ಜೂನ್ 1ರ ಸೋಮವಾರದಿಂದ ಅನ್ವಯ ಆಗುವಂತೆ ಅಂತರರಾಜ್ಯ ಪ್ರಯಾಣಕ್ಕೆ ಸಂಬಂಧಿಸಿದ ಹಾಗೆ ಕರ್ನಾಟಕ ಸರ್ಕಾರವು ಭಾನುವಾರ 'ಪ್ರೊಟೋಕಾಲ್' ಪರಿಷ್ಕೃತಗೊಳಿಸಿದೆ. ಜೂನ್ 1ನೇ ತಾರೀಕಿನಿಂದ 'Unlock 1' ಆರಂಭವಾಗಲಿದೆ. ಅಂದರೆ, ಕೊರೊನಾದ ಕಾರಣಕ್ಕೆ ಇಷ್ಟು ಸಮಯ ಯಾವ್ಯಾವುದಕ್ಕೆ ನಿರ್ಬಂಧ ಹೇರಲಾಗಿತ್ತೋ ಅವೆಲ್ಲವನ್ನೂ ಹಂತಹಂತವಾಗಿ ಹಿಂತೆಗೆದುಕೊಳ್ಳಲು ಆರಂಭಿಸಲಾಗುತ್ತದೆ.
ಅಂತರರಾಜ್ಯ ಪ್ರಯಾಣಿಕರು ಸೋಮವಾರದಿಂದ ಸೇವಾ ಸಿಂಧು ಅಪ್ಲಿಕೇಷನ್ ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಲೇಬೇಕು. ಆದರೆ ಅನುಮತಿಯ (ಅಥವಾ ಇ ಪಾಸ್) ಅಗತ್ಯ ಇಲ್ಲ. ಆದರೆ ಪ್ರಯಾಣಿಕರಲ್ಲಿ ಕೊರೊನಾ ಸೋಂಕಿನ ರೋಗಿಗಳಿಗೆ ಏಳು ದಿನಗಳ ಕಾಲ ಆಸ್ಪತ್ರೆಯಲ್ಲಿ ಕಡ್ಡಾಯವಾಗಿ ಪ್ರತ್ಯೇಕ ವಾಸ ಹಾಗೂ ತಕ್ಷಣ ಕೋವಿಡ್- 19 ಪರೀಕ್ಷೆ ಮಾಡಿಸಬೇಕು.
ಇನ್ನು ಮಹಾರಾಷ್ಟ್ರದಿಂದ ಬರುವಂಥ, ಕೊರೊನಾ ಸೋಂಕಿನ ಯಾವುದೇ ಲಕ್ಷಣ ಇಲ್ಲದವರಿಗೆ ಏಳು ದಿನಗಳ ಸಾಂಸ್ಥಿಕ (ಇನ್ ಸ್ಟಿಟ್ಯೂಷನಲ್) ಕ್ವಾರಂಟೈನ್ ನಿಂದ ವಿನಾಯಿತಿ ಇದೆ. ಆದರೆ ಅಂತಹವರು ಹದಿನಾಲ್ಕು ದಿನ ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕು.

ಕುಟುಂಬದಲ್ಲಿ ಸಾವು ಸಂಭವಿಸಿದವರು, ಗರ್ಭಿಣಿಯರು, ಹತ್ತು ವರ್ಷದ ಒಳಗಿನ ಮಕ್ಕಳು, ಅರವತ್ತು ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಗಂಭೀರವಾದ ಕಾಯಿಲೆಯಿಂದ ಬಳಲುತ್ತಿರುವವರಿಗೆ ಈ ಹೋಮ್ ಕ್ವಾರಂಟೇನ್ ಅನ್ವಯ ಆಗುತ್ತದೆ.
ಮಹಾರಾಷ್ಟ್ರದಿಂದ ಬರುವಂಥ ಉದ್ಯಮಿಗಳು, ವ್ಯಾಪಾರಿಗಳು- ವರ್ತಕರಿಗೆ ಕೈ ಮೇಲೆ ಸ್ಟ್ಯಾಂಪ್ ಹಾಕುವುದಿಲ್ಲ. ಆದರೆ ಅವರು ಕೋವಿಡ್ ಪರೀಕ್ಷೆ ಮಾಡಿಸಿ, ನೆಗೆಟಿವ್ ಎಂಬ ವರದಿಯ ಸರ್ಟಿಫಿಕೇಟ್ ಇಟ್ಟುಕೊಂಡಿರಬೇಕು ಹಾಗೂ ಏಳು ದಿನಗಳ ಒಳಗಾಗಿ ಹಿಂತಿರುಗುವ ಟಿಕೆಟ್ ಮಾಡಿಸಿರಬೇಕು.
ಇತರ ಎಲ್ಲ ರಾಜ್ಯಗಳಿಂದ ಬರುವಂಥ ಪ್ರಯಾಣಿಕರಿಗೆ ಹದಿನಾಲ್ಕು ದಿನಗಳ ಹೋಮ್ ಕ್ವಾರಂಟೈನ್ ಕಡ್ಡಾಯ ಮಾಡಲಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ಹೇಳಿದೆ.
More From GoodReturns

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?



Click it and Unblock the Notifications