ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಫೆಬ್ರವರಿ 17ರಂದು ಕರ್ನಾಟಕ ಬಜೆಟ್ 2023-24 ಮಂಡನೆ ಆರಂಭಿಸಿದ್ದಾರೆ. ಆರಂಭದಲ್ಲೇ ವಿಪಕ್ಷಕ್ಕೆ ಟಾಂಗ್ ನೀಡಿ, ಸದನದಲ್ಲಿ ಗದ್ದಲ ಉಂಟಾಗಿದ್ದು, ಬಳಿಕ ಬಜೆಟ್ ಭಾಷಣ ಮುಂದುವರಿಸಿದ್ದಾರೆ.
ರೈತರಿಗೆ ಬಂಪರ್ ಗಿಫ್ಟ್ ಘೋಷಣೆ ಮಾಡಲಾಗಿದೆ. ರೈತರಿಗೆ 5 ಲಕ್ಷ ರೂಪಾಯಿ ಸಾಲ ನೀಡುವ ಘೋಷಣೆ ಮಾಡಲಾಗಿದೆ. ಶೂನ್ಯ ಬಡ್ಡಿದರದಲ್ಲಿ ಸಾಲವನ್ನು ನೀಡುವ ಘೋಷಣೆ ಮಾಡಲಾಗಿದೆ. ಸಾಲ ಮಿತಿಯನ್ನು 3 ಲಕ್ಷ ರೂಪಾಯಿಯಿಂದ 5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.
ಒಂದು ತೋಟ ಒಂದು ಬೆಲೆ ಯೋಜನೆ ಆರಂಭ ಘೋಷಣೆ ಮಾಡಿದ್ದಾರೆ. ಒಟ್ಟು ಬಜೆಟ್ ಗಾತ್ರ 309182 ಕೋಟಿ ರೂ ಗಾತ್ರವನ್ನು ಹೊಂದಿದ್ದು, ಇದು ಸರ್ಪ್ಲಸ್ ಬಜೆಟ್ ಆಗಿದೆ. 2022-23ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 2 ಲಕ್ಷದ 66 ಸಾವಿರ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯ ಅಂದರೆ 2023-24ನೇ ಸಾಲಿನ ಕರ್ನಾಟಕ ಬಜೆಟ್ 3 ಲಕ್ಷ ಕೋಟಿ ರೂಪಾಯಿಗಳ ಗಡಿಯನ್ನು ತಲುಪುವ ನಿರೀಕ್ಷೆಯಿತ್ತು.

ಶಿಕ್ಷಣ, ಉದ್ಯೋಗ, ಸಬಲೀಕರಣ ಮಂತ್ರದೊಂದಿಗೆ, ದೀನದುರ್ಬಲ ಸಮುದಾಯಗಳಿಗೆ, ಎಸ್ಸಿ ಮತ್ತು ಎಸ್ಟಿಗೆ ಸರ್ಕಾರ ಉತ್ತೇಜನ ನೀಡಿದೆ. ಅರ್ಹ ಫಲಾನುಭವಿಗಳಿಗೆ ನೇರವಾಗಿ ಸರ್ಕಾರದ ಸೌಲಭ್ಯ ದೊರೆಯುವಂತೆ ಮಾಡಲು ಪಾರದರ್ಶಕತೆ ಕಾಯ್ದುಕೊಂಡಿದ್ದೇವೆ. ಕಾರ್ಮಿಕ ವರ್ಗಕ್ಕು ಕಾಳಜಿ ವಹಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
2024ರಲ್ಲಿ ಚುನಾವಣೆ ನಡೆಯಲಿದೆ, ಇದರಿಂದಾಗಿ ಬಜೆಟ್ನಲ್ಲಿ ಹಲವಾರು ಕೊಡುಗೆಯನ್ನು ಸರ್ಕಾರ ನೀಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications