ಕರ್ನಾಟಕದ ಪದವೀಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3,000 ರೂ ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯು ರಾಜ್ಯದಲ್ಲಿ ಜಾರಿಗೆ ಬರಲಿದೆ. ಕರ್ನಾಟಕ ಸರ್ಕಾರವು ಈ ಯೋಜನೆಗೆ 250 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದು ಡಿಸೆಂಬರ್ 26 ರಂದು ನೋಂದಣಿ ಪ್ರಾರಂಭವಾಗಿದೆ.
ರಾಜ್ಯಾದ್ಯಂತ 5,29,123 ಪದವೀಧರರು ಮತ್ತು ಡಿಪ್ಲೊಮಾ ಶಿಕ್ಷಣ ಪಡೆದಿರುವರು ಇದ್ದಾರೆ ಎಂದು ಉನ್ನತ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯ ಆಧಾರದ ಮೇಲೆ ಕರ್ನಾಟಕ ಸರ್ಕಾರ ಹೇಳಿದೆ. ಯುವ ನಿಧಿ ಯೋಜನೆಯಡಿ ಪದವಿ ಪಡೆದಿರುವ ನಿರುದ್ಯೋಗಿ ಯುವಕರು ಪ್ರತಿ ತಿಂಗಳು ರೂ. 3000, ಡಿಪ್ಲೊಮಾ ಹೊಂದಿರುವವರು 1,500 ರೂ. ಪಡೆಯಲಿದ್ದಾರೆ.

ಈ ಯೋಜನೆಯು ಕರ್ನಾಟಕದ ಜನತೆಗೆ ಕಾಂಗ್ರೆಸ್ನ ಐದನೇ ಚುನಾವಣಾ ಭರವಸೆಯಾಗಿದೆ. ಪ್ರತಿ ತಿಂಗಳು ಈ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮಾಡಲಾಗುವುದು ಎಂದು ಹೇಳಿದೆ.
ಅರ್ಹತೆಗಳೇನು?
ಯುವ ನಿಧಿ ಯೋಜನೆಯ ಹಣ ಪಡೆಯಲು ಅಭ್ಯರ್ಥಿಗಳು 2022-23 ಶೈಕ್ಷಣಿಕ ವರ್ಷದಲ್ಲಿ ಡಿಪ್ಲೊಮಾ ಅಥವಾ ಪದವಿ ಪಾಸಾಗಿರಬೇಕು. ಕರ್ನಾಟಕದ ನಿವಾಸಿಗಳಾಗಿರಬೇಕು. ಪದವಿ ಅಥವಾ ಡಿಪ್ಲೊಮಾ ಪಾಸಾದ ಬಳಿಕ ಆರು ತಿಂಗಳವರೆಗೆ ಕೆಲಸ ಹೊಂದಿರಬಾರದು.
ಅರ್ಜಿದಾರರು ಎಸ್ಎಸ್ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ ಅಥವಾ ಪದವಿ ಅಂಕಪಟ್ಟಿಗಳನ್ನು ಹೊಂದಿರಬೇಕು. 2018 ರ ಮೊದಲು ನೀಡಲಾದ ಸಿಇಟಿ ನೋಂದಣಿ ಸಂಖ್ಯೆ ಅಥವಾ ಪಡಿತರ ಚೀಟಿಯನ್ನು ವಾಸಸ್ಥಳ ಪರಿಶೀಲನೆ ದಾಖಲೆಯಾಗಿ ಸರ್ಕಾರ ಪರಿಗಣಿಸುತ್ತದೆ.
ಅರ್ಜಿದಾರರು ಯುವ ನಿಧಿಗೆ ಈಗಿನಿಂದಲೇ ಅರ್ಜಿ ಸಲ್ಲಿಸಬಹುದು ಮತ್ತು ಕೋರ್ಸ್ ಪೂರ್ಣಗೊಂಡ ನಂತರ 180-ದಿನಗಳ ಅವಧಿಯವರೆಗೆ ಕಾಯಬೇಕಾಗಿಲ್ಲ. ಸ್ವಯಂ ಉದ್ಯೋಗಿ ಅಥವಾ ಯಾವುದೇ ಸಾರ್ವಜನಿಕ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವ ಅರ್ಜಿದಾರರು ಅರ್ಹರಲ್ಲ.
ಇನ್ನೂ ಉನ್ನತ ಶಿಕ್ಷಣವನ್ನು ಪಡಯುತ್ತಿರುವ/ಪಡೆಯುವ ಅರ್ಜಿದಾರರು ಯೋಜನೆಯ ಪ್ರಯೋಜನಗಳಿಗೆ ಅರ್ಹರಾಗಿರುವುದಿಲ್ಲ. ಅಪ್ರಂಟಿಸ್ ಸಂಬಳ ಪಡೆಯುವವರು ಕೂಡ ಈ ಯೋಜನೆಗೆ ಅರ್ಹರಲ್ಲ. ಅರ್ಜಿದಾರರು ನೀಡುವ ಬ್ಯಾಂಕ್ ವಿವರಗಳು ಆಧಾರ್ ಸಂಖ್ಯೆಗೆ ಜೋಡಣೆಯಾಗಿರಬೇಕು.
ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ
ಅರ್ಹ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಸೇವಾಸಿಂದು ಪೋರ್ಟಲ್ ಮೂಲಕ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಅರ್ಜಿ ಸಲ್ಲಿಸಬಹುದು.
ಅಗತ್ಯವಿರುವ ದಾಖಲೆಗಳು
- ಆಧಾರ್ ಕಾರ್ಡ್
- ನಿವಾಸ ಪ್ರಮಾಣಪತ್ರ
- ಆದಾಯ ಪ್ರಮಾಣಪತ್ರ
- ಶೈಕ್ಷಣಿಕ ಅರ್ಹತೆಯ ದಾಖಲೆಗಳು
- ಬ್ಯಾಂಕ್ ಖಾತೆ ವಿವರಗಳು
More From GoodReturns

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!



Click it and Unblock the Notifications