ಎಂಥಾ ಕಾಲವಯ್ಯ! 33% ಅಂಕ ಬಂದರೆ SSLC ಪಾಸ್..! ಹೌದು, 2025-26ನೇ ವರ್ಷದಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸ್ ಆಗಲು ಬೇಕಾದ ಅಂಕವನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ಶಿಕ್ಷಣ ಇಲಾಖೆಯ ನಿಯಮದ ಪ್ರಕಾರ ಎಸ್ಎಸ್ಎಲ್ಸಿಯಲ್ಲಿ ಪಾಸ್ ಆಗಲು ಶೇ 35 ಅಂಕವನನ್ನು ತಗೆದುಕೊಂಡರೆ ಮಾತ್ರ ಪಾಸ್ ಆಗುತ್ತಾರೆ. ಆದರೆ ಮುಂದೆ ಈ ಯೋಜನೆ ಜಾರಿಗೆ ಬಂದರೆ ಶೇ. 33 ಅಂಕ ಪಡೆದ್ದರೆ ಸಾಕು ಉತ್ತೀರ್ಣರಾಗುತ್ತಾರೆ.
ಈ ಕುರಿತು ಈಗಾಗಲೇ 'ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿಯ ನಿಯಮಾವಳಿಗಳು (ತಿದ್ದುಪಡಿ) 2025 ಹೆಸರಿನ ಕರಡು ಅಧಿಸೂಚನೆಯನ್ನ ಸರ್ಕಾರ ಹೊರಡಿಸಿದೆ ಅಂತ ಪಿಟಿಐ ಸುದ್ದಿ ಸಂಸ್ಥೆ ವರದಿಯನ್ನು ಕೂಡ ಮಾಡಿದೆ. ಹೊಸ ನಿಯಮದ ಪ್ರಕಾರ, ವಿದ್ಯಾರ್ಥಿಗಳು ಇಂಟರ್ನಲ್ ಮತ್ತು ಎಕ್ಸ್ಟರ್ನಲ್ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನ ಸೇರಿಸಿ, ಸರಾಸರಿ ಶೇ. 33 ಅಂಕ ಪಡೆದರೆ ಸಾಕು.

ಈ ಬದಲಾವಣೆಯನ್ನು 1966ರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ತರಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೂಡ ಅಧಿಕೃತ ಅಧಿಸೂಚನೆಹೊರಡಿಸಿದೆ.
ಅಧಿಸೂಚನೆಯಲ್ಲಿ ಇರುವ ಮಾಹಿತಿ ಪ್ರಕಾರ ಪರೀಕ್ಷೆ ಬರೆಯುವವರು ಆಂತರಿಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆಗಳಲ್ಲಿ ಸರಾಸರಿ ಶೇ.33 ಅಂಕವನ್ನು ಪಡೆಯಬೇಕಾಗುತ್ತದೆ. ಆರು ಅಧ್ಯಾಯದ ವಿಷಯದಲ್ಲಿ ಒಟ್ಟು 625 ಅಂಕಗಳಿಗೆ ಕನಿಷ್ಠ 206 ಅಂಕಗಳನ್ನ ಪಡೆಯಬೇಕು. ಪ್ರತಿ ವಿಷಯದಲ್ಲೂ ಆ ವಿಷಯದ ಒಟ್ಟು ಅಂಕಗಳಲ್ಲಿ ಕನಿಷ್ಠ ಶೇ. 30 ಅಂಕಗಳವನ್ನು ಪಡೆದುಕೊಂಡರೆ ಆತ ಉತ್ತೀರ್ಣರಾಗುತ್ತಾರೆ ಎಂಬ ಮಾಹಿತಿ ಇದೆ.
ಈ ಬದಲಾವಣೆಗಳ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ತಿಳಿಸಲು ಸರ್ಕಾರ 15 ದಿನಗಳ ಕಾಲಾವಕಾಶ ನೀಡಿದೆ. ಸಾರ್ವಜನಿಕರು ತಮ್ಮ ಸಲಹೆಗಳನ್ನ ಸರ್ಕಾರಕ್ಕೆ ತಿಳಿಸಬಹುದು.
ಇತ್ತೀಚೆಗೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರು, 2024-25ನೇ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸೊಸೈಟಿ (KREIS) ಶಾಲೆಗಳ ಎಸ್ಎಸ್ಎಲ್ಸಿ ಫಲಿತಾಂಶ ಶೇಕಡಾ ಶೇ. 91 ರಷ್ಟಿತ್ತು. ಇದು ರಾಜ್ಯದ ಸರಾಸರಿ ಶೇಕಡಾ ಶೇ. 62.34ಕ್ಕಿಂತ ಹೆಚ್ಚು ಎಂದು ಹೇಳಿದ್ದಾರೆ.
ಸಾಮಾಜಿಕ ನ್ಯಾಯ ತರೋದಕ್ಕೆ ಶಿಕ್ಷಣ ಒಂದು ಮುಖ್ಯವಾದ ಗುರಿ ಎಂದು ಸಚಿವ ಮಹದೇವಪ್ಪ ಹೇಳಿದ್ದಾರೆ. KRIES ಕರ್ನಾಟಕ ಸರ್ಕಾರ ನಡೆಸುವ ವಸತಿ ಶಿಕ್ಷಣ ಸಂಸ್ಥೆಯಾಗಿದೆ. ಹಿಂದುಳಿದ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ವಸತಿ ಸೌಲಭ್ಯಯನ್ನು ನೀಡುತ್ತದೆ.
ಒಟ್ಟಾರೆಯಾಗಿ ಹೇಳುವುದಾದರೆ ವಿದ್ಯಾರ್ಥಿ ಜೀವನದಲ್ಲಿ ಮುಖ್ಯ ಘಟ್ಟವೆಂದರೆ ಎಸ್ಎಸ್ಎಲ್ಸಿ ಪರೀಕ್ಷೆ.ಪಾಸ್ ಆಗಲು ನಿಮ್ಮಗೆ ಎಲ್ಲಾ ವಿಷಯದಿಂದ ಶೇ.35ರಷ್ಟು ಅಂಕವನ್ನು ಗಳಿಸುದ್ದರೆ ಮಾತ್ರ ನೀವು ಪಾಸ್ ಇಲ್ಲವಾದರೂ ಫೀಲ್ ಆಗುತ್ತಿದ್ದರೆ. ಇದರಿಂದ ಎಷ್ಟು ವಿದ್ಯಾರ್ಥಿಗಳು ಆತ್ನಹತ್ಯೆಯನ್ನು ಕೂಡ ಮಾಡಿಕೊಂಡಿದ್ದರೆ. ಇದನೆಲ್ಲಾ ಗಮನಿಸಿದ ಸರ್ಕಾರ ಪಾಸ್ ಅಂಕವನ್ನು ಕಡಿಮೆ ಮಾಡಲು ನಿರ್ಧಾರವನ್ನು ಮಾಡಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications