Karnataka budget: ಸರ್ಕಾರಿ ಉದ್ಯೋಗಿಗಳಿಗೆ ರಾಜ್ಯ ಬಜೆಟ್‌ನಲ್ಲಿ ಸಿಹಿಸುದ್ದಿ

ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ (ಫೆಬ್ರವರಿ 16) ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಜೆಟ್‌ನಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ಸಿಹಿಸುದ್ದಿಯನ್ನು ಸಿಎಂ ನೀಡಿದ್ದಾರೆ.

2024-25ನೇ ಸಾಲಿನ ಬಜೆಟ್ ಭಾಷಣ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಶೀಘ್ರವೇ 7ನೇ ವೇತನ ಆಯೋಗವನ್ನು ಜಾರಿ ಮಾಡುವ ಬಗ್ಗೆ ಸೂಚನೆ ನೀಡಿದ್ದಾರೆ. ಸಮಿತಿ ವರದಿ ಆಧಾರದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

 ಸರ್ಕಾರಿ ಉದ್ಯೋಗಿಗಳಿಗೆ ರಾಜ್ಯ ಬಜೆಟ್‌ನಲ್ಲಿ ಸಿಹಿಸುದ್ದಿ

7ನೇ ವೇತನ ಆಯೋಗವನ್ನು ಜಾರಿಗೊಳಿಸಲು ಸರ್ಕಾರ ವಿಳಂಬ ಮಾಡುತ್ತಿದೆ. ಈ ನಡುವೆ ವೇತನ ಹೆಚ್ಚಳದ ಪ್ರಸ್ತಾವನೆಯು ಇಲ್ಲದಂತಾಗಿದೆ. ಇದರಿಂದಾಗಿ ರಾಜ್ಯ ಸರ್ಕಾರಿ ನೌಕರರು ಈ ವರ್ಷ ವೇತನ ಹೆಚ್ಚಳವಿಲ್ಲದೆ ಉದ್ಯೋಗ ಮಾಡಬೇಕಾದ ಸ್ಥಿತಿ ಉಂಟಾಗಬಹುದು ಎಂದು ಇತ್ತೀಚೆಗೆ ವರದಿಯಾಗಿದೆ.

ಈ ನಡುವೆ ಬಜೆಟ್‌ನಲ್ಲಿ ಶೀಘ್ರವೇ 7ನೇ ವೇತನ ಆಯೋಗದ ಜಾರಿ ಬಗ್ಗೆ ಸುಳಿವು ನೀಡುವ ಮೂಲಕ ಮುಖ್ಯಮಂತ್ರಿ ಸರ್ಕಾರಿ ನೌಕರರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಉದ್ಯೋಗಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇತನ ಆಯೋಗದ ವರದಿಯನ್ನು ಸ್ವೀಕರಿಸಿ ಹಣ ಮಂಜೂರು ಮಾಡುತ್ತಾರೆ ಎಂಬ ಭರವಸೆಯಲ್ಲಿದ್ದಾರೆ.

ಈ ಬಗ್ಗೆ ಇತ್ತೀಚೆಗೆ ಕೆಎಸ್‌ಜಿಎ ಕಾರ್ಯದರ್ಶಿ ಸದಾನಂದ ನೆಲಗುದ್ರಿ ಮಾತನಾಡಿ, "ವೇತನ ಹೆಚ್ಚಳದ ಬೇಡಿಕೆ ಬಹುಕಾಲದಿಂದ ಬಾಕಿ ಉಳಿದಿದ್ದು, ಅದನ್ನು ಪೂರೈಸುವ ಸರ್ಕಾರದ ಬದ್ಧತೆ," ಎಂದು ಒತ್ತಿ ಹೇಳಿದರು. ವೇತನ ಹೆಚ್ಚಳವನ್ನು ಬಜೆಟ್‌ನಲ್ಲಿ ಘೋಷಿಸುವ ಅಗತ್ಯವಿಲ್ಲ ಮತ್ತು ಸಿದ್ದರಾಮಯ್ಯ ಬಜೆಟ್ ಮಂಡನೆಯ ಹೊರಗೆ ಅದನ್ನು ತಿಳಿಸಬಹುದು ಎಂದು ಕೆಎಸ್‌ಜಿಎ ಹೇಳಿದೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+