ಕೇರಳ ಸರ್ಕಾರದ ಬಹು ಕಾಲದ ಕನಸು ನನಸಾಗಲಿದೆ. ರಾಜ್ಯದ ಸ್ವಂತ ಬ್ಯಾಂಕ್ ಆರಂಭಿಸಬೇಕು ಎಂದಿದ್ದ ಸರ್ಕಾರದ ಉದ್ದೇಶಕ್ಕೆ ಇದ್ದ ತಡೆ ನಿವಾರಣೆಯಾಗಿದೆ. ಜಿಲ್ಲಾ ಕೋ ಆಪರೇಟಿವ್ ಬ್ಯಾಂಕ್ ಗಳನ್ನೆಲ್ಲ ವಿಲೀನ ಮಾಡಿ, ಒಂದು ಬ್ಯಾಂಕ್ ಮಾಡುವ ಆಲೋಚನೆ ಸರ್ಕಾರಕ್ಕೆ ಇತ್ತು. ಆ ನಿರ್ಣಯ ವಿರುದ್ಧ ಹೈ ಕೋರ್ಟ್ ನಲ್ಲಿ ಅರ್ಜಿಗಳನ್ನು ಹಾಕಲಾಗಿತ್ತು. ಅದೀಗ ಕೋರ್ಟ್ ನಿಂದ ತಿರಸ್ಕರಿಸಲಾಗಿದೆ.
ಕೇರಳದ ಸಹಕಾರ ಸಚಿವ ಕದಕಂಪಲ್ಲಿ ಸುರೇಂದ್ರನ್ ಮಾತನಾಡಿ, ಬ್ಯಾಂಕ್ ಆರಂಭದಿಂದ ರಾಜ್ಯದ ಅಭಿವೃದ್ಧಿಗೆ ಸಹಾಯವಾಗುತ್ತದೆ ಎಂದು ಹೇಳಿದ್ದಾರೆ. "ಇದು ಕ್ರಾಂತಿಕಾರಿ ಹೆಜ್ಜೆ. ಇದರಿಂದ ಕೇರಳದ ಬ್ಯಾಂಕಿಂಗ್ ವಲಯದಲ್ಲಿ ಕ್ರಾಂತಿಕಾರಿ ಹೆಜ್ಜೆ ಆಗಲಿದೆ. ಇದು ಕೇರಳ ಬ್ಯಾಂಕ್. ಹೆಸರೇ ಹೇಳುವಂತೆ ಕೇರಳದ ಸ್ವಂತ ಬ್ಯಾಂಕ್" ಎಂದು ಸುರೇಂದ್ರನ್ ಟ್ವೀಟ್ ಮಾಡಿದ್ದಾರೆ.
ಎಲ್ಲವನ್ನೂ ಅಳೆದು- ತೂಗಿ ನೋಡಿದ ನಂತರ ಬ್ಯಾಂಕ್ ಗಳ ವಿಲೀನ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯ ಇಲ್ಲ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ. ಅಂದ ಹಾಗೆ, ಹದಿಮೂರು ಜಿಲ್ಲಾ ಕೋ ಆಪರೇಟಿವ್ ಬ್ಯಾಂಕ್ ಗಳನ್ನು (ಡಿಸಿಬಿಗಳು) ಕೇರಳ ರಾಜ್ಯ ಕೋ ಆಪರೇಟಿವ್ ಬ್ಯಾಂಕ್ ಜತೆ ವಿಲೀನ ಮಾಡಿ, ಕೇರಳ ಬ್ಯಾಂಕ್ ಸ್ಥಾಪಿಸಲು ಪ್ರಸ್ತಾಪ ಮಾಡಲಾಗಿದೆ.

ಮಾಧ್ಯಮದವರ ಜತೆ ಮಾತನಾಡಿದ ಸುರೇಂದ್ರನ್, ಬ್ಯಾಂಕ್ ಸ್ಥಾಪನೆಗೆ ಅಗತ್ಯ ಅಧಿಸೂಚನೆ ಹೊರಡಿಸಲಾಗಿದೆ. ಜಿಲ್ಲಾ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ಆಡಳಿತಗಾರರ ಆಡಳಿತ ಕೊನೆಯಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.
ಕೇರಳ ರಾಜ್ಯದಲ್ಲೇ ಅತಿ ದೊಡ್ಡ ಬ್ಯಾಂಕಿಂಗ್ ವ್ಯವಸ್ಥೆಗೆ ಆರ್ ಬಿಐ ಒಪ್ಪಿಗೆ ನೀಡಿದೆ. ಸಹಕಾರ ವಲಯವನ್ನು ಬಲಪಡಿಸುವ ಕಾರಣಕ್ಕೆ ಈ ನಿರ್ಧಾರ ಮಾಡಲಾಗಿದೆ ಎಂದು ಕೇರಳ ಸರ್ಕಾರ ಹೇಳಿದೆ. ಆದರೆ ವಿಪಕ್ಷಗಳು ಆರೋಪಿಸುವ ಪ್ರಕಾರ, ಸಾಂಪ್ರದಾಯಿಕ ಸಹಕಾರ ಕ್ಷೇತ್ರವನ್ನು ನಾಶಪಡಿಸುವ ಹುನ್ನಾರ ಎನ್ನಲಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications