ಕರ್ನಾಟಕದಲ್ಲೂ ತೆಲಂಗಾಣ ಮಾದರಿಯಲ್ಲಿ ಬ್ರಾಹ್ಮಣರಿಗಾಗಿ ಯೋಜನೆ ಘೋಷಿಸಲಾಗಿದೆ. ಏನು ಆ ಯೋಜನೆ ಏನು ಅಂದರೆ, ಅರ್ಚಕ- ಪುರೋಹಿತ ವೃತ್ತಿಯಲ್ಲಿ ಇರುವವರನ್ನು ಮದುವೆಯಾಗಲು ಮುಂದೆ ಬರುವ ಹೆಣ್ಣುಮಕ್ಕಳ ಹೆಸರಿಗೆ 3 ಲಕ್ಷ ರುಪಾಯಿ ಮೊತ್ತದ ಬಾಂಡ್ ವಿತರಿಸಲಾಗುತ್ತದೆ ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಎಚ್. ಸಚ್ಚಿದಾನಂದ ಸೋಮವಾರ (ಜನವರಿ 4, 2021) ತಿಳಿಸಿದ್ದಾರೆ.
ಇತ್ತೀಚೆಗೆ ಅರ್ಚಕರು, ಪುರೋಹಿತರಿಗೆ ಮದುವೆಗೆ ಹೆಣ್ಣುಮಕ್ಕಳು ಸಿಗುವುದು ಹಾಗೂ ಅವರು ಒಪ್ಪಿಕೊಳ್ಳುವುದು ಕಷ್ಟವಾಗಿದೆ. ಆದ್ದರಿಂದ ಈ ಬಾಂಡ್ ಯೋಜನೆಯನ್ನು ಪರಿಚಯಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಅಂದ ಹಾಗೆ ಮೂರು ವರ್ಷದ ನಂತರ ಬಾಂಡ್ ಹಣವನ್ನು ಫಲಾನುಭವಿಗಳು ಪಡೆಯಬಹುದು ಎಂದಿದ್ದಾರೆ.
ಈ ಯೋಜನೆಗೆ ಜನವರಿ 6ನೇ ತಾರೀಕಿನಂದು ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ. ಈ ಬಾಂಡ್ ಯೋಜನೆ ರೀತಿಯಲ್ಲೇ ಬಡ ಹೆಣ್ಣುಮಕ್ಕಳ ಮದುವೆಗೆ 25 ಸಾವಿರ ರು., ಐದು ಎಕರೆಯೊಳಗೆ ಕೃಷಿ ಜಮೀನು ಇರುವವರಿಗೆ ಕೊಳವೆಬಾವಿ (ಬೋರ್ ವೆಲ್) ಕೊರೆಸುವುದಕ್ಕೆ, ಟ್ರ್ಯಾಕ್ಟರ್ ಖರೀದಿಸುವುದಕ್ಕೆ ಮತ್ತು ಹೈನುಗಾರಿಕೆಗೆ ಧನ ಸಹಾಯ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ 'ವಿಶ್ವಾಮಿತ್ರ ಪ್ರತಿಭಾ ಪುರಸ್ಕಾರ'ವನ್ನು ಪರಿಚಯಿಸಲಾಗಿದೆ. ಇದರಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚಿನ ಅಂಕ ಪಡೆದ ಜಿಲ್ಲೆಗೆ ಮೂವರಂತೆ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಕ್ರಮವಾಗಿ 15, 10 ಮತ್ತು 5 ಸಾವಿರ ರು., ಪದಚಿ ವಿದ್ಯಾರ್ಥಿಗಳಿಗೆ 25 ಸಾವಿರ ರು., ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 50 ಸಾವಿರ ರು. ಶಿಷ್ಯವೇತನ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
More From GoodReturns

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications