Karnataka Budget: ಮದ್ಯ ಪ್ರಿಯರಿಗೆ ಶಾಕ್, ಅಬಕಾರಿ ಸುಂಕ ಭಾರೀ ಏರಿಕೆ

ಕರ್ನಾಟಕದ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ ತನ್ನ 14ನೇ ದಾಖಲೆಯ ಬಜೆಟ್ ಮಂಡನೆಯನ್ನು ಆರಂಭ ಮಾಡಿದ್ದಾರೆ. ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯವನ್ನು ಒಟ್ಟೊಟ್ಟಿಗೆ ಕೊಂಡೊಯ್ಯುವಲ್ಲಿ ಯಾವುದಾದರೂ ಒಂದು ನಾಡು ಶ್ರಮಿಸಿದ್ದರೆ ಅದು ಕರ್ನಾಟಕ ಎನ್ನುತ್ತಾ ಕಲ್ಯಾಣ ಕರ್ನಾಟಕದ ಉಲ್ಲೇಖ ಮಾಡುತ್ತಾ ಬಜೆಟ್ ಮಂಡನೆ ಆರಂಭಿಸಿದ ಸಿದ್ಧರಾಮಯ್ಯ ಸ್ತ್ರೀಯರಿಗೆ, ರೈತರಿಗೆ ವಿವಿಧ ಯೋಜನೆಗಳನ್ನು ಜಾರಿ ಮಾಡಿದ್ದು, ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರವು ಬಜೆಟ್ ಮಂಡನೆ ವೇಳೆಯಲ್ಲಿ ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಲಾಗಿದೆ. ಪ್ರಸ್ತುತ ಅಬಕಾರಿ ಸುಂಕವನ್ನು ಶೇಕಡ 20ರಷ್ಟು ಏರಿಕೆ ಮಾಡಲಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದ ಬಳಿಕ ಸುಂಕವು ಶೇಕಡ 175 ರಿಂದ ಶೇಕಡ 185ಕ್ಕೆ ಹೆಚ್ಚಳವಾಗುತ್ತದೆ.

 ಕರ್ನಾಟಕದಲ್ಲಿ ಮದ್ಯ ಪ್ರಿಯರಿಗೆ ಶಾಕ್, ಅಬಕಾರಿ ಸುಂಕ ಭಾರೀ ಏರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ 3.39 ಲಕ್ಷ ಕೋಟಿಯ ಬಜೆಟ್‌ ಮಂಡನೆ ಮಾಡುತ್ತಿದ್ದು, ಹಲವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಆದರೆ ಈ ನಡುವೆ ಅದರ ಹೊರೆಯನ್ನು ಮದ್ಯ ಪ್ರಿಯರಿಗೆ ವಿಧಿಸಿರುವಂತೆ ಕಾಣುತ್ತಿದೆ. ಅಬಕಾರಿ ತೆರಿಗೆಯಲ್ಲಿ ಹೆಚ್ಚಳ ಮಾಡಲಾಗಿರುವ ಕಾರಣದಿಂದಾಗಿ ಇನ್ನು ಮುಂದೆ ಮದ್ಯ ದುಬಾರಿಯಾಗಲಿದೆ.

ಇನ್ನು ಬೆಂಗಳೂರು ಮೂಲಸೌಕರ್ಯಕ್ಕೆ 12 ಸಾವಿರ ಕೋಟಿ ಅನುದಾನ ಮೀಸಲಿಡಲಾಗಿದೆ. ನಮ್ಮ ಮೆಟ್ರೋ ಮತ್ತು ಬೆಂಗಳೂರು ಉಪನಗರ ಯೋಜನೆ 30 ಸಾವಿರ ಕೋಟಿ ಅನುದಾನ ನೀಡಲಾಗಿದೆ. ಬೆಂಗಳೂರಲ್ಲಿ ವೈಟ್ ಟಾಪಿಂಗ್‌ಗೆ 800 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಶಕ್ತಿ ಯೋಜನೆಗೆ ವಾರ್ಷಿಕ 4 ಸಾವಿರ ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಗೃಹಜ್ಯೋತಿ ಯೋಜನೆಗೆ 13,910 ಕೋಟಿ ರೂಪಾಯಿ ಅನುದಾನವನ್ನು ಬಜೆಟ್‌ನಲ್ಲಿ ನೀಡಲಾಗಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+