ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress Govt) ಬಂದಾಗಿನಿಂದ ಸರ್ಕಾರಿ ಬಸ್ಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು. ವಿಧಾನಸಭಾ ಚುನಾವಣೆಯ ಗೆಲುವಿನ ಅಸ್ತ್ರವಾಗಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದರು. ಆ ಪಂಚ ಗ್ಯಾರಂಟಿ ಯೋಜನೆಗಳು ಭಾರೀ ಜನಪ್ರಿಯತೆಯನ್ನು ಪಡೆದಿದ್ದು, ಅಲ್ಲದೇ ರಾಜ್ಯದ ಜನರಿಗೂ ಆರ್ಥಿಕವಾಗಿ ಬೆಂಬಲ ನೀಡಿದೆ. 2026-27ನೇ ಸಾಲಿನ ಕರ್ನಾಟಕ ಸರ್ಕಾರದ ಬಜೆಟ್ (Karnataka Budget 2026-27) ಮಾರ್ಚ್ 06, 2027 ರಂದು ಮಂಡನೆಯಾಗಲಿದೆ. ಅಲ್ಲದೇ ಈ ಬಜೆಟ್ ಮಂಡನೆ ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ದಾಖಲೆಯ ಬಜೆಟ್ ಮಂಡನೆ ಮಾಡಲಿದ್ದಾರೆ. ಕರ್ನಾಟಕ ಬಜೆಟ್ ಮಂಡನೆ ಬಗ್ಗೆ ಭಾರೀ ನಿರೀಕ್ಷೆಗಳು ಮೂಡಿದ್ದು, ಈ ನಡುವೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ದೊಡ್ಡ ಬೇಡಿಕೆಯೊಂದನ್ನು ಸರ್ಕಾರದ ಮುಂದಿಟ್ಟಿದೆ.

ಹೌದು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಕರ್ನಾಟಕ ಬಜೆಟ್ನಲ್ಲಿ, ರಾಜ್ಯ ಸಾರಿಗೆ ನೌಕಾಪಡೆಗೆ 3 ಸಾವಿರ ಹೊಸ ಬಸ್ಗಳನ್ನು ಸೇರಿಸುವಂತೆ ಮನವಿ ಮಾಡಲಾಗಿದೆ ಎನ್ನಲಾಗಿದೆ. ಇದು ರಾಜ್ಯದ ಪ್ರಮುಖ ಸಾರಿಗೆ ನಿಗಮಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಮತ್ತು ಇತರ ಸಹಯೋಗಿ ಸಂಸ್ಥೆಗಳ ಅಗತ್ಯತೆಯನ್ನು ಪೂರೈಸುವ ದೃಷ್ಟಿಯಿಂದ ಈ ಮನವಿ ಮಾಡಲಾಗಿದೆ ಎಂದು ಹೇಳಲಾಗಿದೆ.
ಸಾರಿಗೆ ಸಚಿವರು ಹೇಳಿದ್ದೇನು?
ಇನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ಬುಧವಾರ (ಫೆ.26) ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಈ ವೇಳೆ ಸಾರಿಗೆ ಇಲಾಖೆಯು ಈ 3,000 ಹೊಸ ಬಸ್ಗಳನ್ನು ಬಜೆಟ್ನಲ್ಲಿ ಸರ್ಕಾರ ಒದಗಿಸಬೇಕೆಂದು ಮನವಿ ಮಾಡಿದೆ ಎಂದು ಹೇಳಲಾಗಿದೆ. ಇನ್ನು ಬಸ್ ಸಂಖ್ಯೆಗಳನ್ನು ಇನ್ನೂ ದೃಢೀಕರಿಸಿಲ್ಲ. ಆದ್ರೆ ನಮ್ಮ ಕೋರಿಕೆಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದಾರೆ.
ಬೇಡಿಕೆಗೆ ತಕ್ಕ ಪ್ರತಿಕ್ರಿಯೆ!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತರ ಶಕ್ತಿ ಯೋಜನೆಯನ್ನು ಆರಂಭಿಸಿದೆ. ಈ ಮೂಲಕ ರಾಜ್ಯದ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿದಾಗಿನಿಂದ, ಬಸ್ಗಳ ಬೇಡಿಕೆ ಕೂಡ ಭಾರೀ ಹೆಚ್ಚಾಗಿದೆ. ಈ ಹಿನ್ನೆಲೆ ಹಳೆಯ ಬಸ್ಗಳನ್ನು ಬದಲಾಯಿಸುವುದು ಮತ್ತು ಹೆಚ್ಚುವರಿ ಬಸ್ ಸೇವೆಗಳನ್ನು ನೀಡುವ ಗುರಿಯನ್ನು ಸರ್ಕಾರ ಹೊಂದಿದೆ. ಆದ್ದರಿಂದ ಇದೀಗ ಸಾರಿಗೆ ಇಲಾಖೆ ರಾಜ್ಯದಾದ್ಯಂತ ಜನರಿಗೆ ಉತ್ತಮ ಸೇವೆ ನೀಡುವ ಉದ್ದೇಶಕ್ಕಾಗಿ ಹೊಸ ಬಸ್ಗಳನ್ನು ನೀಡುವಂತೆ ಇಲಾಖೆ ಮನವಿ ಮಾಡಿದೆ.
ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್
ಈಗಾಗಲೇ ಸರ್ಕಾರ ಶಕ್ತಿ ಯೋಜನೆ ಸಂಬಂಧಿಸಿ ಮಹತ್ವದ ಕ್ರಮ ಕೈಗೊಂಡಿದೆ. ಶಕ್ತಿ ಯೋಜನೆಯ ದುರುಪಯೋಗ ತಡೆಯುವ ನಿಟ್ಟಿನಲ್ಲಿ, ಇದೀಗ ಸರ್ಕಾರ ಆಧಾರ್ ಕಾರ್ಡ್ ಬದಲಿಗೆ ಸ್ಮಾರ್ಟ್ ಕಾರ್ಡ್ ಜಾರಿಗೆ ತರಲು ಸಜ್ಜಾಗಿದೆ. ಈ ಬಗ್ಗೆಯೂ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು, ಸ್ಮಾರ್ಟ್ ಕಾರ್ಡ್ಗಳ ಮೂಲಕ ಸಾರಿಗೆಯ ಡೇಟಾ ನಿಖರತೆ ಹೆಚ್ಚಿಸಲು ಮತ್ತು ಪ್ರಯಾಣಿಕರೆ ಸುಲಭ ಸೌಲಭ್ಯ ಹೆಚ್ಚಿಸುವ ಗುರಿ ಹೊಂದಿದೆ.
More From GoodReturns

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications