ಭುವನೇಶ್ವರ, ಜೂನ್ 5: ಕೊರೊನಾವೈರಸ್ ಹಾವಳಿಯಿಂದಾಗಿ ಲಕ್ಷಾಂತರ ಕಾರ್ಮಿಕರು ನಗರ ಪ್ರದೇಶಗಳಿಂದ ತಮ್ಮ ಹಳ್ಳಿಗಳ ಕಡೆಗೆ ಮುಖ ಮಾಡುತ್ತಿದ್ದಾರೆ. ಆದರೆ ಅವರಿಗೆ ಅಲ್ಲಿ ಉದ್ಯೋಗದ ಭರವಸೆ ಸಿಗುತ್ತಿಲ್ಲವಾದ್ದರಿಂದ ಅವರು ಮತ್ತೊಂದಿಷ್ಟು ಸಮಸ್ಯೆಗಳಿಗೆ ತೆರೆದುಕೊಳ್ಳುವ ಹಂತದಲ್ಲಿದ್ದಾರೆ.
ಗ್ರಾಮೀಣ ಜನರಿಗೆ ಉದ್ಯೋಗದ ಭರವಸೆ ನೀಡಲು ಚಾಲ್ತಿಗೆ ಬಂದಿರುವ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ನಗರದಿಂದ ಹಳ್ಳಿಗಳಿಗೆ ವಲಸೆ ಬಂದಿರುವವರಿಗೆ ಉದ್ಯೋಗ ನೀಡುತ್ತದೆಯಾದರೂ, ಕಡಿಮೆ ಕೂಲಿ ದರದಿಂದ ಹೆಚ್ಚಿನ ಜನ ಇದಕ್ಕೆ ಮನಸ್ಸು ಮಾಡುತ್ತಿಲ್ಲ.
ಇದಕ್ಕೆ ಪರಿಹಾರ ಕಂಡು ಕೊಂಡಿರುವ ಒಡಿಶಾದ ಕೆಂಜಿಹಾರ್ (Keonjhar) ಜಿಲ್ಲೆಯ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ನಿರುದ್ಯೋಗ ನಿವಾರಿಸಲು ಹೆಚ್ಚಿನ ಕೂಲಿ ದರ (ಕನಿಷ್ಠ ವೇತನ) ನೀಡಿ, ಮನರೇಗಾ ಅಡಿ, ಹಳ್ಳಿಗಳಿಗೆ ವಲಸೆ ಬಂದರಿಗೆ ಉದ್ಯೋಗ ನೀಡಲು ಮುಂದಾಗಿದೆ.
ದೇಶದಲ್ಲೇ ಮೊದಲನೆಯದು
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ತೆಗೆದುಕೊಳ್ಳುವವರಿಗೆ ಹೆಚ್ಚಿನ ಕನಿಷ್ಠ ವೇತನವನ್ನು ನೀಡಲು ಮುಂದಾಗಿರುವ ಕೆಂಜಿಹಾರ್ ಜಿಲ್ಲೆ ದೇಶದಲ್ಲೇ ಮೊದಲನೆಯದು ಎನ್ನಲಾಗಿದೆ. ಕೆಂಜಿಹಾರ್ ಜಿಲ್ಲಾಡಳಿತ ಶುಕ್ರವಾರ ಈ ವಿಷಯವನ್ನು ಟ್ವಿಟ್ಟರ್ನಲ್ಲಿ ಬಹಿರಂಗಪಡಿಸಿದೆ.
ದಿನಕ್ಕೆ 298 ರುಪಾಯಿ ಪಡೆಯಲಿದ್ದಾರೆ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್ಆರ್ಇಜಿಎ) ಅಡಿಯಲ್ಲಿ ಕೆಲಸ ಮಾಡುವವರು ಈ ಯೋಜನೆಯಡಿ ನಿಗದಿತ 207 ರುಪಾಯಿ ಬದಲು ದಿನಕ್ಕೆ 298 ರುಪಾಯಿ ಪಡೆಯಲಿದ್ದಾರೆ ಎಂದು ಕೆಂಜಿಹಾರ್ ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾ ಖನಿಜ ನಿಧಿಯಿಂದ 95 ಕೋಟಿ ವೆಚ್ಚದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ.
ಕನಿಷ್ಠ ವೇತನ ದರಕ್ಕಿಂತ ಕೆಳಗಿರುತ್ತದೆ
ಒಡಿಶಾದ ಗ್ರಾಮೀಣಾಭಿವೃದ್ಧಿ ಇಲಾಖೆ ಮಾಜಿ ಕಾರ್ಯದರ್ಶಿ ಎನ್.ಸಿ.ಸಕ್ಸೇನಾ ಎನ್ನುವರು, ''ಹೆಚ್ಚಿನ ಸಂದರ್ಭಗಳಲ್ಲಿ ಮನರೇಗಾ ವೇತನವು ರಾಜ್ಯದ ಕನಿಷ್ಠ ವೇತನ ದರಕ್ಕಿಂತ ಕೆಳಗಿರುತ್ತದೆ. ಅವರು ಬಯಸಿದರೆ ಹೆಚ್ಚಿನ ಹಣವನ್ನು ವೇತನವಾಗಿ ನೀಡಲು ರಾಜ್ಯ ಸರ್ಕಾರ ಮುಕ್ತವಾಗಿದೆ'' ಎನ್ನುತ್ತಾರೆ.
ಗ್ರಾಮೀಣಾಭಿವೃದ್ಧಿ ಹಿನ್ನೆಲೆಯಲ್ಲಿ ಉತ್ತಮ ಬೆಳವಣಿಗೆ
ಕಂಜಿಹಾರ್ ಜಿಲ್ಲಾಡಳಿ ಕ್ರಮವನ್ನು ಸ್ವಾಗತಿಸಿರುವ ಸಕ್ಸೇನಾ, ''ಕಡಿಮೆ ವೇತನದಲ್ಲಿ ಕೆಲಸ ಬಯಸುವ ಜನರಿಗೆ ಉದ್ಯೋಗವನ್ನು ನೀಡಲು ಸಾಧ್ಯವಾದರೆ ಇದರ ಫಲ ಉತ್ತಮವಾಗಿರುತ್ತದೆ. ಸಾಮಾನ್ಯ ಪ್ರದೇಶಗಳಲ್ಲಿ 100 ದಿನಗಳು ಮತ್ತು ಬುಡಕಟ್ಟು ಪ್ರದೇಶಗಳಲ್ಲಿ 150 ದಿನಗಳು ಕೂಲಿ ನೀಡಬೇಕು. ಆದರೆ, ಮನರೇಗಾದಡಿ ಹಲವು ಕಡೆ ವರ್ಷದಲ್ಲಿ 30 ರಿಂದ 35 ದಿನಗಳು ಮಾತ್ರ ಕೆಲಸ ನೀಡಲಾಗುತ್ತದೆ. ಹೆಚ್ಚಿನ ಕನಿಷ್ಠ ವೇತನದಲ್ಲಿ ಕೆಲಸ ನೀಡುವುದು ಗ್ರಾಮೀಣಾಭಿವೃದ್ಧಿ ಹಿನ್ನೆಲೆಯಲ್ಲಿ ಉತ್ತಮ ಬೆಳವಣಿಗೆ'' ಎನ್ನುತ್ತಾರೆ ಸಕ್ಸೇನಾ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications