ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ಬುಧವಾರ ಘೋಷಣೆ ಮಾಡಿರುವ ಪ್ರಕಾರ, ಜಾಗತಿಕ ಹೂಡಿಕೆ ಸಂಸ್ಥೆ ಕೆಕೆಆರ್ ನಿಂದ ರಿಲಯನ್ಸ್ ರೀಟೇಲ್ ವೆಂಚರ್ಸ್ ಲಿಮಿಟೆಡ್ (ಆರ್ ಆರ್ ವಿಎಲ್) ನಲ್ಲಿ 5500 ಕೋಟಿ ರುಪಾಯಿ ಹೂಡಿಕೆ ಮಾಡಲಾಗುತ್ತದೆ. ಈ ಮೂಲಕ ರಿಲಯನ್ಸ್ ಇಂಡಸ್ಟ್ರೀಸ್ ನ ಅಂಗ ಸಂಸ್ಥೆಯ ರಿಲಯನ್ಸ್ ರೀಟೇಲ್ ಮೌಲ್ಯ 4.21 ಲಕ್ಷ ಕೋಟಿಗೆ ಮಾಡಿದಂತಾಗುತ್ತದೆ.
ಈಗ ಕೆಕೆಆರ್ ಹೂಡಿಕೆ ಮಾಡುತ್ತಿರುವ ಮೊತ್ತಕ್ಕೆ ರಿಲಯನ್ಸ್ ರೀಟೇಲ್ ವೆಂಚರ್ಸ್ ನಲ್ಲಿ ಕೆಕೆಆರ್ ಗೆ 1.28 ಪರ್ಸೆಂಟ್ ಪಾಲು ದೊರೆತಂತಾಗುತ್ತದೆ (ಫುಲ್ಲಿ ಡೈಲ್ಯೂಟೆಡ್ ಆಧಾರದಲ್ಲಿ). ಈ ತಿಂಗಳಲ್ಲಿ ಈ ವರೆಗೆ ಮುಕೇಶ್ ಅಂಬಾನಿ ರೀಟೇಲ್ ಉದ್ಯಮಕ್ಕೆ 13,050 ಕೋಟಿ ರುಪಾಯಿ ಬಂದಿದೆ. ಅದಕ್ಕಾಗಿ ರಿಲಯನ್ಸ್ ರೀಟೇಲ್ ವೆಂಚರ್ಸ್ ನಿಂದ 3.03 ಪರ್ಸೆಂಟ್ ಈಕ್ವಿಟಿ ಪಾಲು ನೀಡಬೇಕಾಗುತ್ತದೆ.

ಈ ಹಿಂದೆ ಕೆಕೆಆರ್ ನಿಂದಲೇ ರಿಲಯನ್ಸ್ ಗೆ ಸೇರಿದ ಜಿಯೋ ಪ್ಲಾಟ್ ಫಾರ್ಮ್ ನಲ್ಲಿ 11,367 ಕೋಟಿ ರುಪಾಯಿ ಹೂಡಿಕೆ ಮಾಡಲಾಗಿದೆ. ಇದೀಗ ರೀಟೇಲ್ ವ್ಯವಹಾರದಲ್ಲೂ ಹಣ ಹೂಡುವ ಮೂಲಕ ಎರಡನೇ ವಹಿವಾಟು ನಡೆಸಿದಂತಾಗಿದೆ. ಮೊರ್ಗನ್ ಸ್ಟ್ಯಾನ್ಲಿಯು ಆರ್ಥಿಕ ಸಲಹೆಗಾರರಾಗಿ ಹಾಗೂ ಸೈರಿಲ್ ಅಮರ್ ಚಂದ್ ಮಂಗಲ್ ದಾಸ್ ಮತ್ತು ಡೇವಿಸ್ ಪೋಲ್ಕ್ ಅಂಡ್ ವಾರ್ಡ್ ವೆಲ್ ಕಾನೂನು ಸಲಹೆಗಾರರಾಗಿ ರಿಲಯನ್ಸ್ ರೀಟೇಲ್ ಪರ ಇದ್ದರು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications