ಬೇಸಿಲಿನ ಬೇಗೆ ಕರ್ನಾಟಕದ ವಿವಿಧ ಭಾಗದಲ್ಲಿ ಹೆಚ್ಚಳವಾಗುತ್ತಿದೆ. ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಸಿಲಿನ ಝಳ (ತಾಪಮಾನ) ದೆಹಲಿ ತಾಪಮಾನ ಹೆಚ್ಚಾಗಿತ್ತು. ಆದರೆ, ಇನ್ಮುಂದೆ ಬೆಂಗಳೂರು ವಾತಾವರಣ ಕೂಲ್ ಕೂಲ್ ಆಗಲಿದೆ. ಬೆಂಗಳೂರಿನಲ್ಲಿ (Bengaluru rain) ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆಯಾಗಲಿದೆಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಇದಲ್ಲದೆ ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಕೆಲವು ಕಡೆ ಬಿಸಿಲು ಇನ್ನಷ್ಟು ಸುಡಲಿದೆ ಎನ್ನುವ ಎಚ್ಚರಿಕೆಯನ್ನೂ ಕೊಡಲಾಗಿದೆ.
ಹೌದು, ಭಾರತ ಹವಾಮಾನ ಇಲಾಖೆ (IMD) ಮುಂಬರುವ ದಿನಗಳಲ್ಲಿ ಕರ್ನಾಟಕದಾದ್ಯಂತ ಮಳೆಯಾಗುವ ಸಾಧ್ಯತೆ ಎಂದು ಹೇಳಿದೆ. ಬೆಂಗಳೂರು ಮತ್ತು ರಾಜ್ಯದ ದಕ್ಷಿಣ ಭಾಗಗಳಲ್ಲಿ ಮಳೆಗಾಲ ಪೂರ್ವ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಆದರೆ ಉತ್ತರ ಕರ್ನಾಟಕದಲ್ಲಿ (Karnataka Weather) ತೀವ್ರವಾದ ತಾಪಮಾನನ್ನು ಇರಲಿದೆ ಎಂದು ಮಾಹಿತಿಯನ್ನು ತಿಳಿಸಿದೆ.

ಕರ್ನಾಟಕದಲ್ಲಿ ಬಿಸಿಲಿನ ಝಳ ಫೆಬ್ರವರಿ ಎರಡನೇ ವಾರದಿಂದಲೇ ಹೆಚ್ಚಳವಾಗಿದೆ. ಕಳೆದ 10 ದಿನಗಳಿಂದಲೂ ಬಿಸಿಲಿ ಝಳ ಜೋರಾಗಿದೆ. ಈ ರೀತಿ ಇರುವಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಭರ್ಜರಿ ಮಳೆಯಾಗಲಿದೆ.
ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ ಶೇ. 30-40 ರಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಫೆಬ್ರವರಿಯಲ್ಲಿ ತ್ರೀವ ಬಿಸಿಲಿನ ನಂತರ ಬೆಂಗಳೂರು ತಂಪಾಗಲಿದೆ.ಈ ಹೆಚ್ಚುವರಿ ಮಳೆಯು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗಲಿನ ತಾಪಮಾನವನ್ನು ಮಧ್ಯಮಗೊಳಿಸಲು ಸಹಾಯ ಮಾಡುತ್ತದೆ.
ಶೇ. 50-60 ರಷ್ಟು ಹೆಚ್ಚಿನ ಮಳೆ
ನಗರಗದ ಇರರೆ ಭಾಗಗಳಲ್ಲಿ ತಾಪಮಾನದ ಪರಿಣಾಮದಿಂದ ಕೆಲವು ಜನನಿಬಿಡ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಯಾಗಲು ಕಾರಣವಾಗಬಹುದು. ಕರಾವಳಿ ಪ್ರದೇಶಗಳು ಮತ್ತು ಮಲೆನಾಡು ಪ್ರದೇಶವು ಸರಾಸರಿಗಿಂತ ಶೇ. 50-60 ರಷ್ಟು ಹೆಚ್ಚಿನ ಮಳೆಯನ್ನು ಅನುಭವಿಸಲಿದ್ದು, ಈ ಪ್ರದೇಶಗಳಲ್ಲಿ ತಂಪಾಗಿಸುವ ಪರಿಣಾಮಕ್ಕೆ ಕಾರಣವಾಗುತ್ತದೆ. ಉತ್ತರ ಕರ್ನಾಟಕದಲ್ಲಿ ತಾಪಮಾನದ ಅಲೆ ಇರಲಿದೆ.
ಉತ್ತರ ಕರ್ನಾಟಕವು ತೀವ್ರ ತಾಪಾಮಾನಕ್ಕೆ ಈಗಲೇ ಸಿದ್ದರಾಗಿ ಎಂದು ಐಎಂಡಿ ಸೂಚನೆ ನೀಡಿದೆ. ಮಾರ್ಚ್ನಲ್ಲಿ ತಾಪಮಾನವು 43 ರಿಂದ 45 ಡಿಗ್ರಿ ಸೆಲ್ಸಿಯಸ್ವರೆಗೆ ಏರಿಕೆಯಾಗುವ ನಿರೀಕ್ಷೆಯಿದೆ. ಐಎಂಡಿ ಈಶಾನ್ಯ ಜಿಲ್ಲೆಗಳಿಗೆ ತಾಪಮಾನ ಅಲೆಯ ಎಚ್ಚರಿಕೆಯನ್ನು ನೀಡಿದ್ದು, ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದೆ.
ಮಧ್ಯಾಹ್ನ ಹೊರಗಡೆ ಹೋಗುವುದನ್ನು ನಿಲ್ಲಿಸಿ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ದೇಹವನ್ನು ಹೈಡ್ರೀಕರಿಸಿದ ಸ್ಥಿತಿಯಲ್ಲಿರಲು, ಸೂರ್ಯನ ರಕ್ಷಣೆಗಾಗಿ ಪೂರ್ಣ ತೋಳಿನ ಬಟ್ಟೆಗಳನ್ನು ಧರಿಸಲು ಮತ್ತು ಶಾಖಬ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಮಧ್ಯಾಹ್ನದ ಗರಿಷ್ಠ ಶಾಖದ ಸಮಯದಲ್ಲಿ ಹೊರಗಡೆ ಹೋಗುವುದನ್ನು ಕಡಿಮೆ ಮಾಡಿ ಎಂದು ಶಿಫಾರಸು ಸಹ ಮಾಡಿದೆ.
ಬೆಂಗಳೂರಿನ ಹಗಲಿನ ತಾಪಮಾನವು ಸಾಮಾನ್ಯ ಮಿತಿಯಲ್ಲಿಯೇ ಉಳಿಯುವ ಸಾಧ್ಯತೆ ಇದೆ. ಆದರೆ ನಗರದಲ್ಲಿ ರಾತ್ರಿ ವೇಳೆ ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣತೆ ಇರುತ್ತದೆ ಎಂದು ಹವಾಮಾನ ಇಲಾಖೆ ಹಿರಿಯ ವಿಜ್ಞಾನಿ ಸಿ.ಎಸ್. ಪಾಟೀಲ್ ಹೇಳಿದ್ದಾರೆ.
ರಾತ್ರಿ ವೇಳೆ ತಾಪಮಾನವು 1-2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು, ಇದರಿಂದಾಗಿ ಸಂಜೆ ಮತ್ತು ಬೆಳಗಿನ ವೇಳೆ ಅಸಾಮಾನ್ಯವಾಗಿ ಉಷ್ಣತೆ ಇರುತ್ತದೆ.
ಉತ್ತರ ಭಾಗಗಳಲ್ಲಿರುವವರು ಶಾಖ ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸಬೇಕು, ಆದರೆ ಬೆಂಗಳೂರು ಮತ್ತು ದಕ್ಷಿಣ ಪ್ರದೇಶಗಳಲ್ಲಿರುವವರು ಮಳೆಯ ಹೊರತಾಗಿಯೂ ಬೆಚ್ಚಗಿನ ಪರಿಸ್ಥತಿಯನ್ನು ಎದುರಿಸಬೇಕು ಎಂದು ಹೇಳಿದ್ದರೆ.
ಕರಾವಳಿ ಭಾಗದಲ್ಲಿ ಬಿಸಿಲು ಜೋರು
ರಾಜ್ಯದ ಉತ್ತರ ಒಳನಾಡಿನ ಕೊಪ್ಪಳ, ಹಾವೇರಿ, ಬೆಳಗಾವಿ ವಿಮಾನ ನಿಲ್ದಾಣ, ಬಾಗಲಕೋಟೆ ಹಾಗೂ ಧಾರವಾಡದಲ್ಲಿ ಕನಿಷ್ಠ ತಾಪಮಾನವು ಗಣನೀಯವಾಗಿ ಏರಿಕೆ ಕಂಡಿದೆ. ಅಲ್ಲದೆ ಬೀದರ್, ರಾಯಚೂರು ಹಾಗೂ ವಿಜಯಪುರದಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಬಿಸಿಲು ಹೆಚ್ಚಾಗಿತ್ತು. ಕರಾವಳಿಯ ಮಂಗಳೂರು ವಿಮಾನ ನಿಲ್ದಾಣ ಭಾಗದಲ್ಲಿ ಬಿಸಿಲು ಜೋರಾಗಿತ್ತು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ



Click it and Unblock the Notifications