ರಾಜ್ಯದಲ್ಲಿ ಹಣಕಾಸು ಖಾತೆಯನ್ನು ಕೂಡಾ ಹೊಂದಿರುವ ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶುಕ್ರವಾರ (ಫೆಬ್ರವರಿ 16) ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿದ್ಧರಾಮಯ್ಯರ ದಾಖಲೆಯ 15ನೇ ಬಜೆಟ್ ಇದಾಗಿದ್ದು, ಸಿಎಂ ಆಗಿ ಎಂಟನೇ ಬಾರಿಗೆ ಮಂಡಿಸುತ್ತಿರುವ ಬಜೆಟ್ ಇದಾಗಿದೆ.
ಈ ವರ್ಷದಲ್ಲೇ ಲೋಕಸಭೆ ಚುನಾವಣೆ ನಡೆಯಲಿರುವ ಕಾರಣದಿಂದಾಗಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈ ಬಜೆಟ್ ಅತೀ ಮಹತ್ವದ್ದಾಗಿದೆ. ಈ ಬಜೆಟ್ ಗಾತ್ರ ಸುಮಾರು 3.80 ಲಕ್ಷ ಕೋಟಿ ರೂಪಾಯಿ ಆಗಿರಲಿದೆ ಎದು ಈಗಾಗಲೇ ಸಿಎಂ ತಿಳಿಸಿದ್ದು, ಇದು ಕಳೆದ ಜುಲೈನಲ್ಲಿ ಸರ್ಕಾರ ಮಂಡಿಸಿದ ಬಜೆಟ್ಗಿಂತ ಹೆಚ್ಚಿನ ಗಾತ್ರವಾಗಿದೆ.

ಪ್ರಸ್ತುತ ರಾಜ್ಯದಲ್ಲಿ ಬರ ಕಾಡುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಈ ನಡುವೆ ಕೃಷಿ ಕ್ಷೇತ್ರಕ್ಕೆ ಉಳಿದೆಲ್ಲ ಕ್ಷೇತ್ರಕ್ಕಿಂತ ಅಧಿಕ ಆದ್ಯತೆ ನೀಡುವ, ಅಧಿಕ ಅನುದಾನವನ್ನು ನೀಡುವ ನಿರೀಕ್ಷೆಯಿದೆ. ಈ ಹಿಂದೆ ರಾಜ್ಯದಲ್ಲಿ ಬರಪೀಡಿತ ಪ್ರದೇಶದ ರೈತರಿಗೆ ಬರ ಪರಿಹಾರ ನೀಡಲು ನಿಧಿ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾಗಿ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ.
ಈ ನಡುವೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಜೆಟ್ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. "ಈ ಬಜೆಟ್ ನಮ್ಮ ರಾಜ್ಯಕ್ಕೆ ಹೊಸ ದಾರಿಯನ್ನು ತೋರಿಸಲಿದೆ ಎಂಬ ವಿಶ್ವಾಸವಿದೆ. ನಾವು ನಮ್ಮ ಗ್ಯಾರಂಟಿ ಯೋಜನೆ ಭರವಸೆಯನ್ನು ಜಾರಿ ಮಾಡಿದಂತೆಯೇ, ನಮ್ಮ ರಾಜ್ಯದ ಜನರ ಕಲ್ಯಾಣಕ್ಕಾಗಿ ಬೇಕಾದ ಎಲ್ಲ ಕಾರ್ಯವನ್ನು ಮಾಡುತ್ತೇವೆ," ಎಂದು ಹುಬ್ಬಳ್ಳಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುತ್ತಾ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮುಖ್ಯಮಂತ್ರಿ ಬೆಳ್ಳಿಗ್ಗೆ 10:15ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನೆಗೂ ಮುನ್ನ ಸಿಎಂ ವಿಶೇಷ ಸಂಪುಟ ರಜೆ ನಡೆಸಲಿದ್ದಾರೆ. ಸೋಮವಾರದಿಂದ ಕರ್ನಾಟಕ ವಿಧಾನಮಂಡಲದ 10 ದಿನಗಳ ಬಜೆಟ್ ಅಧಿವೇಶನ ಆರಂಭವಾಗಿದೆ.
ಈ ಬಜೆಟ್ ಈ ಹಿಂದಿನ ಬಜೆಟ್ಗಿಂತ ಸುಮಾರು 70,000 ಕೋಟಿ ರೂ. ಹೆಚ್ಚಾಗುವ ಸಾಧ್ಯತೆ ಇದೆ. ಕಳೆದ ವರ್ಷ ಜುಲೈನಲ್ಲಿ ಸಿಎಂ ಅವರ ಹಿಂದಿನ ಬಜೆಟ್ ಒಟ್ಟು 3,27,747 ಕೋಟಿ ರೂ.ಗಳನ್ನು ಹೊಂದಿದ್ದು, ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಫೆಬ್ರವರಿ 2023 ರಲ್ಲಿ ಅವರ ಹಿಂದಿನ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ನಲ್ಲಿ 3,09,182 ಕೋಟಿ ರೂ. ಇತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications