ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಉದ್ಯಮಗಳ ತ್ವರಿತ ಸ್ಥಾಪನೆಗೆ ಅನುಕೂಲ ಮಾಡಿ ಕೊಡಲು ಸರ್ಕಾರ, 'ಕರ್ನಾಟಕ ಕೈಗಾರಿಕಾ ಸೌಲಭ್ಯಗಳ ಕಾಯ್ದೆ 2002ಕ್ಕೆ' ಸುಗ್ರೀವಾಜ್ಞೆ ತರಲು ಮುಂದಾಗಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಕೈಗಾರಿಕೆ ಆರಂಭಿಸಲು ಇದ್ದ ಅಡ್ಡಿಗಳನ್ನು ನಿವಾರಿಸಿ, ಹೂಡಿಕೆ ಹೂಡಲು ಮುಂದೆ ಬರುವ ಕೈಗಾರಿಕೋದ್ಯಮಿಗಳಿಗೆ ಉತ್ತೇಜನ ನೀಡುವತ್ತ ರಾಜ್ಯ ಸರ್ಕಾರ ಮುಂದಾಗಿದೆ.
ತಕ್ಷಣವೇ ಅನುಮತಿ ಸಿಗಲಿದೆ
ಕರ್ನಾಟಕ ಕೈಗಾರಿಕಾ ಸೌಲಭ್ಯಗಳ ಕಾಯ್ದೆ-2002ಕ್ಕೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಸುಗ್ರೀವಾಜ್ಞೆ ತರುತ್ತಿರುವುದರಿಂದ ಕೈಗಾರಿಕೆಗಳ ಸ್ಥಾಪನೆಗೆ ತಕ್ಷಣವೇ ಅನುಮತಿ ಸಿಗಲಿದೆ. ಕೈಗಾರಿಕೆಗಳ ಸ್ಥಾಪನೆಗೆ ಬೇಕಾದ ಎಲ್ಲ ಅನುಕೂಲಕಗಳನ್ನು ಈ ಮೂಲಕ ಉದ್ಯಮಿಗಳಿಗೆ ಮಾಡಿ ಕೊಡಲಾಗುವುದು ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಉದ್ಯೋಗ ಮಿತ್ರ ಪೋರ್ಟಲ್ನಲ್ಲಿ
ಕೈಗಾರಿಕೆಗಳನ್ನು ಸ್ಥಾಪಿಸುವವರು ಉದ್ಯೋಗ ಮಿತ್ರ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಿದ ತಕ್ಷಣ ಜಿಲ್ಲಾ ಸಮಿತಿ ಮತ್ತು ರಾಜ್ಯಮಟ್ಟದ ಉನ್ನತಾಧಿಕಾರ ಸಮಿತಿಗಳು ಒಪ್ಪಿಗೆ ನೀಡಬೇಕು. ಲ್ಯಾಂಡ್ ಆಡಿಟ್ ಸಮಿತಿಯು ಕೈಗಾರಿಕೆ ಸ್ಥಾಪನೆಗಾಗಿ ಅರ್ಜಿದಾರ ನಮೂದಿಸಿದ ಜಮೀನಿನ ಮಾಹಿತಿ ತರಿಸಿಕೊಂಡು ಪರಿಶೀಲಿಸುತ್ತದೆ. ಇವೆಲ್ಲದರ ಪರಿಶೀಲನೆ ಮುಗಿಸಿ ಒಪ್ಪಿಗೆ ನೀಡಿದ ತಕ್ಷಣವೇ ಕೈಗಾರಿಕೆ ಸ್ಥಾಪನೆಗೆ ಚಾಲನೆ ನೀಡಬಹುದಾಗಿದೆ.
ಪ್ರಮಾಣಪತ್ರಗಳು ಸಿಗುವ ತನಕ ಕಾಯಬೇಕಿಲ್ಲ
ಕೈಗಾರಿಕೆ ಸ್ಥಾಪಿಸುವವರು ಕೈಗಾರಿಕಾ ಘಟಕದ ಕಟ್ಟಡ ನಿರ್ಮಾಣ, ಯಂತ್ರೋಪಕರಣ ಸ್ಥಾಪನೆ ಇತ್ಯಾದಿ ಕೆಲಸಗಳನ್ನು ಮುಗಿಸಿಕೊಳ್ಳಬಹುದು. ಕೈಗಾರಿಕೆ ಸ್ಥಾಪನೆಗೆ ಮೊದಲೇ ಪಡೆಯಬೇಕಾಗಿದ್ದ ಪರಿಸರ ಅನುಮತಿ ಸೇರಿದಂತೆ ವಿವಿಧ ಬಗೆಯ ಪ್ರಮಾಣಪತ್ರಗಳು ಸಿಗುವ ತನಕ ಕಾಯಬೇಕಿಲ್ಲ. ಇವುಗಳನ್ನು ಮೂರು ವರ್ಷಗಳೊಳಗೆ ಪಡೆದರೆ ಸಾಕು ಎಂಬ ನಿಯಮವನ್ನು ಸುಗ್ರಿವಾಜ್ಞೆಯಲ್ಲಿ ಸೇರಿಸಲಾಗುತ್ತಿದೆ.
ಗುಜರಾತ್ ಮತ್ತು ರಾಜಸ್ಥಾನದಲ್ಲಿ
ಈಗಾಗಲೇ ಗುಜರಾತ್ ಮತ್ತು ರಾಜಸ್ಥಾನದಲ್ಲಿ ಈ ರೀತಿಯ ನಿಯಮಗಳು ಇವೆ. ಕಾಯ್ದೆ ಅಲ್ಲಿ ಸಣ್ಣ ಉದ್ಯಮಗಳಿಗೆ ಮಾತ್ರ ಅನ್ವಯವಾಗುತ್ತದೆ. ನಮ್ಮಲ್ಲಿ ಎಲ್ಲ ಬಗೆಯ ಉದ್ಯಮಗಳಿಗೂ ಅನ್ವಯವಾಗಲಿದೆ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications