ಕರ್ನಾಟಕದಲ್ಲಿ (Karnataka) ಇತ್ತೀಚೆಗೆ ಕೆಲವು ಜಿಲ್ಲೆಗಳಲ್ಲಿ ಮಳೆ, ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಲು ಕಾಣಿಸಿಕೊಳ್ಳುತ್ತಿದೆ. ಕಳೆದೆರಡು ದಿನಗಳಿಂದ ಆರಂಭವಾದ ಮಳೆರಾಯನ (Rain) ಅಬ್ಬರ, ಇದೀಗ ಕೆಲವು ದಿನಗಳವರೆಗೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಆದರೂ ಕೆಲವು ಜಿಲ್ಲೆಗಳಲ್ಲಿ ತಡೆಯಲಾಗದಷ್ಟು ತಾಪಮಾನ ಏರಿಕೆ ಕಂಡಿದೆ. ಕರಾವಳಿ ಜಿಲ್ಲೆಗಳಲ್ಲಂತೂ ಬಿಸಿಲಿನ ಬೇಗೆಗೆ ಜನ ಬೆಚ್ಚಿಬಿದ್ದಿದ್ದಾರೆ. ಆದರೆ ಇದೀಗ ಹವಾಮಾನ ಇಲಾಖೆ ಕೆಲವೆಡೆ ಮಳೆ ಮುಂದುವರೆಯಲಿದೆ ಎಂದು ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯ ಉತ್ತರ ಶ್ರೀಲಂಕಾ ಕೇಂದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಇದೀಗ ರಾಜ್ಯದ ಹಲವು ಕಡೆಗಳಲ್ಲಿ ಮಳೆ ವಾತಾವರಣ ಕಾಣಿಸಿಕೊಳ್ಳಲಿದೆ ಎಂದು ಹೇಳಲಾಗಿದೆ. ಆದ್ದರಿಂದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೆಯೇ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇದೀಗ ಈ ವಾರದಲ್ಲೂ ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ ಒಣ ಹವೆ!
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಇಂದು ಒಣ ಹವಾಮಾನ ಮುಂದುವರೆಯಲಿದೆ ಎನ್ನಲಾಗಿದೆ. ಬಂಗಾಳಕೊಲ್ಲಿಯಲ್ಲಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ರೆ ಹಗಲಿನಲ್ಲಿ ಬಿಸಿಲು ಹೆಚ್ಚಾಗುವ ನಿರೀಕ್ಷೆಯಿದೆ. ಹಾಗೆಯೇ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಸ್ವಲ್ಪ ಹೆಚ್ಚಾಗಿದ್ದು, ಫೆಬ್ರವರಿ ಅಂತ್ಯದಲ್ಲಿ ಭಾರೀ ಏರಿಕೆ ಕಾಣಲಿದೆ ಎಂದು ಹೇಳಲಾಗಿದೆ.
ಬೆಂಗಳೂರಿನ ಹವಾಮಾನ:
ಬೆಂಗಳೂರು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆ ಪ್ರಕಾರ ಗರಿಷ್ಠ ತಾಪಮಾನ 31 ರಿಂದ 31 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಲಾಗಿದೆ. ಇನ್ನು ಕನಿಷ್ಠ ತಾಪಮಾನ 19 ರಿಂದ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಪ್ರಸ್ತುತ ತಾಪಮಾನ ನಿರೀಕ್ಷೆಗಿಂತಲೂ ಏರಿಕೆಯಲ್ಲಿದ್ದು, ಫೆಬ್ರವರಿ ಅಂತ್ಯದಲ್ಲಿ ಬೇಸಿಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಉತ್ತರ ಒಳನಾಡು ಜಿಲ್ಲೆಗಳಾದ ರಾಯಚೂರು, ಕಲಬುರಗಿ, ಬೀದರ್ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ತಾಪಮಾನ 33 ರಿಂದ 35 ಡಿಗ್ರಿ ಸೆಲ್ಸಿಯಸ್ ಇರಬಹುದು ಎನ್ನಲಾಗಿದೆ. ಅದೇ ರೀತಿ ಕರಾವಳಿ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಜೊತೆಗೆ ಬಿಸಿಲು ಕಾಣಿಸಿಕೊಳ್ಳಲಿದೆ ಎನ್ನಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಚಾಮರಾಜನಗರ, ಹಾಸನ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿರುವ ವಾಯುಭಾರ ಕುಸಿತದ ಪ್ರಭಾವ ಕಡಿಮೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳಲ್ಲಿ ರಾಜ್ಯದಾದ್ಯಂತ ಒಣ ಹವಾಮಾನ ಮುಂದುವರೆಯಲಿದೆ. ಆದರೆ ಕೆಲವು ಜಿಲ್ಲೆಗಳಲ್ಲಿ ಬೆಳಿಗ್ಗೆ ಹಗುರ ಮಂಜು ಅಥವಾ ಮೋಡ ಕವಿದ ವಾತಾವರಣ ಇರಲಿದೆ.
ಬಿಸಿಲಿನ ಬೇಗೆ ಹೆಚ್ಚಾಗಿರುವುದರಿಂದ ಜನರೂ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಹೊರ ಹೋಗುವಾಗ ಸನ್ಸ್ಕ್ರೀನ್, ಬಟ್ಟೆ, ಆರೋಗ್ಯಕರ ಆಹಾರ ಸೇವಿಸುವಂತೆ ಸಲಹೆ ನೀಡಲಾಗಿದೆ.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Bengaluru: ಮಳೆಗಾಲಕ್ಕೂ ಮುನ್ನ ಫೀಲ್ಡ್ಗೆ ಇಳಿದ ಶಾಸಕ ಗೋಪಾಲಯ್ಯ...ಮಹಾಲಕ್ಷ್ಮಿ ಲೇಔಟ್ನಲ್ಲಿ ಕಾಮಗಾರಿಗಳ ಪರಿಶೀಲನೆ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!



Click it and Unblock the Notifications