ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು (ಫೆಬ್ರವರಿ 16) ರಂದು ವಿಧಾನಸಭೆಯಲ್ಲಿ 15ನೇ ಬಜೆಟ್ ಮಂಡಿಸಿದ್ದಾರೆ. ಬಜೆಟ್ನಲ್ಲಿ ಹಲವಾರು ಘೋಷಣೆಗಳನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಕೆಲವು ಯೋಜನೆಗಳನ್ನು ಮತ್ತೆ ಆರಂಭಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ.
ತೆರಿಗೆ ವಿಚಾರಕ್ಕೆ ಬಂದಾಗ ಬಜೆಟ್ ಮಂಡನೆಯ ಆರಂಭದಲ್ಲಿಯೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಎಸ್ಟಿ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನ ತೆರಿಗೆ ನನ್ನ ಹಕ್ಕು ಎಂಬ ಅಭಿಯಾನವನ್ನು ಈಗಾಗಲೇ ಆರಂಭ ಮಾಡಿದ್ದಾರೆ. ಬಜೆಟ್ನಲ್ಲಿರುವ ತೆರಿಗೆ ಪ್ರಸ್ತಾಪಗಳ ಬಗ್ಗೆ ವಿವರ ಇಲ್ಲಿದೆ ಮುಂದೆ ಓದಿ......

ವಾಣಿಜ್ಯ ತೆರಿಗೆಗಳು
1. 2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗು 58,180 ಕೋಟಿ ರೂ.ಗಳ ಎಸ್ಜಿಎಸ್ಟಿ ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿರುತ್ತದೆ.
2. ಪ್ರಸಕ್ತ ವರ್ಷದಲ್ಲಿ ಜಿ.ಎಸ್.ಟಿ ಮೇಲ್ಮನವಿ ನ್ಯಾಯಮಂಡಳಿಯ ಎರಡು ರಾಜ್ಯ ಪೀಠಗಳನ್ನು ರಚಿಸಲಾಗುವುದು ಮತ್ತು ಕಾರ್ಯಗತಗೊಳಿಸಲಾಗುವುದು. ಇದು ತೆರಿಗೆ ವಿವಾದಗಳನ್ನು ಸ್ಥಳೀಯವಾಗಿ ಬಗೆಹರಿಸಲು ಸಹಾಯವಾಗುತ್ತದೆ.
3. ಇಲಾಖೆಯು, ಗ್ರಾಹಕ ಸಂವೇದಿ ಜಿ.ಎಸ್.ಟಿ ಡೇಟಾಬೇಸ್ ಮ್ಯಾನೇಜ್ಮೆಂಟ್ ಮತ್ತು ಕೃತಕ ಬುದ್ಧಿಮತ್ತೆ ಚಾಲಿತ ವಿಶ್ಲೇಷಣಾತ್ಮಕ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಮಾಹಿತಿಯ ನಿಖರತೆ ಮತ್ತು ಮುನ್ಸೂಚಕ ವಿಶ್ಲೇಷಣೆಯು ರಾಜಸ್ವ ಕ್ರೋಢೀಕರಣಕ್ಕೆ ಸಹಕಾರಿಯಾಗಲಿದೆ.
4. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ತೆರಿಗೆ ಕಾನೂನು ಮತ್ತು ತಾಂತ್ರಿಕ ಪರಿಣಿತಿಯನ್ನು ಹೊಂದಲು ಹಾಗೂ ಅವರಲ್ಲಿ ವಿಶ್ಲೇಷಣಾತ್ಮಕ ದೃಷ್ಟಿಕೋನವನ್ನು ಅಭಿವೃದ್ಧಿಪಡಿಸಲು ಇ-ತರಬೇತಿ ನೀಡಲಾಗುವುದು. ಇದು ತೆರಿಗೆ ರಾಜಸ್ವ ಸೃಜನೆಗೆ ಹೊಸ ಮಾರ್ಗಗಳನ್ನು ಅನ್ವೇಷಿಸಲು ಮತ್ತು ಮೋಸದ ನೋಂದಣಿಗಳನ್ನು ಪತ್ತೆಹಚ್ಚಲು ಸಹಕಾರಿಯಾಗಲಿದೆ.
5. 2024-25ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆಯ ಗುರಿಯನ್ನು 1,10,000 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ
1. ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ನಮ್ಮ ಸರ್ಕಾರವು 2023-24ರಲ್ಲಿ ಪರಿಷ್ಕರಣೆ ಮಾಡಿದ್ದು, ಪ್ರಸಕ್ತ ಆರ್ಥಿಕ ವರ್ಷದ ಜನವರಿ ತಿಂಗಳ ಅಂತ್ಯದವರೆಗೆ 15,692 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆಯಾಗಿದ್ದು, ಶೇ.10ರಷ್ಟು ಬೆಳವಣಿಗೆ ಹೊಂದಿದೆ.
2. 2024-25ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 26,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
ಅಬಕಾರಿ
1. ಮದ್ಯದ ಘೋಷಿತ ಸ್ಲಾಬ್ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ ಐಎಂಎಲ್ ಹಾಗೂ ಬಿಯರ್ನ ಸ್ಲಾಬ್ಗಳನ್ನು ಪರಿಷ್ಕರಿಸಲಾಗುವುದು.
2. ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಇಲಾಖೆಯು ಒದಗಿಸುವ ವಿವಿಧ ಸೇವೆಗಳಿಗೆ ಸಮಯದ ಮಿತಿಯನ್ನು ನಿಗದಿಪಡಿಸಲಾಗುವುದು ಹಾಗೂ ಸ್ವಯಂಚಾಲಿತ ಅನುಮೋದನೆಗೂ ಅವಕಾಶ ಕಲ್ಪಿಸಲಾಗುವುದು.
3. 2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications