ಆಭರಣ ಮಾರಾಟ ಮಳಿಗೆಗಳನ್ನು ತೆರೆಯಲು ಕರ್ನಾಟಕ ಸರ್ಕಾರ ಯೋಜನೆ: ಚಿನ್ನದ ನಾಣ್ಯಗಳ ಮಾರಾಟ

ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಆಭರಣ ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯಲು ಯೋಜಿಸಿದ್ದು, 'ಬ್ರಾಂಡ್‌ ಕರ್ನಾಟಕ' ಚಿತ್ರವನ್ನೊಳಗೊಂಡ ಚಿನ್ನದ ನಾಣ್ಯಗಳ ಮಾರಾಟಕ್ಕೆ ಯೋಜನೆ ನಡೆಸಿದೆ.

ಕರ್ನಾಟಕದ ಬ್ರಾಂಡ್ ಅನ್ನು ಮತ್ತಷ್ಟು ಪ್ರಚಾರ ಪಡಿಸಲು ಖಾಸಗಿ ಆಭರಣ ವ್ಯಾಪಾರಿಗಳ ಜೊತೆ ಕೈ ಜೋಡಿಸಿ ಚಿನ್ನದ ಆಭರಣಗಳು ಹಾಗೂ ಚಿನ್ನದ ನಾಣ್ಯಗಳ ಮಾರಾಟಕ್ಕೆ ಚಿಂತನೆ ನಡೆಸಿದೆ.

ಚಿನ್ನ ಉತ್ಪಾದಿಸುವ ಭಾರತದ ಏಕೈಕ ರಾಜ್ಯವಾಗಿರುವ ಕರ್ನಾಟಕವು ಆಭರಣ ಮಳಿಗೆಗಳನ್ನು ತೆರೆಯಲು ಮತ್ತು 'ಬ್ರಾಂಡ್ ಕರ್ನಾಟಕ' ಚಿತ್ರದೊಂದಿಗೆ ಹಳದಿ ಲೋಹವನ್ನು ಉತ್ತೇಜಿಸಲು ಯೋಜಿಸುತ್ತಿದೆ. ಈ ಕಾರಣದಿಂದ ಖಾಸಗಿ ಆಭರಣ ವ್ಯಾಪಾರಿಗಳೊಂದಿಗೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಆಭರಣ ಚಿಲ್ಲರೆ ಮಾರಾಟ ಮಳಿಗೆಗಳನ್ನು ತೆರೆಯುವ ಸಾಧ್ಯತೆಗಳನ್ನು ಸರ್ಕಾರ ಹುಡುಕುತ್ತಿದೆ.

''ರಾಜ್ಯದ ಬ್ರಾಂಡ್‌ಗಳಾದ ಮೈಸೂರು ಸಿಲ್ಕ್‌ ಮತ್ತು ಮೈಸೂರು ಸ್ಯಾಂಡಲ್ ಸೋಪ್‌ ಮಾದರಿಯಲ್ಲಿ ಚಿನ್ನದ ಆಭರಣಗಳನ್ನು ಉತ್ಪಾದಿಸಿ ಹೊಸ ಬ್ರಾಂಡ್ ಹುಟ್ಟುಹಾಕಲು ಸರ್ಕಾರ ಯೋಜಿಸಿದೆ'' ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿ, ಜ್ಯುವೆಲ್ಲರ್ಸ್ ಅಸೋಸಿಯೇಷನ್ ಜೊತೆ ಸಭೆ ನಡೆಸಿದ ಬಳಿಕ ಗುರುವಾರ ವಿಕಾಸ ಸೌಧದಲ್ಲಿ ಹೇಳಿದ್ದಾರೆ.

ಚಿನ್ನದ ನಾಣ್ಯಗಳಿಗೆ ಗಂಡುಬೇರುಂಡ ಲಾಂಛನ

ಚಿನ್ನದ ನಾಣ್ಯಗಳಿಗೆ ಗಂಡುಬೇರುಂಡ ಲಾಂಛನ

ಹೌದು ಕರ್ನಾಟಕ ಸರ್ಕಾರದ ಹೆಮ್ಮೆಯ ಲಾಂಛನವಾದ ಗಂಡುಬೇರುಂಡ ಗುರುತಿನ ಚಿನ್ನದ ನಾಣ್ಯಗಳನ್ನು ತಯಾರಿಸಲು ಸರ್ಕಾರ ತೀರ್ಮಾನಿಸಿದೆ. ಚಿನ್ನದ ನಾಣ್ಯಗಳಿಗೆ ಗ್ರಾಹಕರಿಂದ ಹೆಚ್ಚಿನ ಬೇಡಿಕೆ ಬರುತ್ತಿದ್ದು, ಇದನ್ನು ಖಾಸಗಿ ಆಭರಣ ವ್ಯಾಪಾರಿಗಳೊಂದಿಗೆ ಒಪ್ಪಂದ ಮಾಡಿಕೊಂಡು ತಯಾರಿಸಿ ಮಾರಾಟ ಮಾಡಲು ಸರ್ಕಾರ ಯೋಜಿಸಿದೆ. ಶ್ರೀಘ್ರದಲ್ಲೇ ಆಭರಣ ಮಳಿಗೆಗಳಲ್ಲಿ ಚಿನ್ನದ ನಾಣ್ಯಗಳನ್ನು ಹೊರತರುವುದಾಗಿ ತಿಳಿಸಿದೆ.

'' ಈ ಹೆಗ್ಗುರುತು ಸರ್ಕಾರವು ಹೆಚ್ಚಿನ ಆದಾಯ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ. ಚಿನ್ನವು ಜನರ ಅತ್ಯಂತ ಜನಪ್ರಿಯ ಹೂಡಿಕೆ ಆಯ್ಕೆಗಳಲ್ಲಿ ಒಂದಾಗಿರುವುದರಿಂದ, ಸರ್ಕಾರದ ಉದ್ಯಮವು ಉತ್ತಮ ಯಶಸ್ಸನ್ನು ಸಾಧಿಸುವ ನಿರೀಕ್ಷೆಯಿದೆ " ಎಂದು ಸಚಿವ ನಿರಾಣಿ ಹೇಳಿದರು.

 

ಚಿನ್ನದ ವಿಶೇಷ ಆರ್ಥಿಕ ವಲಯ ಸ್ಥಾಪನೆ

ಚಿನ್ನದ ವಿಶೇಷ ಆರ್ಥಿಕ ವಲಯ ಸ್ಥಾಪನೆ

ಹಿಂದುಳಿದ ಪ್ರದೇಶದ ಒಟ್ಟಾರೆ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸರ್ವಾಂಗೀಣವಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಚಿನ್ನದ ವಿಶೇಷ ಆರ್ಥಿಕ ವಲಯ ಸ್ಥಾಪನೆಗೆ ಸರ್ಕಾರ ಯೋಜಿಸಿರುವುದಾಗಿ ಸಚಿವ ಮುರುಗೇಶ್ ನಿರಾಣಿ ಪ್ರಕಟಿಸಿದ್ದಾರೆ. ಈ ವಿಶೇಷ ಆರ್ಥಿಕ ವಲಯ ಸ್ಥಾಪನೆಯಾದರೆ ಹೂಡಿಕೆಗೆ ಉದ್ಯಮಿಗಳು ಮುಂದೆ ಬರಲಿದ್ದು, ಈ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಚಿನ್ನದ ಉತ್ಪಾದನೆ ದ್ವಿಗುಣಗೊಳಿಸಲು ಯೋಜನೆ

ಚಿನ್ನದ ಉತ್ಪಾದನೆ ದ್ವಿಗುಣಗೊಳಿಸಲು ಯೋಜನೆ

ಈ ವರ್ಷದ ಅಂತ್ಯಕ್ಕೆ ರಾಜ್ಯದಲ್ಲಿ ಚಿನ್ನದ ಉತ್ಪಾದನೆಯನ್ನು ದ್ವಿಗುಣಗೊಳಿಸುವ ಮಹತ್ವದ ಯೋಜನೆಗೆ ಸರ್ಕಾರ ಕೈ ಹಾಕಿದೆ. ಪ್ರಸ್ತುತ ಇರುವ ಹಟ್ಟಿ ಗೋಲ್ಡ್‌ ಮೈನ್ಸ್‌ ಲಿಮಿಟೆಡ್‌ ವತಿಯಿಂದ 1700 ಕೆಜಿ ಚಿನ್ನವನ್ನು ಉತ್ಪಾದನೆ ಮಾಡಲಾಗುತ್ತಿದೆ. 2022ರ ಹೊತ್ತಿಗೆ ಈ ಸಾಮರ್ಥ್ಯವನ್ನು 5,000 ಕೆಜಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ನಿರಾಣಿ ಹೇಳಿದರು.

ಆಭರಣಗಳಿಗಾಗಿ ಪ್ರತ್ಯೇಕವಾಗಿ ವಿಶೇಷ ಆರ್ಥಿಕ ವಲಯವನ್ನು (ಎಸ್‌ಇ Z ಡ್) ಸ್ಥಾಪಿಸಲು ಸರ್ಕಾರ ಯೋಜಿಸುತ್ತಿದೆ. ಎಸ್‌ಇ Z ಡ್ ಸ್ಥಾಪಿಸುವುದರಿಂದ ಕೈಗಾರಿಕೋದ್ಯಮಿಗಳು ಈ ಪ್ರದೇಶದಲ್ಲಿ ಹೂಡಿಕೆ ಮಾಡಲು ಪ್ರೇರೇಪಿಸುತ್ತದೆ ಮತ್ತು ಆ ಮೂಲಕ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ. ಕಲ್ಯಾಣ ಕರ್ನಾಟಕ ಪ್ರದೇಶದ ಒಂದು ಸ್ಥಳದಲ್ಲಿ ಆಭರಣ ಉದ್ಯಾನವನ ಸ್ಥಾಪಿಸಲು ರಾಜ್ಯ ಸರ್ಕಾರ ಯೋಜಿಸುತ್ತಿದೆ.

 

ಹಟ್ಟಿ ಗೋಲ್ಡ್‌ ಮೈನ್ಸ್ ಕಂಪನಿ ಹೆಸರು ಮರುನಾಮಕರಣ

ಹಟ್ಟಿ ಗೋಲ್ಡ್‌ ಮೈನ್ಸ್ ಕಂಪನಿ ಹೆಸರು ಮರುನಾಮಕರಣ

ಹಟ್ಟಿ ಗೋಲ್ಡ್ ಮೈನ್ಸ್ ಲಿಮಿಟೆಡ್ ಅನ್ನು ಕರ್ನಾಟಕ ರಾಜ್ಯ (ಹಟ್ಟಿ) ಗೋಲ್ಡ್ ಮೈನ್ಸ್ ಲಿಮಿಟೆಡ್ ಎಂದು ಮರುನಾಮಕರಣ ಮಾಡಲು ಸರ್ಕಾರ ಯೋಜಿಸುತ್ತಿದೆ. ಕರ್ನಾಟಕದ ಹೆಸರನ್ನು ಜಾಗತಿಕ ಮಟ್ಟದಲ್ಲಿ ದೊಡ್ಡ ಬ್ರಾಂಡ್ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+