ಕರ್ನಾಟಕ ಮುಖ್ಯಮಂತ್ರಿ, ಹಣಕಾಸು ಖಾತೆಯನ್ನು ಹೊಂದಿರುವ ಸಿದ್ಧರಾಮಯ್ಯ ಅವರು ತನ್ನ 15ನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಬಜೆಟ್ನಲ್ಲಿ ಸಿಎಂ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ.
2025ರ ವೇಳೆಗೆ ನಮ್ಮ ಮೆಟ್ರೋ ಜಾಲಕ್ಕೆ ಹೆಚ್ಚುವರಿಯಾಗಿ ಸುಮಾರು 44 ಕಿ.ಮೀ. ಮಾರ್ಗ ಸೇರ್ಪಡೆಯಾಗಲಿದೆ ಎಂದು 2024-25ನೇ ಸಾಲಿನ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಹಾಗೆಯೇ ಮೆಟ್ರೋ ಯೋಜನೆ ಹಂತ 2 ಹಾಗೂ 2ಎ ಯೋಜನೆಯಡಿ ಹೊರವರ್ತುಲ ರಸ್ತೆ-ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್ ವೇಳೆಗೆ ಪೂರ್ಣವಾಗಲಿದೆ. ಮೆಟ್ರೋ ಹಂತ-3ರಲ್ಲಿ ಅಂದಾಜು 15,611 ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರದ ಅನುಮೋದನೆಗೆ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಇನ್ನು ಪೆರಿಫೆರಲ್ ರಿಂಗ್ ರೋಡ್ ಅನ್ನು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ತುಮಕೂರು ಮತ್ತು ದೇವನಹಳ್ಳಿಗೆ ಮೆಟ್ರೋ
ಬೆಂಗಳೂರಿನಲ್ಲಿ ಮಾತ್ರವಲ್ಲದೆ ಬೆಂಗಳೂರು ಬಿಐಇಸಿನಿಂದ ತುಮಕೂರು ಮತ್ತು ಕೆಐಎಎಲ್ನಿಂದ ದೇವನಹಳ್ಳಿಗೆ ಮೆಟ್ರೋ ಜಾಲ ವಿಸ್ತರಣೆ ಬಗ್ಗೆ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
ಬಿಎಂಆರ್ಸಿಎಲ್ ಬೇಡಿಕೆ ಏನಿತ್ತು?
ಮಾಗಡಿ ರಸ್ತೆ ಮಾರ್ಗದ ಕಾರಿಡಾರ್ ಡಿಪಿಆರ್ ಶೀಘ್ರ ಸಿದ್ಧವಾಗಲಿಲ್ಲ. 2022ರ ಅಂತ್ಯದ ವೇಳೆಗೆ ನಮ್ಮ ಮೆಟ್ರೋ ಈ ಹಂತದ ಸಮಗ್ರ ಯೋಜನಾ ವರದಿಯನ್ನು ಕಳುಹಿಸಲಾಗಿತ್ತು. 6 ಬೋಗಿ ಕೋಚ್ ಸಂಚಾರ ಸೇರಿದಂತೆ ಡಿಪಿಆರ್ನಲ್ಲಿ ಕೆಲವು ಅಂಶಗಳನ್ನು ಪರಿಷ್ಕರಿಸಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆದರೆ ಕೇಂದ್ರದ ಅನುಮೋದನೆಗೆ ಕಾಯಲಾಗುತ್ತಿದೆ.
ಬಜೆಟ್ ಬಗ್ಗೆ ನಿರೀಕ್ಷೆ ವ್ಯಕ್ತಪಡಿಸಿದ್ದ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂಎಸ್ ಚನ್ನಪ್ಪಗೌಡರು, "ಡಿಪಿಆರ್ಗೆ ಕೇಂದ್ರ ಅನುಮೋದನೆ ನೀಡಲಿದೆ. ನಾವು ಯೋಜನೆಗೆ ಸಂಬಂಧಿಸಿದಂತೆ ಕಾಮಗಾರಿ ಪ್ರಾರಂಭಕ್ಕೆ ತಯಾರಿ ಮಾಡಬೇಕಾಗಿದೆ. ಅದಕ್ಕಾಗಿ 1000 ಕೋಟಿ ರೂಪಾಯಿ ಅನುದಾನವನ್ನು ರಾಜ್ಯ ಸರ್ಕಾರ ಬಜೆಟ್ನಲ್ಲಿ ಘೋಷಿಸಬೇಕು," ಎಂದು ತಿಳಿಸಿದರು.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications