ಬೆಂಗಳೂರು: ಕೊರೊನಾವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇನ್ನೊಂದೆಡೆ ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಪೀಡಿತರ ಚಿಕಿತ್ಸೆಗೆ ಮಾನದಂಡಗಳನ್ನು ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ಸುಪ್ರೀಂಕೋರ್ಟ್ ಕೊರೊನಾ ಪೀಡಿತರಿಗೆ ವಿಮೆ ಅನ್ವಯವಾಗುತ್ತದೆ ಎಂದು ಹೇಳಿದೆ.
ಅದಾಗ್ಯೂ ಕೊರೊನಾವೈರಸ್ ಸೋಂಕಿಗೆ ತುತ್ತಾದರೆ ಆಸ್ಪತ್ರೆ ವೆಚ್ಚ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲು ಏನು ಮಾಡುವುದು ಎಂದು ಅನೇಕರ ಪ್ರಶ್ನೆಯಾಗಿದೆ.
ಈ ಹಿನ್ನೆಲೆಯಲ್ಲಿ ಕರ್ಣಾಟಕ ಬ್ಯಾಂಕ್ ಕೊರೊನಾ ವಿಮಾ ಯೋಜನೆ ಜಾರಿಗೊಳಿಸಿದೆ. ಇದು ಸಾರ್ವಜನಿಕರಿಗೆ ಆರೋಗ್ಯ ರಕ್ಷಣೆ ನೀಡುವ ವಿಶೇಷ ವಿಮಾ ಯೋಜನೆಯಾಗಿದೆ.
399 ರುಪಾಯಿ ಕಂತು
399 ರುಪಾಯಿ ಕಂತನ್ನು ನೀಡುವ ಮೂಲಕ ಈ ವಿಮೆ ಪಡೆಯಬಹುದಾಗಿದೆ. ಗ್ರಾಹಕರಲ್ಲದವರೂ ವಿಮಾ ಕಂತನ್ನು ಪಾವತಿಸಿ, ವಿಮೆ ಪಡೆಯುವ ಸೌಲಭ್ಯ ಕಲ್ಪಿಸಲಾಗಿದೆ.
18 ರಿಂದ 65 ವಯಸ್ಸಿನ ವಯೋಮಿತಿ
ಕೊರೊನಾವೈರಸ್ ಸೋಂಕಿನಿಂದ ಪೀಡಿತರಾದವರಿಗೆ ನೆರವಾಗಲು ಜನರಲ್ ಇನ್ಶುರೆನ್ಸ್ ಕಂಪನಿ, ಯುನಿವರ್ಸಲ್ ಸೋಂಪೊ ಸಹಭಾಗಿತ್ವದಲ್ಲಿ ಕರ್ನಾಟಕ ಬ್ಯಾಂಕ್ ವಿಮೆ ಯೋಜನೆ ಆರಂಭಿಸಿದೆ. ಈ ವಿಮಾ ಸೌಲಭ್ಯ 18 ರಿಂದ 65 ವಯಸ್ಸಿನ ವಯೋಮಿತಿಯ ಎಲ್ಲ ಗ್ರಾಹಕರಿಗೆ ಲಭ್ಯವಿದೆ.
3 ಲಕ್ಷ ರುಪಾಯಿವರೆಗೆ ಆಸ್ಪತ್ರೆಯ ಖರ್ಚು
ಒಂದು ವೇಳೆ ಕೊರೊನಾವೈರಸ್ ಸೋಂಕಿನಿಂದಾಗಿ ಆಸ್ಪತ್ರೆಗೆ ಸೇರಬೇಕಾಗಿ ಬಂದಲ್ಲಿ ವಿಮಾದಾರರಿಗೆ 3 ಲಕ್ಷ ರುಪಾಯಿವರೆಗೆ ಆಸ್ಪತ್ರೆಯ ಖರ್ಚನ್ನು ಹಾಗೂ ಹೊರ ರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ 3 ಸಾವಿರ ರುಪಾಯಿವರೆಗಿನ ಔಷಧಿಗಳ ಖರ್ಚನ್ನು ವಿಮಾ ನಿಯಮದಡಿ ಒದಗಿಸುಲಾಗುತ್ತದೆ.
ವಿಮೆಯ ಅವಧಿ ಮೂರು ತಿಂಗಳು
ಒಂದು ವೇಳೆ 14 ದಿನಗಳ ಕ್ವಾರಂಟೈನ್ಗೆ ಒಳಪಟ್ಟಲ್ಲಿ ದಿನಕ್ಕೆ 1 ಸಾವಿರ ರುಪಾಯಿವರೆಗೆ ಸರ್ಕಾರಿ ಅಥವಾ ಮಿಲಿಟರಿ ಆಸ್ಪತ್ರೆಗಳ ಕ್ವಾರಂಟೈನ್ ವೆಚ್ಚ ಭರಿಸಲು ಅವಕಾಶವಿದೆ. ವಿಮೆಯ ಅವಧಿ ಮೂರು ತಿಂಗಳಿನದ್ದಾಗಿರುತ್ತದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications