ಕಿಸಾನ್ ದಿವಸ್ ಅಥವಾ ರಾಷ್ಟ್ರೀಯ ರ್ರೈತ ದಿನಾಚರಣೆಯನ್ನು ಇಂದು ದೇಶದೆಲ್ಲೆಡೆ ಆಚರಿಸಲಾಗುತ್ತದೆ. ದೇಶದ ಆಹಾರ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆಯಲ್ಲಿ ಅನ್ನದಾತರ ಕೊಡುಗೆ ಅಪಾರ. ಈ ದಿನದಂದು ಕೇಂದ್ರ ಸರ್ಕಾರ ರೈತರ ಕಲ್ಯಾಣಕ್ಕಾಗಿ ಕೈಗೊಳ್ಳಲಾಗುತ್ತಿರುವ ವಿವಿಧ ಯೋಜನೆಗಳ ಬಗ್ಗೆ ಅರಿತು ಅವುಗಳ ಲಾಭ ಪಡೆಯಿರಿ.
ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ
ಪಿಎಂ-ಕಿಸಾನ್ ಯೋಜನೆಯ ಜತೆಗೆ ರೈತರ ಆರ್ಥಿಕ ಸಹಾಯಕ್ಕಾಗಿ ಮತ್ತು ವೃದ್ಧಾಪ್ಯವನ್ನು ಸುರಕ್ಷಿತವಾಗಿರಿಸಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಮುಖ ಯೋಜನೆ ಅಂದರೆ ಅದು "ಪಿಎಂ ಕಿಸಾನ್ ಮಾನ್ ಧನ್ ಯೋಜನೆ". ಈ ದೇಶದ ಎಲ್ಲ ಅರ್ಹ ರೈತರಿಗೂ ಪಿಂಚಣಿ ಸೌಲಭ್ಯ ದೊರಕುವಂತೆ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ ಹಾಗೂ ಆಶಯ.

ಈ ಯೋಜನೆಯು ರೈತರು 60 ವರ್ಷವನ್ನು ತಲುಪಿದ ನಂತರ ತಿಂಗಳಿಗೆ ₹ 3,000 ಕನಿಷ್ಠ ಖಚಿತವಾದ ಪಿಂಚಣಿಯ ಭರವಸೆಯನ್ನು ನೀಡುತ್ತದೆ. ಈ ಯೋಜನೆಗೂ ರೈತರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದ್ದು, 2024ರ ನವೆಂಬರ್ 25ರ ವೇಳೆಗೆ 24.66 ಲಕ್ಷಕ್ಕೂ ಹೆಚ್ಚು ರೈತರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.
ದೇಶದ ರೈತರ ಶ್ರೇಯೋಭಿವೃದ್ಧಿಗೆ ಸದಾ ಮಿಡಿಯುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಕೃಷಿ ಕ್ಷೇತ್ರದ ಕಾಯಕಲ್ಪಕ್ಕೆ ಜಾರಿಗೆ ತಂದ ಮಹತ್ವದ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಪ್ರಮುಖವಾದುದು. ಅತಿವೃಷ್ಟಿ ಅಥವಾ ಅನಾವೃಷ್ಟಿ ಇರಲಿ; ಯಾವುದೇ ರೀತಿಯ ಪ್ರಾಕೃತಿಕ ವಿಪತ್ತು ಸಂಭವಿಸಿದರೂ ಮೊದಲು ತೊಂದರೆಗೀಡಾಗುವುದೇ ರೈತರು.
ಇದೇ ಕಾರಣಕ್ಕಾಗಿ ರೈತರ ಬೆಳೆಗಳಿಗೆ ವಿಮೆ ಒದಗಿಸುವ ಈ ಯೋಜನೆಯನ್ನು 2016ರ ಜನವರಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಇಲ್ಲಿವರೆಗೆ ಸುಮಾರು 4 ಕೋಟಿಗೂ ಹೆಚ್ಚು ರೈತರಿಗೆ ಫಸಲ್ ಬಿಮಾ ಯೋಜನೆಯಡಿ 1.65ಲಕ್ಷ ಕೋಟಿ ರೂ. ವಿಮೆ ದೊರಕಿದೆ ಗಮನಾರ್ಹ.
ಕೃಷಿಯಲ್ಲಿ ಮಣ್ಣಿನ ಆರೋಗ್ಯವೇ ಮುಖ್ಯ
ಇನ್ನು ದೇಶದ ರೈತರಿಗೆ ಕೃಷಿ ಭೂಮಿಯ ಫಲವತ್ತತೆ ಕುರಿತು ಅರಿವು ಮೂಡಿಸುವ ಸಲುವಾಗಿ ಮಣ್ಣಿನ ಆರೋಗ್ಯ ಕಾರ್ಡ್ ಯೋಜನೆ ಪ್ರಾರಂಭಿಸಲಾಗಿದ್ದು, 2023-24ನೇ ಸಾಲಿನಲ್ಲಿ 36.61 ಲಕ್ಷ ಮಣ್ಣಿನ ಆರೋಗ್ಯ ಕಾರ್ಡ್ (SHC) ರೈತರಿಗೆ ವಿತರಿಸಲಾಗಿದೆ.
ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ 5 ಕೋಟಿಗೂ ಹೆಚ್ಚು ಮಣ್ಣಿನ ಸ್ಯಾಂಪಲ್ ಪರೀಕ್ಷಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆ ಮೂಲಕ ರೈತರು ಅತ್ಯುತ್ತಮ ಇಳುವರಿ ಪಡೆಯಬೇಕಾದರೆ ಮಣ್ಣಿನ ಆರೋಗ್ಯವೂ ಅಷ್ಟೇ ಮುಖ್ಯ ಎನ್ನುವ ಜಾಗೃತಿಯನ್ನೂ ರೈತರಿಗೆ ನೀಡುವ ಕೆಲಸವನ್ನು ಸರ್ಕಾರದ ಕಡೆಯಿಂದ ಮಾಡಲಾಗುತ್ತಿದೆ.
ಕೃಷಿಗಾಗಿ ಡಿಜಿಟಲ್ ಸಾರ್ವಜನಿಕ ಮೂಲಸೌಕರ್ಯ ಕಲ್ಪಿಸಲು ಡಿಜಿಟಲ್ ಕೃಷಿ ಯೋಜನೆಯನ್ನು ಅಭಿವೃದ್ಧಿ, ಮಾರ್ಪಡಿಸಿದ ಬಡ್ಡಿ ಸಹಾಯ ಯೋಜನೆ (MISS), ಕೃಷಿ ಮೂಲಸೌಕರ್ಯ ನಿಧಿ(AIF), ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (RKVY), ಪ್ರತಿ ಹನಿ ಹೆಚ್ಚು ಬೆಳೆ( Per Drop More Crop) ಎಂಬ ಧ್ಯೇಯ ಹೊಂದಿರುವ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಕೃಷಿ ವಿಸ್ತರಣೆಯ ಉಪ-ಮಿಷನ್ (SMAE), ಕೃಷಿ ಯಾಂತ್ರೀಕರಣದ ಉಪ-ಮಿಷನ್ (SMAM), ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ ಮತ್ತು ಬೆಲೆ ಬೆಂಬಲ ಯೋಜನೆ(MIS-PSS), ರೈತರಿಗೆ ಅವರ ಉತ್ಪನ್ನಗಳಿಗೆ ಲಾಭದಾಯಕ ಬೆಲೆಯನ್ನು ಖಾತ್ರಿಪಡಿಸುವ ಗುರಿಯನ್ನು ಹೊಂದಿರುವ ಸಮಗ್ರ ಯೋಜನೆಯ ಪ್ರಧಾನ ಮಂತ್ರಿ ಅನ್ನದಾತ ಆಯ್ ಸಂರಕ್ಷಣಾ ಅಭಿಯಾನ (PM-AASHA) ಹೀಗೆ ಅನೇಕ ಯೋಜನೆಗಳ ಮೂಲಕ ಕೃಷಿ ಉತ್ಪಾದಕತೆ ಸುಧಾರಿಸುವ ಜತೆಗೆ ರೈತರ ಹಿತಕಾಪಾಡಲು ಹಾಗೂ ಆದಾಯವನ್ನು ಹೆಚ್ಚಿಸುವುದಕ್ಕೆ ಕೇಂದ್ರ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳು ಅಲ್ಲದೇ ಇನ್ನು ಅನೇಕ ಯೋಜನೆಗಳು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಜೊತೆಗೆ ಆಯಾ ರಾಜ್ಯ ಸರ್ಕಾರಗಳು ಕೂಡಾ ರೈತರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಪರಿಚಯಿಸಿದೆ.
ಪ್ರತಿಯೊಬ್ಬ ಅರ್ಹ ರೈತರು ಪ್ರತಿಯೊಂದು ಯೋಜನೆಯ ಫಲಾನುಭವವನ್ನು ಸರಿಯಾದ ರೀತಿ ಪಡೆದುಕೊಂಡರೆ ಮಾತ್ರ ಅಂಥಹ ಯೋಜನೆಗಳು ಫಲಪ್ರದವಾಗುವುದಕ್ಕೆ ಸಾಧ್ಯ. ಈ ನಿಟ್ಟಿನಲ್ಲಿ ರೈತರ ಅನುಕೂಲಕ್ಕಾಗಿ ಜಾರಿಯಲ್ಲಿರುವ ಎಲ್ಲ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಅದನ್ನು ಸದುಪಯೋಗಪಡಿಸಿಕೊಂಡರೆ ರೈತರ ದಿನ ಅರ್ಥಪೂರ್ಣವಾಗುತ್ತದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications