ಜುಲೈ 17ರಂದು ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಒಂದಷ್ಟು ಮಹತ್ವದ ಯೋಜನೆಗಳಿಗೆ ತಾತ್ವಿಕ ಅನುಮೋದನೆ ಸಿಕ್ಕಿದೆ. ಇದರಲ್ಲಿ ಬಹುಮುಖ್ಯ ಯೋಜನೆ ಎಂದರೆ, ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆ. ಈ ಪ್ರಮುಖ ಪ್ರಸ್ತಾವನೆಗೂ ರಾಜ್ಯ ಸರ್ಕಾರ ಸಮ್ಮತಿ ನೀಡಿರುವುದು ರಾಜ್ಯಕ್ಕೆ ಒಂದು ದೊಡ್ಡ ಖುಷಿ ಸುದ್ದಿ ಎನ್ನಬಹುದು.

ಪರಮಾಣು ವಿದ್ಯುತ್ ಸ್ಥಾವರಕ್ಕೆ ಹಸಿರು ನಿಶಾನೆ:
ಪರಮಾಣು ವಿದ್ಯುತ್ ಸ್ಥಾವರ ಎಂದರೆ, ಅದೊಂದು ಶುದ್ಧ ಮತ್ತು ಬಲಿಷ್ಠ ಶಕ್ತಿಯ ಮೂಲ ಎನ್ನಬಹುದು. ಹೀಗಾಗಿ ಇದು ಅತ್ಯಂತ ಮಹತ್ವದ ಯೋಜನೆಯಾಗಿದೆ. ವಿದ್ಯುತ್ ಸ್ಥಾವರ ಸ್ಥಾಪನೆಗೆ, ಸಂಪುಟವು ತಾತ್ವಿಕವಾಗಿ ಅನುಮೋದನೆ ನೀಡಿದ್ದು, ದೇಶದ ಶಕ್ತಿಸಾಂದ್ರತೆಗೆ ಕರ್ನಾಟಕವೂ ಪಾಲುದಾರನಾಗಲಿದೆ. ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್ಟಿಪಿಸಿ) ಈಗಾಗಲೇ ವಿಜಯಪುರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳನ್ನು ಪ್ರಸ್ತಾವಿತ ತಾಣಗಳಾಗಿ ಗುರುತಿಸಿತ್ತು.
ಇನ್ನು ಸಚಿವ ಸಂಪುಟ ಸಭೆಯಲ್ಲಿ ಹೆಚ್ಚಿನ ತಾಣಗಳ ಪರಿಶೀಲನೆಗೂ ಸೂಚನೆ ನೀಡಲಾಗಿದೆ. ಇಡೀ ರಾಜ್ಯದ ವ್ಯಾಪ್ತಿಯಲ್ಲಿ ಕಾರ್ಯಸಾಧ್ಯತಾ ಅಧ್ಯಯನ ನಡೆಸಬೇಕು ಎಂದು, NTPCಗೆ ನಿರ್ದೇಶನವನ್ನೂ ಮಾಡಲಾಗಿದೆ. ಹೀಗಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ HK ಪಾಟೀಲ್, ಅಂತಿಮ ನಿರ್ಧಾರ ಅಧ್ಯಯನ ವರದಿಯ ಆಧಾರದ ಮೇಲೆ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಭಾರತದ ಪರಮಾಣು ಶಕ್ತಿ ಗುರಿ:
ಸದ್ಯ ನಮ್ಮ ಭಾರತ ದೇಶದಲ್ಲಿ ಒಟ್ಟು 8 ಪರಮಾಣು ವಿದ್ಯುತ್ ಸ್ಥಾವರಗಳಿವೆ. ಅವುಗಳಲ್ಲಿ 25 ಪರಮಾಣು ರಿಯಾಕ್ಟರ್ಗಳು ಕಾರ್ಯ ನಿರ್ವಹಿಸುತ್ತಿವೆ. ಒಟ್ಟು 8.8 ಗಿಗಾವ್ಯಾಟ್, ವಿದ್ಯುತ್ ಉತ್ಪಾದನೆ ಸಾಮರ್ಥ್ಯವಿದೆ. 2047ರ ವೇಳೆಗೆ ಈ ಸಾಮರ್ಥ್ಯವನ್ನು 100 ಗಿಗಾವ್ಯಾಟ್ಗೆ ವೃದ್ಧಿಪಡಿಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಆಡಳಿತ ಸುಧಾರಣೆಗಾಗಿ ಐದು ಹೊಸ ನಿಗಮಗಳ ರಚನೆಗೆ ಸಂಪುಟ ಒಪ್ಪಿಗೆ ನೀಡಿದೆ. ಇದರಿಂದ ನಗರಸಭೆಗಳ ನಿರ್ವಹಣಾ ದಕ್ಷತೆ ಮತ್ತು ಸೇವಾ ಪೂರೈಕೆ ಉತ್ತಮಗೊಳ್ಳಲಿದೆ ಎಂಬ ನಿರೀಕ್ಷೆಯಿದೆ.
ಹಾವೇರಿಯಲ್ಲಿ ಬಹು-ಉತ್ಪನ್ನ ಘಟಕ:
ಹಾವೇರಿ ಜಿಲ್ಲೆಯ ಯಲವಟ್ಟಿ ಗ್ರಾಮದಲ್ಲಿ 28.3 ಎಕರೆ ಪ್ರದೇಶದಲ್ಲಿ ಮಾವು ಸೇರಿದಂತೆ ತೋಟಗಾರಿಕಾ ಉತ್ಪನ್ನಗಳನ್ನು ಸಂಸ್ಕರಿಸಲು ಬಹು-ಉತ್ಪನ್ನ ಘಟಕವನ್ನು ಸ್ಥಾಪಿಸಲಾಗುವುದು. ಈ ಯೋಜನೆಗೆ ₹35.07 ಕೋಟಿ ವೆಚ್ಚ ನಿರ್ಧರಿಸಲಾಗಿದ್ದು, ಆಹಾರ ಪಾರ್ಕ್ ಯೋಜನೆಯಡಿಯಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಅಭಿವೃದ್ಧಿಗೊಳಿಸಲಾಗುತ್ತದೆ.
ಕೊಪ್ಪಳದಲ್ಲಿ ತೋಟಗಾರಿಕಾ ತಂತ್ರಜ್ಞಾನ ಉದ್ಯಾನವನ:
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಸಿರಿವರ ಗ್ರಾಮದಲ್ಲಿ ₹83.79 ಕೋಟಿ ವೆಚ್ಚದ ತೋಟಗಾರಿಕಾ ತಂತ್ರಜ್ಞಾನ ಉದ್ಯಾನವನವನ್ನು ಸ್ಥಾಪಿಸಲು ಸಂಪುಟ ಅನುಮೋದನೆ ನೀಡಿದೆ. ಇದೂ ಸಹ ಪಿಪಿಪಿ ಮಾದರಿಯಲ್ಲಿಯೇ ಜಾರಿಯಾಗಲಿದೆ.
ಉತ್ತರ ಕರ್ನಾಟಕದ ಐತಿಹಾಸಿಕ ಪ್ರವಾಸಿ ತಾಣ:
ಉತ್ತರ ಕರ್ನಾಟಕದ ಐತಿಹಾಸಿಕ ಪ್ರವಾಸಿ ತಾಣಗಳಾದ ಹಂಪಿ, ಬಾದಾಮಿ, ಐಹೊಳೆ, ಪಟ್ಟದಕಲ್ಲು ಮತ್ತು ವಿಜಯಪುರದ ಪ್ರವಾಸೋದ್ಯಮ ವಲಯವನ್ನು ಅಭಿವೃದ್ಧಿಪಡಿಸಲು ₹166.22 ಕೋಟಿ ರೂ.ಗಳ ಯೋಜನೆಗೆ ಸಂಪುಟ ತಾತ್ವಿಕ ಅನುಮೋದನೆ ನೀಡಿದೆ. ಈ ಯೋಜನೆ ಕರ್ನಾಟಕ ಪ್ರವಾಸೋದ್ಯಮ ಮೂಲಸೌಕರ್ಯ ನಿಗಮದ ಮೂಲಕ DBFOT ಮಾದರಿಯಲ್ಲಿ ಜಾರಿಗೆ ಬರಲಿದೆ.
ಬೆಂಗಳೂರು ನಗರದಿಂದ ಸಂಸ್ಕರಿಸಲಾದ ತ್ಯಾಜ್ಯ ನೀರನ್ನು ಉಪಯೋಗಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ 126 ಕೆರೆಗಳನ್ನು ಲಿಫ್ಟ್ ನೀರಾವರಿ ಮೂಲಕ ತುಂಬಿಸುವ ಐದು ವರ್ಷಗಳ ಆಪರೇಷನ್ ಮತ್ತು ನಿರ್ವಹಣಾ ಯೋಜನೆಗೆ ₹128 ಕೋಟಿ ಮಂಜೂರು ಮಾಡಲಾಗಿದೆ.
ಬೆಳಗಾವಿ ಜಿಲ್ಲೆಯ ಐತಿಹಾಸಿಕ ಕಿತ್ತೂರು ಕೋಟೆ ಆವರಣದಲ್ಲಿ ಪ್ರವಾಸೋದ್ಯಮ ವೃದ್ಧಿಗೆ ₹30 ಕೋಟಿ ವೆಚ್ಚದಲ್ಲಿ ಥೀಮ್ ಪಾರ್ಕ್ ನಿರ್ಮಿಸಲು ಸಂಪುಟ ಮಂಜೂರಿ ನೀಡಿದೆ. ಇದು ಸ್ಥಳೀಯ ಇತಿಹಾಸ ಮತ್ತು ಸಂಸ್ಕೃತಿಯನ್ನು ಪ್ರವಾಸೋದ್ಯಮದ ಮುಖಾಂತರ ಸಮರ್ಥವಾಗಿ ಪ್ರಸ್ತುತಪಡಿಸಲು ನೆರವಾಗಲಿದೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 1894ರ ಭೂಸ್ವಾಧೀನ ಕಾಯ್ದೆಯ ಸೆಕ್ಷನ್ 48(1) ಅಡಿಯಲ್ಲಿ ಹೊರಡಿಸಿದ್ದ 29 ಅಧಿಸೂಚನೆಗಳನ್ನು ಸಂಪುಟ ಹಿಂಪಡೆದಿದೆ. ಈ ಭೂಮಿ ಸ್ವಾಧೀನಗೊಂಡ ನಂತರ ಅನಾವಶ್ಯಕವೆಂದು ಬಿಡಲಾಗಿತ್ತು. ಸಂಬಂಧಿತ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮವನ್ನೂ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.
ಈ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ಹಲವು ನಿರ್ಧಾರಗಳು ಕರ್ನಾಟಕದ ಶಕ್ತಿ ಉತ್ಪಾದನೆ, ಕೃಷಿ ಸಂಸ್ಕರಣೆ, ಪ್ರವಾಸೋದ್ಯಮ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ದಿಕ್ಕು ತೋರಿಸುವಂತಿವೆ. ಮುಂದಿನ ಹಂತಗಳಲ್ಲಿ ಈ ಯೋಜನೆಗಳು ಯಶಸ್ವಿಯಾಗಿ ಜಾರಿಯಾದರೆ ರಾಜ್ಯದ ಆರ್ಥಿಕತೆಯ ಪಕ್ಕದ ಬೆಂಬಲವಾಗುವ ಸಾಧ್ಯತೆ ಬಹಳವಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications