ಬಡವರ ಪಾಲಿಗೆ ಸರ್ಕಾರ ತಂದ ಯೋಜನೆಗಳಲ್ಲಿ ಅನ್ನಭಾಗ್ಯ (Anna B ಕೂಡಾ ಒಂದು. ಕಡಿಮೆ ದರದಲ್ಲಿ ಅಕ್ಕಿ, ಇನ್ನಿತರ ಸೌಲಭ್ಯಗಳನ್ನು ನೀಡುವುದು ಇದರ ಮುಖ್ಯ ಉದ್ದೇಶವಾಗಿದ್ದು, ಅದಕ್ಕಾಗಿ ಬಿಪಿಎಲ್ ಕಾರ್ಡ್ (BPL Card) ಅನ್ನೂ ಜಾರಿಗೆ ತಂದಿದೆ. ಇದೀಗ ಸರ್ಕಾರ ಬಡವರ ಪಾಲಿಗೆ ಅದೃಷ್ಟದಂತೆ, ಹಿರಿಯರ ಪಾಲಿಗೆ ದೇವರಂತೆ ಬಂದು ಮತ್ತೊಂದು ಯೋಜನೆಯನ್ನು ಜಾರಿಗೆ ತಂದಿದೆ. ಅದೇ "ಅನ್ನ ಸುವಿಧಾ ಯೋಜನೆ" (Anna Suvidha Scheme). ರೇಷನ್ ಅಂಗಡಿಯಲ್ಲಿ ಪ್ರಸ್ತುತ ದೊಡ್ಡ ಸಮಸ್ಯೆಯೆಂದರೆ, ಸರತಿ ಸಾಲು, ಮತ್ತೊಂದು ಸರ್ವರ್ ಸಮಸ್ಯೆ. ಇದರಿಂದ ಹೆಚ್ಚು ಸಮಸ್ಯೆಗೀಡಾಗೋದೆ ಹಿರಿಯ ನಾಗರಿಕರು. ಆದ್ರೆ ಇದೀಗ ಹಿರಿಯ ನಾಗರಿಕರ ಸಮಸ್ಯೆಗೆ ಪರಿಹಾರ ನೀಡಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ ನೋಡಿ.

ಹೌದು, 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಅನುಕೂಲಕ್ಕೆ ಸರಕಾರ ಮಹತ್ವದ ಕ್ರಮ ಕೈಗೊಂಡಿದೆ. ಆ ಪ್ರಕಾರ ಇನ್ಮೇಲೆ ಉಚಿತವಾಗಿ ಮನೆ ಮನೆಗೆ ಪಡಿತರ ಆಹಾರ ಪದಾರ್ಥಗಳನ್ನು ಪೂರೈಕೆಯಾಗಲಿದೆ. ಈ ಯೋಜನೆಯನ್ನು "ಅನ್ನ ಸುವಿಧಾ" ಯೋಜನೆ ಎಂದು ಹೆಸರಿಸಲಾಗಿದೆ.
ಏನಿದು ಅನ್ನ ಸುವಿಧಾ ಯೋಜನೆ?
ಹಿರಿಯ ನಾಗರಿಕರ ಅನುಕೂಲಕ್ಕಾಗಿ ಸರ್ಕಾರ ಅನ್ನಭಾಗ್ಯ ಯೋಜನೆಯ ಉಪಕ್ರಮವಾಗಿ ಅನ್ನ ಸುವಿಧಾ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ ಪ್ರಸ್ತುತ ಅದೆಷ್ಟೋ ಹಿರಿಯ ನಾಗರಿಕರು ಒಬ್ಬಂಟಿಯಾಗಿ ಮನೆಯಲ್ಲಿ ವಾಸಿಸುತ್ತಿರುತ್ತಾರೆ. ಆದರೆ ಕೆಲವರಿಗೆ ಆರೋಗ್ಯದ ಸಮಸ್ಯೆಯಿಂದಲೂ, ಇನ್ನಿತರ ಸಮಸ್ಯೆಗಳಿಂದಲೋ ಅನ್ನಭಾಗ್ಯ ಯೋಜನೆಯಡಿ ಸಬ್ಸಿಡಿ ದರದಲ್ಲಿ ಅಕ್ಕಿ, ಇನ್ನಿತರ ಆಹಾರ ಪದಾರ್ಥಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಅದೇ ಕಾರಣದಿಂದ ಇದೀಗ ಅನ್ನ ಸುವಿಧಾ ಯೋಜನೆಯಡಿ ಸರ್ಕಾರ, ಅಶಕ್ತರಾದ ಫಲಾನುಭವಿಗಳ ಮನೆ ಬಾಗಿಲಿಗೆ ಈ ಅನ್ನಭಾಗ್ಯ ಸೌಲಭ್ಯವನ್ನು ಒದಗಿಸಲು ಮುಂದಾಗಿದೆ.
75 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಕುಟುಂಬಗಳಿಗೆ ಸ್ಥಳೀಯ ನ್ಯಾಯಬೆಲೆ ಅಂಗಡಿಯಬರು ಪಡಿತರ ಸೌಲಭ್ಯವನ್ನು ಮನೆ ಬಾಗಿಲಿಗೆ ತಂದು ಕೊಡುತ್ತಾರೆ. ಇದರಿಂದ ಹಿರಿಯ ನಾಗರಿಕರು ಹೋಗಿ ನ್ಯಾಯಬೆಲೆ ಅಂಗಡಿ ಮುಂದೆ ಗಂಟೆಗಟ್ಟಲೆ ನಿಲ್ಲುವುದು ತಪ್ಪಲಿದೆ.
2025ರ ಮೇ ತಿಂಗಳಲ್ಲಿ ಜಾರಿಗೆ ಬಂದ ಈ ಸೇವೆ ಸದ್ಯ ಜಿಲ್ಲೆ ಜಿಲ್ಲೆಗಳಲ್ಲಿ ಅನುಷ್ಠಾನಕ್ಕೆ ಮುಂದಾಗಿದೆ. ಅಲ್ಲದೇ ಮನೆ ಬಾಗಿಲಿಗೆ ಸೇವೆ ನೀಡುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ, ಪ್ರತೀ ಕುಟುಂಬಕ್ಕೆ ಸರ್ಕಾರವು 50 ರೂ. ಪಾವತಿ ಮಾಡುತ್ತದೆ. ಅಲ್ಲದೇ ಈ ಯೋಜನೆಯ ಫಲಾನುಭವಿಗಳು ಆಗಬೇಕೆಂದರೆ, ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ.
ಮಂಡ್ಯ ಜಿಲ್ಲೆಯಲ್ಲಿ ಆರಂಭ
ಇದೀಗ ಮಂಡ್ಯ ಜಿಲ್ಲೆಯಲ್ಲಿ ಸರ್ಕಾರದ ಅನ್ನ ಸುವಿಧಾ ಯೋಜನೆಯಡಿ 75 ವರ್ಷಕ್ಕಿಂತ ಮೇಲ್ಪಟ್ಟ ಪಡಿತರ ಚೀಟಿ ಹೊಂದಿರುವ ಒಂಟಿ ಸದಸ್ಯರ ಕುಟುಂಬಗಳಿಗೆ ಶೀಘ್ರದಲ್ಲೇ ಮನೆ ಬಾಗಿಲಿಗೆ ಪಡಿತರ ಆಹಾರ ಪದಾರ್ಥಗಳನ್ನು ನೀಡಲು ಮುಂದಾಗಲಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ ತಿಳಿಸಿದ್ದಾರೆ.
More From GoodReturns

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!



Click it and Unblock the Notifications