2020-21ನೇ ಸಾಲಿನ ಆಯವ್ಯಯ ಮಂಡನೆ ಮಾಡಿರುವ ಯಡಿಯೂರಪ್ಪ ಅವರು, ಈ ಬಾರಿ ಮಕ್ಕಳಿಗಾಗಿ ವಿಶೇಷ ಬಜೆಟ್ ಮಂಡಿಸಿದ್ದಾರೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿರುವುದರ ಜೊತೆಗೆ ಶಾಲಾ ಮಕ್ಕಳಿಗೆ ವಿಶೇಷ ಕೊಡುಗೆ ನೀಡಿದ್ದಾರೆ.
ಬಾಲಮಂದಿರಗಳಿಗೆ 7 ಕೋಟಿ ರುಪಾಯಿ, 7 ಹೊಸ ಬಾಲಮಂದಿರಗಳ ಸ್ಥಾಪನೆ ಮಾಡುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ನೆರೆ ಪ್ರದೇಶದ ಅಂಗನವಾಡಿಗಳ ಮರು ನಿರ್ಮಾಣ, 500 ಅಂಧ ವಿದ್ಯಾರ್ಥಿಗಳಿಗೆ ವಿಶೇಷ ಕಿಟ್, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್ ನೀಡುವುದಾಗಿ ಬಜೆಟ್ ನಲ್ಲಿ ತಿಳಿಸಿದ್ದಾರೆ. 5 ಜಿಲ್ಲೆಗಳಲ್ಲಿ ತಾರಾಯಲಗಳ ಸ್ಥಾಪನೆ ಮಾಡಿ, ವಿಜ್ಞಾನ ಪ್ರತಿಭಾ ಶೋಧನೆ ಕಾರ್ಯಕ್ರಮ ನಡೆಸಲಾಗುವುದು. 500 ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣ ನೀಡಲಾಗುವುದು. ಇದಕ್ಕಾಗಿ ಮಾಸಿಕ 1 ಸಾವಿರ ರುಪಾಯಿ ಶಿಷ್ಯ ವೇತನ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇದರ ಜೊತೆಗೆ ಶಾಲಾ ಮಕ್ಕಳಿಗೆ ಏನೆಲ್ಲಾ ಅನುದಾನ ನೀಡಲಾಗಿದೆ ಎಂಬುದು ಈ ಕೆಳಗಿದೆ.
ಶಾಲಾ ಮಕ್ಕಳಿಗಾಗಿ 36,340 ಕೋಟಿ ಮೀಸಲು
ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಮಕ್ಕಳಿಗಾಗಿ ಬಜೆಟ್ನಲ್ಲಿ 36,340 ಕೋಟಿ ರುಪಾಯಿ ಮೀಸಲಿಟ್ಟಿದ್ದು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ 15 ಪರ್ಸೆಂಟ್ರಷ್ಟು ಹಣ ಮೀಸಲಿಟ್ಟಿದೆ.
ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನ
ಮಕ್ಕಳಿಗೆ ಪಠ್ಯವನ್ನು ಹೊರೆಯಾಗಿಸದೆ ಉಲ್ಲಾಸದಿಂದ ಕಲಿಯುವಂತೆ ಮಾಡುವ ಉದ್ದೇಶದಿಂದ ತಿಂಗಳಿನ ಎರಡು ಶನಿವಾರಗಳನ್ನು ಬ್ಯಾಗ್ ರಹಿತ ದಿನಗಳೆಂದು ಪರಿಗಣಿಸಿ "ಸಂಭ್ರಮ ಶನಿವಾರ" ಎಂದು ಆಚರಿಸಲಾಗುವುದು. ಆ ದಿನಗಳಂದು ಮಕ್ಕಳಿಗೆ ಚಟುವಟಿಕೆಗಳ ಮೂಲಕ ದೇಶದ ಉತ್ತಮ ನಾಗರಿಕರಾಗಲು ಅವಶ್ಯವಿರುವ ವಿಷಯಗಳ ಬಗ್ಗೆ ಅರಿವು ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿರುತ್ತದೆ.
ಆಟೋ ಚಾಲಕರ ಮಕ್ಕಳಿಗೆ ವರ್ಷಕ್ಕೆ 2,000 ರುಪಾಯಿ
ಆಟೋ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರತಿ ವರ್ಷ ಪ್ರತಿ ಕುಟುಂಬಕ್ಕೆ 2,000 ರುಪಾಯಿ ನೆರವು ನೀಡುವುದಾಗಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಇದಕ್ಕಾಗಿ 40 ಕೋಟಿ ರುಪಾಯಿ ಅನುದಾನವನ್ನು ನೀಡಲಾಗುವುದು.
ರಾಜ್ಯದಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಬಸ್ ಖರೀದಿ
ರಾಜ್ಯದಲ್ಲಿನ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಸಾರ್ವಜನಿಕ ಸಾರಿಗೆ ಸೇವೆಯನ್ನು ಒದಗಿಸಲು ಕೆಎಸ್ಆರ್ಟಿಸಿ, ಈಶಾನ್ಯ ಹಾಗೂ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗಳಿಂದ 2450 ಹೊಸ ಬಸ್ಗಳನ್ನು ಖರೀದಿಸಲಾಗುತ್ತಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications