ಜನೌಷಧಿ ಕೇಂದ್ರಗಳ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಅದೇನೆಂದರೆ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಜನೌಷಧಿ ಕೇಂದ್ರಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಇದೊಂದು ಮಹತ್ವದ ಆದೇಶವಾಗಿದ್ದು ಅತಿ ಕಡಿಮೆ ಬೆಲೆಗೆ ಔಷಧಿಗಳನ್ನು ಕೊಳ್ಳುತ್ತಿದ್ದ ಬಡ ಹಾಗೂ ಮಧ್ಯಮ ವರ್ಗದ ಜನತೆಗೆ ಭಾರಿ ಅಸಮಾಧಾನ ಉಂಟಾಗಿದೆ. ಕೈಗೆಟುಕುವ ದರದಲ್ಲಿ ಔಷಧಿ ಒದಗಿಸುತ್ತಿದ್ದ ಕೇಂದ್ರಗಳು ಮುಚ್ಚಲು ಹಲವು ಕಾರಣಗಳು ಇಲ್ಲಿವೆ.

ಇನ್ನು ಜನೌಷಧಿ ಕೇಂದ್ರಗಳನ್ನು ಮುಚ್ಚುವ ಕುರಿತಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಆದೇಶ ಹೊರಡಿಸಿದೆ. ಈ ಆದೇಶದ ಅನುಸಾರ ಸಾರ್ವಜನಿಕ ಆಸ್ಪತ್ರೆಗಳು ಹೊರಗಿನ ಔಷಧಿಗಳನ್ನು ಶಿಫಾರಸು ಮಾಡಬಾರದು ಎಂಬುದಾಗಿದೆ. ಏಕೆಂದರೆ ಇದು ರಾಜ್ಯದ ನೀತಿಗೆ ವಿರೋಧವಾಗಿ ಈ ಕೇಂದ್ರಗಳು ಕೆಲಸ ಮಾಡುತ್ತಿವೆ ಎಂದು ಆರೋಪಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಹೊಸ ಅರ್ಜಿಗಳಿಗೂ ತಡೆಯಾಜ್ಞೆ:
ಈಗ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಪ್ರಕಾರ, ಈಗಾಗಲೇ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳಿಗೆ ನೀಡಿದ್ದ ಅನುಮತಿಗಳನ್ನು ಸಂಪೂರ್ಣವಾಗಿ ರದ್ದುಪಡಿಸಲಾಗುತ್ತದೆ. ಅಲ್ಲದೆ, ಹೊಸ ಕೇಂದ್ರ ಸ್ಥಾಪನೆಗೆ ದಾಖಲಾಗಿದ್ದ 31 ಅರ್ಜಿಗಳನ್ನು ಸಹ ತಿರಸ್ಕರಿಸಲಾಗಿದೆ.
207 ಜನೌಷಧಿ ಕೇಂದ್ರಗಳು ಕ್ಲೋಸ್?
ಸದ್ಯ, ಕರ್ನಾಟಕದಲ್ಲಿ ಸುಮಾರು 207 ಜನೌಷಧಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಈ ಕೇಂದ್ರಗಳಲ್ಲಿ ಬಹುತೇಕವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಸ್ಥಾಪನೆಯಾಗಿದ್ದು, ಜನಸಾಮಾನ್ಯರಿಗೆ 90%ವರೆಗೆ ಕಡಿಮೆ ದರದಲ್ಲಿ ಜೆನೆರಿಕ್ ಔಷಧಿಗಳನ್ನು ನೀಡುತ್ತವೆ. ರಾಜ್ಯ ಸರ್ಕಾರ ಆದೇಶ ನೀಡಿರುವ ಪ್ರಕಾರ ಇವಿಷ್ಟು ಜನೌಷಧಿ ಕೇಂದ್ರಗಳು ಕ್ಲೋಸ್ ಆಗಲಿದೆ ಎನ್ನಲಾಗುವುದಿಲ್ಲ. ಏಕೆಂದರೆ ಸರ್ಕಾರದ ಈ ಆದೇಶ ಕೇವಲ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳಿಗೆ ಮಾತ್ರ ಅನ್ವಯಿಸುತ್ತದೆ.
ಹೊರಗಿರುವ ಜನೌಷಧಿ ಕೇಂದ್ರಗಳು ಮುಂದುವರಿಕೆ:
ಆದರೆ, ಈ ತೀರ್ಮಾನದ ವ್ಯಾಪ್ತಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಕೇಂದ್ರಗಳಿಗೆ ಮಾತ್ರ ಅನ್ವಯವಾಗುತ್ತದೆ. ಆವರಣದ ಹೊರಗಡೆ ಕಾರ್ಯನಿರ್ವಹಿಸುತ್ತಿರುವ ಜನೌಷಧಿ ಕೇಂದ್ರಗಳು ಈ ಆದೇಶದಿಂದ ಹೊರತಾಗಿರುತ್ತವೆ ಮತ್ತು ತಮ್ಮ ಸೇವೆಯನ್ನು ಮುಂದುವರೆಸಬಹುದು.
ಸರಕಾರದ ಹಿತದೃಷ್ಟಿ:
ರಾಜ್ಯ ಸರ್ಕಾರದ ನವೀನ ತೀರ್ಮಾನ ಪ್ರಕಾರ, ಸರ್ಕಾರಿ ಆಸ್ಪತ್ರೆಗಳ ವೈದ್ಯರು ಬ್ರಾಂಡೆಡ್ ಔಷಧಿಗಳನ್ನು ಶಿಫಾರಸು ಮಾಡಬಾರದು ಮತ್ತು ಯಾವುದೇ ರೋಗಿಯನ್ನು ಹೊರಗಿನ ಔಷಧಿ ಅಂಗಡಿಗಳಿಗೆ ಕಳಿಸಲು ಆಗದು. ವೈದ್ಯರು ಕೇವಲ ಜೆನೆರಿಕ್ ಔಷಧಿಗಳ ಹೆಸರಿನಲ್ಲಿ ಮಾತ್ರ ಪುರಸ್ಕಾರ ನೀಡಬೇಕು. ಆ ಔಷಧಿಗಳು ಆಸ್ಪತ್ರೆಯಲ್ಲಿ ಲಭ್ಯವಿಲ್ಲದಿದ್ದರೆ ಮಾತ್ರ ಬೇರೆ ಆಯ್ಕೆ ಪ್ರಯೋಗಿಸಲು ಅವಕಾಶವಿರುತ್ತದೆ. ಈ ಹಿನ್ನಲೆಯಲ್ಲಿ, ಆಸ್ಪತ್ರೆ ಆವರಣದಲ್ಲಿ ಜನೌಷಧಿ ಔಷಧಾಲಯಗಳ ύಪಸ್ಥಿತಿ ಸರ್ಕಾರದ ಈ ನೀತಿಯ ವಿರುದ್ಧವಿದೆ ಎಂದು ಸೂಚಿಸಿ, ಇವುಗಳನ್ನು ಮುಚ್ಚಲಾಗುತ್ತಿದೆ ಎಂಬ ಸ್ಪಷ್ಟನೆ ನೀಡಲಾಗಿದೆ.
ಪರ್ಯಾಯ ವ್ಯವಸ್ಥೆ:
ಸರ್ಕಾರ ಬಡರೈತ ಹಾಗೂ ಮಧ್ಯಮವರ್ಗದ ರೋಗಿಗಳಿಗೆ ಔಷಧಿ ದೊರೆಯದಂತಾಗದಂತೆ ನೋಡಿಕೊಳ್ಳಲು ಹೊಸ ಮಾರ್ಗಗಳನ್ನು ರೂಪಿಸಿದೆ. ರಾಜ್ಯದ ಔಷಧಿ ಸರಬರಾಜು ಸಂಸ್ಥೆ KMSCL (ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್) ಗೆ ಬಿಪಿಪಿಐ (ಬ್ಯೂರೋ ಆಫ್ ಫಾರ್ಮಾ ಪಿಎಸ್ಯು ಆಫ್ ಇಂಡಿಯಾ) ಜೊತೆಗೆ ಜೆನೆರಿಕ್ ಔಷಧಿಗಳನ್ನು ಕಡಿಮೆ ದರದಲ್ಲಿ ಖರೀದಿಸಲು ವ್ಯವಸ್ಥೆ ರೂಪಿಸಲು ಸೂಚಿಸಲಾಗಿದೆ. ಇದರಿಂದಾಗಿ, ಸರ್ಕಾರಿ ಆಸ್ಪತ್ರೆಗಳು ಈ ಔಷಧಿಗಳನ್ನು ನೇರವಾಗಿ ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಬಹುದಾಗಿದೆ, ಎಂದು ಆರೋಗ್ಯ ಇಲಾಖೆ ವಿವರಿಸಿದೆ.
ಜನೌಷಧಿ ಯೋಜನೆಯು ದೇಶದ ಲಕ್ಷಾಂತರ ಬಡ ಜನರಿಗೆ ಔಷಧಿಗಳನ್ನು ಕೈಗೆಟುಕುವ ಬೆಲೆಗೆ ಒದಗಿಸುವ ಮಹತ್ವದ ಯೋಜನೆಯಾಗಿದ್ದು, ಇಂತಹ ಕೇಂದ್ರಗಳ ಮುಚ್ಚುವಿಕೆ ರಾಜ್ಯ ಸರ್ಕಾರದ ನೀತಿಯು ಜನರ ಮೇಲಾದ ಪರಿಣಾಮವನ್ನು ಪುನರ್ವಿಮರ್ಶಿಸಲು ಅಗತ್ಯವಿದೆ ಎಂಬ ಅಭಿಪ್ರಾಯ ಹೆಚ್ಚುತ್ತಿದೆ. ಆದರೆ, ಸರ್ಕಾರವು ಜನಸಾಮಾನ್ಯರಿಗೆ ಔಷಧಿ ದೊರೆಯುವಂತೆ ಹೊಸ ವ್ಯವಸ್ಥೆ ರೂಪಿಸುತ್ತಿರುವುದನ್ನು ಗಮನದಲ್ಲಿಟ್ಟರೆ, ಮುಂದಿನ ದಿನಗಳಲ್ಲಿ ಈ ನೀತಿ ಪರ್ಯಾಯವಾಗಿ ಹೇಗೆ ಪರಿಣಾಮಕಾರಿಯಾಗುತ್ತದೆ ಎಂಬುದನ್ನು ಸಮಯವೇ ತೀರ್ಮಾನಿಸಬೇಕು.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications