ಮೊದಲ ಬಾರಿಗೆ ಕರ್ನಾಟಕದಲ್ಲಿ ಸರಕಾರಿ ಒಡೆತನದ ಆಭರಣ ಮಳಿಗೆಗಳನ್ನು (ಜ್ಯುವೆಲ್ಲರಿ ಶಾಪ್) ತೆರೆಯಲು ಕರ್ನಾಟಕ ಸರ್ಕಾರ ಮುಂದಾಗಿದೆ. ಇದರ ಜೊತೆಗೆ ಆಭರಣ ತಯಾರಿಕೆಯ ಘಟಕ (ಜ್ಯುವೆಲರಿ ಪಾರ್ಕ್) ವನ್ನು ಪ್ರಾರಂಭಿಸಲು ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತೊಂದು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.
ಬೆಂಗಳೂರಿನ ಬದಲು ಬೀದರ್ ಅಥವಾ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿಯಲ್ಲಿ ಸುಮಾರು 50 ರಿಂದ 75 ಎಕರೆ ಜಮೀನಿನಲ್ಲಿ ಜ್ಯುವೆಲರಿ ಪಾರ್ಕ್ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ವಿಕಾಸಸೌಧದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಸರ್ಕಾರಿ-ಖಾಸಗಿ ಸಹಭಾಗಿತ್ವದಲ್ಲಿ ಜ್ಯುವೆಲರಿ ಪಾರ್ಕ್ ನಿರ್ಮಾಣವಾಗಲಿದೆ. ಕರ್ನಾಟಕದ ಪ್ರಮುಖ ನಗರಗಳಲ್ಲಿ ಸ್ಥಾಪನೆ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಬೆಂಗಳೂರಿನ ಹೊರ ಭಾಗದಲ್ಲಿ ಜ್ಯುವೆಲರಿ ಪಾರ್ಕ್ ಪ್ರಾರಂಭಿಸುವುದಾದರೆ ತಮಗೆ ತೆರಿಗೆ ವಿನಾಯ್ತಿ ನೀಡಬೇಕೆಂಬ ಸಂಘಟನೆಗಳ ಮನವಿಯನ್ನು ಪುರಸ್ಕರಿಸಿದ ಸಚಿವ ನಿರಾಣಿ ಅವರು, ಕೇಂದ್ರ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಭರವಸೆ ನೀಡಿದರು.
ದೇಶದಲ್ಲೇ ಚಿನ್ನ ಉತ್ಪಾದನೆ ಮಾಡುವ ಏಕೈಕ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕರ್ನಾಟಕದ ಹಟ್ಟಿ ಚಿನ್ನದ ಗಣಿಗಾರಿಕೆಯಲ್ಲಿ ಅದಿರು ತೆಗೆಯುವುದನ್ನು ಖಾಸಗಿಯವರಿಗೆ ನೀಡಲು ಚಿಂತನೆ ನಡೆದಿದೆ ಎಂದು ಸಭೆ ನಂತರ ಹೇಳಿದರು. ಸಭೆಯಲ್ಲಿ ಸಭೆಯಲ್ಲಿ ಬೆಂಗಳೂರು ಜ್ಯುವೆಲರಿ ಅಸೋಸಿಯೇಷನ್, ಕರ್ನಾಟಕ ಜ್ಯುವೆಲರಿ ಫೆಡರೇಷನ್, ಜ್ಯುವೆಲರಿ ಅಸೋಸಿಯೇಷನ್ ಮುಖಂಡರು ಭಾಗವಹಿಸಿದ್ದರು.
More From GoodReturns

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಎಮಿಯಾಕ್ ಟೆಕ್ನಾಲಜೀಸ್ ಐಪಿಒ: ಹೂಡಿಕೆದಾರರ ಮುಗಿಬಿದ್ದ ಭರ್ಜರಿ ಬೇಡಿಕೆ!

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಆರ್ಬಿಐ ರೆಪೋ ದರ ಸ್ಥಿರತೆ: ನಿಮ್ಮ ಇಎಂಐ ಹೊರೆ ಇಳಿಯುತ್ತಾ?

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!

ಆರ್ಬಿಐ ಪಾಲಿಸಿಗೂ ಮುನ್ನ ನಿಮ್ಮ ಬಂಡವಾಳಕ್ಕೆ ಈ ರಕ್ಷಣೆ ಬೇಕೇ?

ಓಂ ಪವರ್ ಟ್ರಾನ್ಸ್ಮಿಷನ್ ಐಪಿಒ: ಹೂಡಿಕೆದಾರರ ಪಾಲಿಗೆ ಲಾಭದಾಯಕವೇ?



Click it and Unblock the Notifications