ಕರ್ನಾಟಕ ಸರ್ಕಾರ ಆರೋಪಗಳಿಗೆ ಪದೇ ಪದೇ ಗುರಿಯಾಗುತ್ತಲೇ ಇದೆ. ಕಳೆದ ಕೆಲವು ತಿಂಗಳುಗಳಲ್ಲಿ ಸರ್ಕಾರ ಒಂದಿಲ್ಲಾ ಒಂದು ಆರೋಪಕ್ಕೆ ಸಿಲುಕುತ್ತಲೇ ಬಂದಿದೆ. ಮೊದಲು ವಾಲ್ಮೀಕಿ ಹಗರಣ ಆಡಳಿತ ರೂಡ ಪಕ್ಷದ ನಿದ್ದೆ ಗೆಡಿಸಿದರೆ, ಬಳಿಕ ಮುಡಾ ಹಗರಣ ಸರ್ಕಾರವನ್ನು ಇಕಟ್ಟಿಗೆ ಸಿಲುಕಿಸಿದೆ. ಈಗ ಬೆಳಕಿಗೆ ಬಂದಿರುವ ವಕ್ಫ್ ಆಸ್ತಿ ವಿವಾದಗಳಿಂದ ಕೆಂಗೆಟ್ಟಿರುವ ಸರ್ಕಾರಕ್ಕೆ ಮತ್ತೊಂದು ವಿವಾದ ಕೊರಳು ಸುತ್ತಿಕೊಂಡಿದೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆರೋಪಿಸಿ ಮಧ್ಯ ಮಾರಾಟಗಾರರ ಸಂಘ ರಾಜ್ಯಪಾಲರಿಗೆ ದೂರು ನೀಡಿದೆ.
ಅಬಕಾರಿ ಸಚಿವರು ಹಾಗೂ ಇಲಾಖೆ ಸುಲಿಗೆಗೆ ಇಳಿದಿದೆ ಎಂದು ಮಧ್ಯ ಮಾರಾಟಗಾರರ ಸಂಘ ಆರೋಪಿಸಿದೆ. ಇಲಾಖೆಯಲ್ಲಿ ಕಾರ್ಯವನ್ನು ಮಾಡುವ ಅಧಿಕಾರಿಗಳ ವರ್ಗಾವಣೆಗೆ ಸಚಿವ ಆರ್.ಬಿ ತಿಮ್ಮಾಪುರ್ ಲಂಚ ಪಡೆಯುತ್ತಿದ್ದು, ಅಧಿಕಾರಿಗಳು ಮದ್ಯದಂಗಡಿಯಿಂದ ಬಹಿರಂಗವಾಗಿ ಹಣ ಪಡೆಯುತ್ತಿದ್ದಾರೆ ಎಂದು ರಾಜ್ಯಪಾಲಿರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ರಾಜ್ಯಪಾಲರಿಗೆ ನೀಡಿದ ದೂರಿನಲ್ಲಿ ಏನೆಲ್ಲಾ ಇದೆ?
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಮಧ್ಯ ಮಾರಾಟಗಾರರ ಸಂಘ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಕೋಟಿ ಕೋಟಿ ರೂಪಾಯಿಗೂ ಹೆಚ್ಚಿನ ಹಣವನ್ನು ಇಲಾಖೆಯಲ್ಲಿನ ಅಧಿಕಾರಿಗಳ ವರ್ಗಾವಣೆಗೆ ಪಡೆಯಲಾಗಿದೆ ಎಂದು ಗಂಭೀರ ಆರೋಪ ಸಹ ಹೊರಿಸಲಾಗಿದೆ. ಕಳೆದ ಮೂರು ವರ್ಷದಿಂದ ಹಣ ವರ್ಗಾವಣೆ ನಡೆಯುತ್ತಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಸಿಎಲ್ 7 ಪರವಾನಿಗೆಗೆ ಎಷ್ಟು ಹಣ?
ಕಾನೂನು ನಿಯಮಗಳನ್ನು ಇಲಾಖೆ ಗಾಳಿಗೆ ತೂರಿದೆ ಎಂದು ರಾಜ್ಯಪಾಲರಿಗೆ ನೀಡಿರುವ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸಿಎಲ್ 7 ಪರವಾನಿಗೆ ಪಡೆಯಲು 30 ರಿಂದ 70 ಲಕ್ಷ ಹಣವನ್ನು ನೀಡಬೇಕಾಗುತ್ತದೆ. ಕಳೆದ ಒಂದು ವರ್ಷದಲ್ಲಿ 1000ಕ್ಕಿಂತಲೂ ಹೆಚ್ಚು ಅಕ್ರಮ ಪರವಾನಿಗೆ ನೀಡಲಾಗಿದ್ದು, 300-700 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಪತ್ರದಲ್ಲಿ ಆರೋಪಿಸಲಾಗಿದೆ.
ಕರ್ನಾಟಕದಲ್ಲಿ CL-7 ಮದ್ಯದ ಪರವಾನಗಿಯನ್ನು ಹೊಟೇಲ್ಗಳು, ಬೋರ್ಡಿಂಗ್ ಹೌಸ್ಗಳಿಗೂ ನೀಡಲಾಗಿದೆ. ಈ ಪರವಾನಿಗೆಗೆ ವಾರ್ಷಿಕ 4 ರಿಂದ 8.5 ಲಕ್ಷದ ರೂಪಾಯಿಗಳ ವರೆಗೆ ಶುಲ್ಕವನ್ನು ವಿಧಿಸಲಾಗುತ್ತದೆ. ಈ ಪರವಾನಿಗೆಯ ಶುಲ್ಕ, ಪರವಾನಿಗೆ ಪಡೆದ ಸ್ಥಳದ ಆಧಾರದ ಮೇಲೆ ನಿರ್ಧಾರವಾಗುತ್ತದೆ. ಈ ಮೊತ್ತ ಸಿಟಿ ಹಾಗೂ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ ಮಿತಿ ಮೀರಿದೆ.
ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಕಡಿಮೆ ಮಾಡಲು, ಸಿಎಲ್ 7 ಪರವಾನಿಗೆ ನೀಡುವುದನ್ನು ಕಡಿಮೆ ಮಾಡಲು ಸಂಘ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯಲಾಗಿತ್ತು. ಇನ್ನು ಅಧಿಕಾರಿಗಳು ಸಹ ತಾವು ಈ ಹುದ್ದೆಗೆ ಏರಲು ಸಚಿವರಿಗೆ ಹಣ ನೀಡಿದ್ದೇವೆ ಎಂದು ತಿಳಿಸುತ್ತಾರೆ. ಕಳೆದ ಒಂದು ವರ್ಷದಲ್ಲಿ 1,000 ಲೈಸೆನ್ಸ್ ಹಣ ಪಡೆದು ಲೈಸೆನ್ಸ್ ನೀಡಲಾಗಿದೆ ಎಂದು ಮಧ್ಯ ಮಾರಾಟಗಾರರ ಸಂಘದ ಅಧ್ಯಕ್ಷ ಎಸ್.ಗುರುಸ್ವಾಮಿ ಆರೋಪಿಸಿದ್ದಾರೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Gold Rate: ಬೆಂಗಳೂರಲ್ಲಿ ಚಿನ್ನದ ಬೆಲೆ ಏರಿಕೆ…24K/100 ಗ್ರಾಂ ಚಿನ್ನದಲ್ಲಿ ಬರೋಬ್ಬರಿ 5,500 ರೂ. ಏರಿಕೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications