ಕರ್ನಾಟಕ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ರಾಜ್ಯ ಮಟ್ಟದ ಎಸ್ಎಲ್ಎಸ್ಡಬ್ಲ್ಯುಸಿಸಿ 50 ಕೋಟಿ ರೂಪಾಯಿಗಿಂತ ಅಧಿಕ ಹೂಡಿಕೆಯನ್ನು ಹೊಂದಿರುವ ಒಟ್ಟು ಎಂಟು ಯೋಜನೆಗಳನ್ನು ಅನುಮೋದನೆ ಮಾಡಿದೆ. ಈ ಎಂಟು ಯೋಜನೆಗಳ ಒಟ್ಟು ಮೌಲ್ಯವು ಸುಮಾರು 2,088.44 ಕೋಟಿ ರೂಪಾಯಿ ಆಗಿದೆ. ಹಾಗೆಯೇ ಈ ಎಂಟು ಯೋಜನೆಗಳು 6,360 ಉದ್ಯೋಗ ಸೃಷ್ಟಿಸುವ ನಿರೀಕ್ಷೆಯಿದೆ.

ಯೋಜನೆಗಳಿಗೆ ಪ್ರಮುಖ ಹೂಡಿಕೆದಾರರು ಯಾರು?
ಈ ಅನುಮೋದಿತ ಯೋಜನೆಗೆ ಪ್ರಮುಖವಾಗಿ ಟೆಕ್ಸ್ಕಾನ್ ಸ್ಟೀಲ್ಸ್, ಹುಂಡ್ರಿ ಶುಗರ್ಸ್ ಆಂಡ್ ಇಥನಾಲ್ ಪ್ರೈವೇಟ್ ಲಿಮಿಟೆಡ್, ಬ್ರೆನ್ ಲೈಫ್ ಸೈನ್ಸಸ್, ಆಲ್ಪೈನ್ ಎಥೆನಾಲ್, ವಿರೂಪಾಕ್ಷ ಲ್ಯಾಬೋರೇಟರೀಸ್ ಮತ್ತು ಕ್ವಾಲ್ಕಾಮ್ ಇಂಡಿಯಾ ಹೂಡಿಕೆಯನ್ನು ಮಾಡಲಿದೆ.
62 ಪ್ರಸ್ತಾವನೆಗಳ ಪೈಕಿ 51 ಹೂಡಿಕೆ ಯೋಜನೆಗಳು 15 ಕೋಟಿಯಿಂದ 50 ಕೋಟಿ ರೂಪಾಯಿ ಹೂಡಿಕೆಯದ್ದಾಗಿದೆ. ಈ 51 ಯೋಜನೆಗಳು ಒಟ್ಟು 941.40 ಕೋಟಿ ರೂಪಾಯಿಗಳಾಗಿದ್ದು, ರ್ನಾಟಕದಲ್ಲಿ 4,395 ಜನರಿಗೆ ಉದ್ಯೋಗಾವಕಾಶವನ್ನು ಸೃಷ್ಟಿಸುವ ನಿರೀಕ್ಷೆಯಿದೆ.
577.35 ಕೋಟಿ ರೂಪಾಯಿ ಹೆಚ್ಚುವರಿ ಹೂಡಿಕೆಯೊಂದಿಗೆ ಮೂರು ಯೋಜನೆಗಳಿಗೆ ಸಮಿತಿ ಅನುಮೋದನೆ ನೀಡಿದೆ. ಅಕ್ಟೋಬರ್ನಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಬಿಜೆಪಿ ಆಡಳಿತದಲ್ಲಿ ಅನುಮೋದನೆಗೊಂಡ ಯೋಜನೆಗಳು ಮತ್ತು ಇನ್ನೂ ಪ್ರಾರಂಭವಾಗದ ಯೋಜನೆಗಳ ಪರಿಶೀಲನೆ ನಡೆಸಲು ನಿರ್ಧರಿಸಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅನುಮೋದಿತ ಕಾಮಗಾರಿಗಳಿಗೆ ಅಗತ್ಯವಿರುವ ಹಣಕಾಸು ಹಿಂದಿನ ಸರ್ಕಾರದ ಅವಧಿಯಲ್ಲಿ ಬಜೆಟ್ಗಿಂತ ಮೂರು ಪಟ್ಟು ಹೆಚ್ಚು ಮತ್ತು ಬಾಕಿ ಇರುವ ಬಿಲ್ ಮೊತ್ತವು ಗಮನಾರ್ಹವಾಗಿ ಹೆಚ್ಚಾಗಿದೆ.
ಕೆಎಚ್ಐಆರ್ ಸಿಟಿ ನಿರ್ಮಾಣ, ಹೂಡಿಕೆ ಎಷ್ಟು?
ಜಾಗತಿಕ ದರ್ಜೆಯ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರವಾದ ಕೆಎಚ್ಐಆರ್ ಸಿಟಿ ಅನ್ನು ಬೆಂಗಳೂರಿನಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಗಾಗಿ ಸುಮಾರು 40 ಸಾವಿರ ಕೋಟಿ ರೂಪಾಯಿ ಹೂಡಿಕೆಯನ್ನು ಮಾಡಲಾಗುತ್ತದೆ. ಹಾಗೆಯೇ ಉದ್ಯೋಗ ಸೃಷ್ಟಿಯನ್ನು ಕೂಡಾ ಮಾಡಲಾಗುತ್ತದೆ.
ಈ ಬಗ್ಗೆ ಟ್ವಿಟ್ಟರ್ ಮೂಲಕ ವಾಣಿಜ್ಯ ಮತ್ತು ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ ಮಾಹಿತಿ ನೀಡಿದ್ದಾರೆ. "ಜಾಗತಿಕ ದರ್ಜೆಯ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನಾ ನಗರ (#ಕೆಎಚ್ಐಆರ್ ಸಿಟಿ)ವನ್ನು ಅಭಿವೃದ್ಧಿ ಪಡಿಸಲಾಗುವುದು. 40 ಸಾವಿರ ಕೋಟಿ ರೂಪಾಯಿ ಹೂಡಿಕೆಯಾಗಿ 80 ಸಾವಿರದಿಂದ 1 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ," ಎಂದು ತಿಳಿಸಿದರು.
More From GoodReturns

Indane cylinder: ಇಂಡೇನ್ ಸಿಲಿಂಡರ್ ಬುಕಿಂಗ್ ಈಗ ಸುಲಭ; ವಾಟ್ಸಾಪ್ ಮೂಲಕ ಬುಕ್ ಮಾಡೋದೇಗೆ ತಿಳಿಯಿರಿ

Eid-ul-Fitr 2026: ಭಾರತದಲ್ಲಿ ರಂಜಾನ್ ಹಬ್ಬ ಯಾವಾಗ? ಇದೇ ದಿನ ಕಾಣಿಸಲಿದೆ ಚಂದ್ರ

LPG-Bengaluru: ಎಲ್ಪಿಜಿ ಕೊರತೆ ಬೆನ್ನಲ್ಲೇ, ಬೆಂಗಳೂರಲ್ಲಿ ಸಿಲಿಂಡರನ್ನೇ ಕಳ್ಳತನ ಮಾಡಿದ ಖದೀಮ! ವಿಡಿಯೋ ವೈರಲ್

Egg Price Karnataka: ಕೋಳಿ ಮೊಟ್ಟೆ ದರ 7 ರಿಂದ 4 ರೂ.ವರೆಗೆ ಇಳಿಕೆ; ಕೋಳಿ ಸಾಕಾಣಿಕಾರರಿಗೆ ಟೆನ್ಶನ್

Karnataka Ration Card: ಪಡಿತರ ಚೀಟಿ ಪಡೆಯಲು ದೊಡ್ಡ ಬದಲಾವಣೆ.. ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚುವ ಸಾಧ್ಯತೆ

Bengaluru Traffic: ಬೆಂಗಳೂರಿಗರೇ ಇಲ್ಲಿ ಗಮನಿಸಿ; ಇಂದು ಇಲ್ಲೆಲ್ಲಾ ಸಂಚಾರ ಬಂದ್!

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Investment Tips: 15,000 ಸಂಬಳ ಇದ್ರೂ, ಉಳಿತಾಯ ಮಾಡುವುದು ಹೇಗೆ? ಇಲ್ಲಿದೆ ಸೂಪರ್ ಟಿಪ್ಸ್



Click it and Unblock the Notifications