ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಸಿದ್ಧರಾಮಯ್ಯ ಮಂಡಿಸಲಿರುವ 15ನೇ ಬಜೆಟ್ ಆಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಆಸೆ ಹೊಂದಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ಸಿಎಂ ಮಂಡಿಸುವ ಬಜೆಟ್ನತ್ತ ಎಲ್ಲರ ಚಿತ್ತ ನೆಟ್ಟಿದೆ.
ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ಕೊಂಚ ಹೆಚ್ಚಾಗುವ ಸಾಧ್ಯತೆ ಇದೆ. ಈ ಬಾರಿ ಬಜೆಟ್ ಗಾತ್ರ 3.50 ಲಕ್ಷ ಕೋಟಿಯಿಂದ 3.80 ಲಕ್ಷ ಕೋಟಿ ತಲುಪುವ ಸಾಧ್ಯತೆ ಹೆಚ್ಚಿದೆ. ರಾಜ್ಯದಲ್ಲಿನ ಸದ್ಯದ ಪರಿಸ್ಥಿತಿಯನ್ನು ಗಮನಸಿದರೆ, ಯಾವೆಲ್ಲಾ ಆಫರ್ಗಳನ್ನು ಹೊತ್ತು ಬಜೆಟ್ ಬರಲಿದೆ ಎಂಬ ಕುತೂಹಲ ಎಲ್ಲರಲ್ಲೂ ಇದ್ದೆ ಇದೆ.
ಪ್ರತಿ ಬಾರಿಯಂತೆ ಈ ಬಾರಿಯ ಬಜೆಟ್ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿದೆ. ಅದರಲ್ಲಿ ಕೃಷಿ ಸಂಬಂಧಿತ ಘೋಷಣೆಗಳು ಏನ್ ಇರಲಿವೆ ಎಂಬ ಕುತೂಹಲ ಮನೆ ಮಾಡಿದೆ. ಸಾಲಮನ್ನಾ, ಬರ ಪರಿಹಾರ 10,000 ಹೆಚ್ಚಳ ಮಾಡುವ ಸಾಧ್ಯತೆ ಇದೆ. ರೈತ ಯುವಕರನ್ನ ಮದುವೆಯಾಗುವ ವಧುವಿಗೆ ಸರ್ಕಾರ ಗಿಫ್ಟ್ ನೀಡುವ ನಿರೀಕ್ಷೆ ಇದೆ. ಇನ್ನು ಕೃಷಿ ಯಂತ್ರೋಪಕರಣ, ರಸಗೊಬ್ಬರದ ಸಬ್ಸಿಡಿ ಹೆಚ್ಚಳ ಆಗುವ ಸಾಧ್ಯತೆಗಳು ಸಹ ಹೆಚ್ಚಿವೆ.

ಸಿದ್ದರಾಮಯ್ಯ ಮಂಡಿಸುವ ಬಜೆಟ್ನಲ್ಲಿ ಎಲ್ಲರ ಚಿತ್ತ ಕದ್ದ ವಲಯ ಎಂದರೆ ಹೊಸ ಜಿಲ್ಲೆಗಳ ಘೋಷಣೆ. ಸಿದ್ದರಾಮಯ್ಯ ಈ ಬಾರಿ ಹೊಸ ಜಿಲ್ಲೆಗಳನ್ನು ಘೋಷಿಸುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ. ಚಿಕ್ಕೋಡಿ, ಮಧುಗಿರಿಗಳನ್ನು ಹೊಸ ಜಿಲ್ಲೆಗಳ ಕನಸು ಕಾಣುತ್ತಿವೆ.

ಬಿಬಿಎಂಪಿ ಚುನಾವಣೆಗಳ ನಿಟ್ಟಿನಲ್ಲಿ ಬೆಂಗಳೂರು ಜನರಿಗೆ ಸಿದ್ದರಾಮಯ್ಯ ಬಜೆಟ್ನಿಂದ ಏನೆಲ್ಲಾ ಲಾಭಗಳು ಆಗಲಿವೆ ಎಂಬ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ. ಬ್ರಾಂಡ್ ಬೆಂಗಳೂರು ಕನಸು ಕಾಣುತ್ತಿರುವ ಸಿದ್ದರಾಮಯ್ಯ ಸರ್ಕಾರ ಯಾವ ಹೊಸ ಯೋಜನೆಯನ್ನು ರಾಜ್ಯ ರಾಜ್ಯಧಾನಿಗೆ ನೀಡುತ್ತದೆ ಎಂಬದನ್ನು ಜನರು ಎದುರು ನೋಡುತ್ತಿದ್ದಾರೆ.
More From GoodReturns

Karnataka Budget 2026: ಸಿದ್ದರಾಮಯ್ಯ ಬಜೆಟ್ ಮಂಡಣೆ ಎಷ್ಟು ಗಂಟೆಗೆ ಆರಂಭ? ಎಲ್ಲಿ ನೋಡಬಹುದು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications