ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆಯಿಂದಾಗಿ ವಾಹನ ತೆರಿಗೆ ಪಾವತಿ ಅವಧಿಯನ್ನು ಕರ್ನಾಟಕ ರಾಜ್ಯ ಸರ್ಕಾರ ಮತ್ತೆ ವಿಸ್ತರಿಸಿದೆ. ಈ ಹಿಂದೆ ಮೇ 15ರೊಳಗೆ ತೆರಿಗೆ ಪಾವತಿಗೆ ಸೂಚಿಸಲಾಗಿತ್ತು. ಇದಕ್ಕೂ ಮೊದಲು ಏಪ್ರಿಲ್ 15ರೊಳಗೆ ತೆರಿಗೆ ಕಟ್ಟಲು ಆದೇಶ ಹೊರಡಿಸಿತ್ತು. ಇದೀಗ ಜುಲೈ 15ರವರೆಗೆ ದಂಡ ರಹಿತವಾಗಿ ತೆರಿಗೆ ಪಾವತಿಸಲು ಸರ್ಕಾರ ಆದೇಶಿಸಿದೆ.
ಎಲ್ಲಾ ನೊಂದಾಯಿತ ಸಾರಿಗೆ ಪ್ರಯಾಣಿಕ ವಾಹನಗಳಿಗೆ (ಹೊಸ ವಾಹನಗಳ ನೊಂದಣಿಯನ್ನು ಹೊರತುಪಡಿಸಿ) ಈ ವಿಸ್ತರಣೆ ಘೋಷಿಸಲಾಗಿದೆ. ಮೇ 15 ರ ಒಳಗಾಗಿ ಪಾವತಿಸಬೇಕಾಗಿದ್ದ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ವಿಸ್ತರಿಸಿದ್ದ ಅವಧಿ ಜುಲೈ 15ರವರೆಗೆ ವಿಸ್ತರಣೆ ಮಾಡಲಾಗಿದೆ.
ಇನ್ನು 2021-22ನೇ ಆರ್ಥಿಕ ವರ್ಷದಲ್ಲಿ ಹೋಟೆಲ್, ರೆಸಾರ್ಟ್, ರೆಸ್ಟೋರೆಂಟ್ ಮತ್ತು ಮನರಂಜನಾ ಪಾರ್ಕ್ಗಳಿಗೆ ಶೇ. 50 ರಷ್ಟು ಆಸ್ತಿ ತೆರಿಗೆ ವಿನಾಯಿತಿ ನೀಡಲಾಗಿದೆ. ಏಪ್ರಿಲ್, ಮೇ ಮತ್ತು ಜೂನ್ ತಿಂಗಳ ವಿದ್ಯುಚ್ಛಕ್ತಿ ಬೇಡಿಕೆ ಶುಲ್ಕ ಪಾವತಿಗೂ ವಿನಾಯಿತಿಯನ್ನು ನೀಡಲಾಗಿದೆ.

ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ 5000 ರೂ. ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾಯಿಸಲಾಗುವುದು. ಅಬಕಾರಿ ಸನ್ನದು ಶುಲ್ಕ ಮತ್ತು ಹೆಚ್ಚುವರಿ ಸನ್ನದು ಶುಲ್ಕದ ಶೇ. 50ರಷ್ಟು ಮೊತ್ತ ಪಾವತಿಸಬೇಕು, ಉಳಿದ ಶೇ. 50 ರಷ್ಟು ಶುಲ್ಕ ಮೊತ್ತ ಡಿಸೆಂಬರ್ 31 ರೊಳಗೆ ಪಾವತಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಕೋವಿಡ್-19 ಪೀಡಿತ ಪ್ರದೇಶಗಳಿಗೆ ಪರಿಚಯಿಸಲಾದ ಸಾಲ ಖಾತರಿ ಯೋಜನೆಯ ಮೂಲಕ 11,000 ಕ್ಕೂ ಹೆಚ್ಚು ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳು / ಪ್ರಯಾಣ ಮತ್ತು ಪ್ರವಾಸೋದ್ಯಮ ಮಧ್ಯಸ್ಥಗಾರರಿಗೆ ಹಣಕಾಸು ಸಹಾಯವನ್ನು ಕೇಂದ್ರ ಹಣಕಾಸು ಸಚಿವರು ಘೋಷಿಸಿದರು. ಪ್ರತಿ ಪ್ರವಾಸಿ ಮಾರ್ಗದರ್ಶಿಗೆ 1 ಲಕ್ಷ ರೂ.ವರೆಗೆ ಸಾಲ 100% ಖಾತರಿಯೊಂದಿಗೆ ಲಭ್ಯವಿರುತ್ತದೆ. ಮರು ವಿತರಣೆ ಪ್ರಕ್ರಿಯೆಯ ನಂತರ, ಮೊದಲ 5 ಲಕ್ಷ ಪ್ರವಾಸಿಗರಿಗೆ ಉಚಿತ ಪ್ರವಾಸಿ ವೀಸಾ ನೀಡಲಾಗುವುದು. ಇದರ ಒಟ್ಟು ಮೊತ್ತ 100 ಕೋಟಿ ರೂ. ಆಗಿದೆ.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ



Click it and Unblock the Notifications